News Karnataka Kannada
Friday, May 03 2024
ಮನರಂಜನೆ

ನಟ ಮಹೇಶ್ ಬಾಬು ಪುತ್ರಿ ಹೆಸರಿನಲ್ಲಿ ವಂಚನೆ

ನಟ ಮಹೇಶ್ ಅವರ ಮಗಳು ಸಿತಾರಾ ಗಟ್ಟಿಮನೇನಿ ಅವರ ಜನಪ್ರಿಯತೆಯನ್ನು ಬಳಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಕೆಲವು ವಂಚಕರು ಅಮಾಯಕರ ವಂಚನೆಗೆ ಇಳಿದಿದ್ದಾರೆ. ಮಹೇಶ್ ಬಾಬು ಅವರ ತಂಡ ಈಗಾಗಲೇ ಈ ಕುರಿತಂತೆ ಪೊಲೀಸರಿಗೆ ದೂರು ನೀಡಿದ್ದಾರೆ. ಅಲ್ಲದೆ, ಸಿತಾರಾ ಅವರ ತಾಯಿ, ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಈ ವಂಚನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಎಚ್ಚರಿಕೆ ಸಂದೇಶವನ್ನು ಸಹ ಹಂಚಿಕೊಂಡಿದ್ದಾರೆ.
Photo Credit : News Kannada

ನಟ ಮಹೇಶ್ ಅವರ ಮಗಳು ಸಿತಾರಾ ಗಟ್ಟಿಮನೇನಿ ಅವರ ಜನಪ್ರಿಯತೆಯನ್ನು ಬಳಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಕೆಲವು ವಂಚಕರು ಅಮಾಯಕರ ವಂಚನೆಗೆ ಇಳಿದಿದ್ದಾರೆ. ಮಹೇಶ್ ಬಾಬು ಅವರ ತಂಡ ಈಗಾಗಲೇ ಈ ಕುರಿತಂತೆ ಪೊಲೀಸರಿಗೆ ದೂರು ನೀಡಿದ್ದಾರೆ. ಅಲ್ಲದೆ, ಸಿತಾರಾ ಅವರ ತಾಯಿ, ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಈ ವಂಚನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಎಚ್ಚರಿಕೆ ಸಂದೇಶವನ್ನು ಸಹ ಹಂಚಿಕೊಂಡಿದ್ದಾರೆ.

ಓರ್ವ ವ್ಯಕ್ತಿ , ಸಿತಾರಾ ಗಟ್ಟಿಮನೇನಿಯ ಚಿತ್ರ, ವಿಡಿಯೋ ಹಾಗೂ ಹೆಸರು ಬಳಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಕೆಲವು ಲಿಂಕ್​ಗಳನ್ನು ಹಂಚಿಕೊಳ್ಳುತ್ತಿದ್ದಾನೆ. ಅಲ್ಲದೆ ಬಂಡವಾಳ ಹೂಡಿಕೆ ಯೋಜನೆಗಳ ಮಾರಾಟ, ಲೋನ್ ಕೊಡಿಸುವುದಾಗಿ ಹೇಳಿ ಲಿಂಕ್ ಕಳಿಸುವುದು, ಷೇರು ಮಾರುಕಟ್ಟೆಗೆ ಸಂಬಂಧಿಸಿದ ಹೂಡಿಕೆ ಐಡಿಯಾಗಳನ್ನು ಕೊಡುವುದಾಗಿ ಹೇಳಿಕೊಂಡು ಹಲವರನ್ನು ಸಂಪರ್ಕ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಇದೀಗ ಸಿತಾರಾ ಗಟ್ಟಿಮನೇನಿ ಹೆಸರಿನಲ್ಲಿ ವಂಚನೆ ಎಸಗುತ್ತಿರುವವರ ಮೂಲ ಪತ್ತೆ ಹಚ್ಚಿ ಬಂಧಿಸುವ ಪ್ರಯತ್ನ ಜಾರಿಯಲ್ಲಿದೆ. ಜನರು ಸಾಮಾಜಿಕ ಜಾಲತಾಣದಲ್ಲಿ ತಮಗೆ ಬಂದ ಹೂಡಿಕೆ ಮಾಹಿತಿಯನ್ನು ನಿಜವೆಂದು ನಂಬುವ ಮೊದಲು ಅದರ ಸತ್ಯಾಸತ್ಯತೆಯನ್ನು ಪರಿಶೀಲನೆ ಮಾಡಿಕೊಳ್ಳಿ ಎಂದು ಮಹೇಶ್ ಬಾಬು ತಂಡ ಹೇಳಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು