ಮಲಯಾಳಂ ನಟ ದಿಲೀಪ್ ಮತ್ತು ಅವರ ಸಹೋದರನ ಮನೆಗಳು ಮತ್ತು ಅವರ ಗ್ರ್ಯಾಂಡ್ ಪ್ರೊಡಕ್ಷನ್ ಕಂಪನಿಯ ಕಚೇರಿಯ ಮೇಲೆ ಗುರುವಾರ ಕೇರಳ ಪೊಲೀಸರ ಅಪರಾಧ ವಿಭಾಗದ ತಂಡವು ದಾಳಿ ನಡೆಸಿದ್ದಾರೆ.
2017 ರಲ್ಲಿ ನಟಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನಟ ದಿಲೀಪ್ ತನಿಖಾ ಅಧಿಕಾರಿಗಳಿಗೆ ಬೆದರಿಕೆ ಒಡ್ಡಿದ್ದಾನೆ ಎಂದು ಇತ್ತೀಚಿನ ಪ್ರಕರಣ ದಾಖಲಾಗಿದ್ದು, ಇದರ ಬೆನ್ನಲ್ಲೇ ದಾಳಿ ನಡೆದಿದೆ.
ಮೂಲಗಳ ಪ್ರಕಾರ, ನ್ಯಾಯಾಲಯದ ಆದೇಶ ಮತ್ತು ನಿರ್ದೇಶಕ ಬಾಲಚಂದ್ರ ಕುಮಾರ್ ಅವರು ಅಪರಾಧ ವಿಭಾಗಕ್ಕೆ ನೀಡಿದ ಹೇಳಿಕೆಯ ಆಧಾರದ ಮೇಲೆ ದಾಳಿ ನಡೆಸಲಾಗಿದೆ.
ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ದಿಲೀಪ್ ವಿರುದ್ಧ ಇತ್ತೀಚೆಗೆ ಮಾಧ್ಯಮಗಳ ಮೂಲಕ ಚಕಿತಗೊಳಿಸುವ ಸಂಗತಿಗಳನ್ನು ಕುಮಾರ್ ಬಹಿರಂಗಪಡಿಸಿದ್ದರು. ಸಾಕ್ಷಿಗಳ ಮೇಲೆ ದಿಲೀಪ್ ಪ್ರಭಾವ ಬೀರಿದ್ದಾರೆ ಎಂಬುದನ್ನು ಸಾಬೀತುಪಡಿಸಲು ಡಿಜಿಟಲ್ ಸೇರಿದಂತೆ ಹಲವು ಸಾಕ್ಷ್ಯಗಳಿವೆ ಎಂದು ಅವರು ಹೇಳಿದ್ದರು.