News Karnataka Kannada
Sunday, May 05 2024
ಮಲಯಾಳಂ

ವೇದಿಕೆ ಮೇಲೆ ಹಾಡುತ್ತಿರುವಾಗ ಕುಸಿದು ಬಿದ್ದು ಪ್ರಾಣಬಿಟ್ಟ ಮಳೆಯಾಳಂ ಗಾಯಕ ಎಡವ ಬಶೀರ್

Bashir
Photo Credit :

ಮಲಯಾಳಂ: ಪ್ರಸಿದ್ಧ ಗಾಯಕ ಎಡವ ಬಶೀರ್ ವೇದಿಕೆ ಮೇಲೆ ಸಂಗೀತ ಕಚೇರಿ ನೀಡುವಾಗಲೇ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.

ಕೇರಳದ ಅಲಪ್ಪುಳ ಜಿಲ್ಲೆಯಲ್ಲಿ ಆಯೋಜಿಸಲಾಗಿದ್ದ ಬ್ಲೂ ಡೈಮಂಡ್ಸ್ ಆರ್ಕೆಸ್ಟ್ರಾದ ಗೋಲ್ಡನ್ ಜುಬಿಲಿ ಸಮಾರಂಭದಲ್ಲಿ ಈ ಅವಘಡ ಸಂಭವಿಸಿದೆ.

1978ರಲ್ಲಿ ಬಿಡುಗಡೆಯಾದ ಹಿಂದಿ ಚಲನಚಿತ್ರ ಟೂಟ್ ಟಾಯ್ಸ್‌ ನಲ್ಲಿ ಖ್ಯಾತ ಗಾಯಕ ಕೆ.ಜೆ.ಜೇಸುದಾಸ್ ಹಾಡಿದ್ದ ಮಾನ್ ಹೋ ತುಮ್ ಬೇಹದ್ ಹಸೀನ್… ಹಾಡನ್ನು ಹಾಡುತ್ತಿದ್ದ ಎಡವ ಬಶೀರ್ ವೇದಿಕೆ ಮೇಲೆಯೇ ಕುಸಿದುಬಿದ್ದಿದ್ದಾರೆ.

ಅದನ್ನು ಗಮನಿಸಿದ ಪ್ರೇಕ್ಷಕರು ತಕ್ಷಣವೇ ಅವರತ್ತ ಓಡಿಬಂದು ಬಶೀರ್ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಾಕಾರಿಯಾಗದೇ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಬಶೀರ್ ತಮ್ಮ ಶಾಲಾ ದಿನಗಳಿಂದಲೇ ಸಂಗೀತ ಕ್ಷೇತ್ರದಲ್ಲಿ ತೊಡಗಿಕೊಂಡಿದ್ದರು. ಸಂಗೀತ ಸಾಧನೆಗಾಗಿ ಅವರು ಹಲವಾರು ಪ್ರಶಸ್ತಿಗಳಿಗೆ ಪಾತ್ರರಾಗಿದ್ದಾರೆ. ‘ರಹಮತ್ತುಗಳ ನೀರಂಜೋರು’, ‘ಮಂಜನಿಂಜಿಮನೆ’, ‘ಮರುಭೂಮಿಯಮೀ’ ಮುಂತಾದ ಕೆಲವು ಜನಪ್ರಿಯ ಹಾಡುಗಳಿಗೆ ಅವರು ಧ್ವನಿಯಾಗಿದ್ದರು.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಗಾಯಕಿ ಕೆ.ಎಸ್.ಚಿತ್ರಾ ಮೊದಲಾದ ಗಣ್ಯರು ಟ್ವಿಟರ್ ನಲ್ಲಿ ಎಡವ ಬಶೀರ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು