ದಕ್ಷಿಣ ಭಾರತ ಸಿನಿರಂಗದಲ್ಲಿ ʼಮಲರ್ʼ ಎಂದೇ ಖ್ಯಾತಿ ಗಳಿಸಿರುವ ಸಾಯಿ ಪಲ್ಲವಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ತಮಿಳು, ಮಲಯಾಳಂ ಮತ್ತು ತೆಲುಗು ಚಿತ್ರರಂಗದಲ್ಲಿ ಸಾಕಷ್ಟು ಪ್ರಖ್ಯಾತಿ ಗಳಿಸಿರುವ ಸಾಯಿ ಪಲ್ಲವಿ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಂದ ಭರಪೂರ ಶುಭಾಶಯಗಳು ಹರಿದುಬರುತ್ತಿದೆ.
ತಮಿಳುನಾಡಿನ ಕೊಯಂಬತ್ತೂರಿನ ಕೋಟಗಿರಿಯಲ್ಲಿ 1992ರ ಮೇ 9ರಂದು ಜನಿಸಿದ ಸಾಯಿ ಪಲ್ಲವಿ ಮೂಲತಃ ವೃತ್ತಿಯಲ್ಲಿ ವೈದ್ಯೆ. ಜಾರ್ಜಿಯಾದ ಟಿಬಿಲಿಸಿ ಸ್ಟೇಟ್ ಮೆಡಿಕಲ್ ಯುನಿವರ್ಸಿಟಿಯಿಂದ 2012ರಲ್ಲಿ ಎಂಬಿಬಿಎಸ್ ಪದವಿಯನ್ನು ಪಡೆದಿದ್ದಾರೆ.
ಮೊದಲ ಬಾರಿಗೆ ಸಾಯಿಪಲ್ಲವಿ ಚಿತ್ರರಂಗಕ್ಕೆ ಕಾಲಿಟ್ಟಿದ್ದು 2015ರಲ್ಲಿ ಬಿಡುಗಡೆಯಾದ ಮಲಯಾಳಂನ ಫೇಮಸ್ ಸಿನಿಮಾ ʼಪ್ರೇಮಂʼ ಮೂಲಕ. ಈ ಚಿತ್ರದಲ್ಲಿ ಮಲರ್ ಎಂಬ ಪಾತ್ರಕ್ಕೆ ಬಣ್ಣ ಹಚ್ಚಿದ ಇವರು ಆ ಬಳಿಕ ದಕ್ಷಿಣ ಭಾರತದ ಪ್ರಖ್ಯಾತ ನಟಿಯರಲ್ಲಿ ಒಬ್ಬರಾದರು. ಬಳಿಕ ದುಲ್ಕರ್ ಸಲ್ಮಾನ್ ಅಭಿನಯದ ಕಾಳಿ ಚಿತ್ರದಲ್ಲಿಯೂ ಬಣ್ಣ ಹಚ್ಚಿದ್ದಾರೆ. ಇನ್ನು ತೆಲುಗು ಚಿತ್ರರಂಗಕ್ಕೆ ಕಾಲಿಟ್ಟ ಅವರು, ವರುಣ್ ತೇಜ ಜೊತೆ ಫಿದಾ ಸಿನಿಮಾದಲ್ಲಿ ಅಭಿನಿಯಿಸಿದರು. ಈ ಚಿತ್ರ ಭರ್ಜರಿ ಸಕ್ಸಸ್ ಕಂಡಿತ್ತು. ಇನ್ನು 2018ರಲ್ಲಿ ತಮಿಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಪಲ್ಲವಿ, ದಿಯಾ ಸಿನಿಮಾದಲ್ಲಿ ಅಭಿನಯಿಸಿದರು. ನಟಿಸಿದ ಎಲ್ಲಾ ಸಿನಿಮಾಗಳು ಭರ್ಜರಿ ಹಿಟ್ ಸಾಧಿಸಿದೆ ಎನ್ನಬಹುದು.
ಇನ್ನು ಇತ್ತೀಚೆಗೆ ಬಿಡುಗಡೆಯಾದ ತೆಲುಗಿನ ಶ್ಯಾಮ ಸಿಂಗ್ ರಾಯ್ ಸಿನಿಮಾದಲ್ಲಿ ಇವರ ಅಭಿನಯ ಎಲ್ಲರ ಮನಗೆದ್ದಿದ್ದಂತು ಸುಳ್ಳಲ್ಲ. ನೃತ್ಯಗಾರ್ತಿಯಾಗಿ, ನಟಿಯಾಗಿ ಜೊತೆಗೆ ಓರ್ವ ವೈದ್ಯೆಯಾಗಿ ಕಾರ್ಯ ನಿರ್ವಹಿಸುತ್ತಿರುವ ಸಾಯಿ ಪಲ್ಲವಿಯವರಿಗೆ ಇಂದು 30ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ.
ಸೋಷಿಯಲ್ ಮೀಡಿಯಾದಲ್ಲಿ ಹಸಿ ಬಿಸಿ ಫೋಟೋಗಳನ್ನು ಶೇರ್ ಮಾಡುತ್ತ, ಹಲ್ಚಲ್ ಸೃಷ್ಟಿಸುತ್ತಿದ್ದ ಕಿರುತೆರೆ ನಟಿ ಜ್ಯೋತಿ ರೈ, ಇದೀಗ ಖಾಸಗಿ…
ಹುಬ್ಬಳ್ಳಿಯ ಕೇಶ್ವಾಪುರದ ಸರ್ವೋದಯ ಸರ್ಕಲ್ ನಿಂದ ದೇಸಾಯಿ ಬ್ರಿಡ್ಜ್ ವರೆಗೂ ಅಪರಿಚಿತ ವಾಹನವೊಂದರ ಇಂಜಿನ್ ಆಯಿಲ್ ಲೀಕ್ ಆಗಿ ರಸ್ತೆಯ…
ಚಂಡಮಾರುತದ ಪ್ರಭಾವದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಮುಂದಿನ ಆದೇಶದವರೆಗೆ ಮಲ್ಪೆಯಲ್ಲಿ ಎಲ್ಲ ರೀತಿಯ ವಾಟರ್ ಸ್ಪೋರ್ಟ್ಸ್ ಸ್ಥಗಿತಗೊಳಿಸಲಾಗಿದೆ.
ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಪರೀಕ್ಷೆ ಬರೆದ 6,31,204 (73.40)ವಿದ್ಯಾರ್ಥಿಗಳು ತೇರ್ಗಡೆ ಹೊಂದಿದರೆ,…
ಇಂದು ರಾಜ್ಯದೆಲ್ಲಡೆ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಬಿಡುಗಡೆಯಾದ ಹಿನ್ನಲೆ ವಿದ್ಯಾರ್ಥಿನೋರ್ವ ಪರೀಕ್ಷೆ ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾಗಿದ್ದಾನೆ. ಘಟನೆ ಬೆಂ.ಗ್ರಾಮಾಂತರ ಜಿಲ್ಲೆ…
ಬಾಟಲಿಯಿಂದ ಹೊಡೆದು ಯುವಕನೋರ್ವನ ಕೊಲೆ ಮಾಡಿರುವ ಘಟನೆ ಮುಂಡರಗಿ ತಾಲೂಕಿನ ಕೆಎಚ್ಬಿ ಹೊಸ ಕಾಲೊನಿಯಲ್ಲಿ ನಡೆದಿದೆ.ಕೊಪ್ಪಳದ ಹೈದರ್ ತಾಂಡಾದ ನಿವಾಸಿ…