ರಿಲೀಸ್​ಗೂ ಮೊದಲೇ ವಿವಾದ ಸೃಷ್ಟಿ ಮಾಡಿಕೊಂಡ ಮಮ್ಮೂಟಿ ನಟನೆಯ ‘ಬ್ರಹ್ಮಯುಗಂ’

ಬೆಂಗಳೂರು: ನಟ ಮಮ್ಮೂಟಿ ಅವರ ನಟನೆಯ ‘ಬ್ರಹ್ಮಯುಗಂ’ ಸಿನಿಮಾ ಇಂದ  ಥಿಯೇಟರ್ ಮೂಲಕ ರಿಲೀಸ್ ಆಗಿದೆ. ಈ ಚಿತ್ರ ರಿಲೀಸ್​ಗೂ ಮೊದಲೇ ವಿವಾದ ಸೃಷ್ಟಿ ಮಾಡಿದೆ.

ಈ ಚಿತ್ರದ ಪಾತ್ರದ ವಿರುದ್ಧ ಪುಂಜಮೋನ್ ಇಲ್ಲಂ ಎಂಬುವವರು ಕೇರಳದ ಹೈಕೋರ್ಟ್​ನಲ್ಲಿ ಕೇಸ್ ದಾಖಲು ಮಾಡಿದ್ದರು. ಈ ಕಾರಣಕ್ಕೆ ಕೊನೆಯ ಕ್ಷಣದಲ್ಲಿ ಮಮ್ಮೂಟಿ ನಿರ್ವಹಿಸಿದ್ದ ಪಾತ್ರದ ಹೆಸರನ್ನು ಬದಲಾಯಿಸಲಾಗಿದೆ.

ಈ ಮೊದಲು ಮಮ್ಮೂಟಿ ನಿರ್ವಹಿಸಿದ್ದ ಪಾತ್ರದ ಹೆಸರು ಕುಂಜಮೋನ್ ಎಂದಿತ್ತು. ಈಗ ಪುಂಜಮೋನ್ ಅವರು ತಮ್ಮ ಕುಟುಂಬದ ಗೌರವಕ್ಕೆ ಧಕ್ಕೆ ಉಂಟಾಗಿದೆ ಎಂದು ಹೇಳಿದ್ದಾರೆ. ಮಾಟ ಮಂತ್ರದ ವಿಚಾರದಲ್ಲಿ ನಮ್ಮ ಕುಟುಂಬವನ್ನು ಎಳೆದು ತರಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಈ ಕಾರಣಕ್ಕೆ ಕುಂಜಮೋನ್ ಎಂದಿದ್ದ ಪಾತ್ರದ ಹೆಸರನ್ನು ಕೊಡುಮೋನ್ ಎಂದು ಬದಲಾಯಿಸಲಾಗಿದೆ.

ಈ ವಿಚಾರಕ್ಕೆ ಸಿನಿಮಾ ತಂಡದವರು ಪ್ರತಿಕ್ರಿಯೆ ನೀಡಿದ್ದಾರೆ. ಈಗಾಗಲೇ ಮಮ್ಮೂಟಿ ಪಾತ್ರದ ಹೆಸರನ್ನು ಬದಲಾಯಿಸಲಾಗಿದೆ ಎಂದು ಕೋರ್ಟ್​ಗೆ ತಂಡ ತಿಳಿಸಿದೆ. ಈ ವಿಚಾರವನ್ನು ಅವರು ಸೆನ್ಸಾರ್ ಮಂಡಳಿಯ ಗಮನಕ್ಕೂ ತಂದಿದ್ದಾರೆ. ಹೀಗಾಗಿ, ಕೇರಳ ಹೈಕೋರ್ಟ್ ಅರ್ಜಿಯನ್ನು ಕ್ಲೋಸ್ ಮಾಡಿದೆ.

‘ಬ್ರಹ್ಮಯುಗಂ’ ಸಿನಿಮಾನ ರಾಹುಲ್ ಸದಾಶಿವನ್ ಅವರು ನಿರ್ದೇಶನ ಮಾಡಿದ್ದಾರೆ. ಹಾರರ್ ಥ್ರಿಲ್ಲರ್ ಶೈಲಿಯಲ್ಲಿ ಸಿನಿಮಾ ಮೂಡಿ ಬಂದಿದೆ. ಮಮ್ಮೂಟಿ ಜೊತೆ ಸಿದ್ಧಾರ್ಥ್ ಭರತನ್, ಅಮಲ್ದಾ ಲಿಜ್, ಅರ್ಜುನ್ ಅಶೋಕನ್ ಮೊದಲಾದವರು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Ashika S

Recent Posts

ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ ತಂಡ ವೇಗದ ಬೌಲರ್​ : ಕಾರಣ ಇಲ್ಲಿದೆ

ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು…

9 mins ago

ಹಾಡಹಗಲೇ ಮನೆಗೆ ನುಗ್ಗಿ‌ದ ದುಷ್ಕರ್ಮಿಗಳು : ಜೀಪ್​ಗೆ ಬೆಂಕಿ ಹಚ್ಚಿ ಪರಾರಿ

ಹಾಡಹಗಲೇ ದುಷ್ಕರ್ಮಿಗಳು ಮನೆಗೆ ನುಗ್ಗಿ‌ ಟಿವಿ, ಫ್ರಿಡ್ಜ್ ಹಾಳು ಮಾಡಿರುವ ಘಟನೆ ಪಂಚಾಕ್ಷರಿ ನಗರದಲ್ಲಿ ನಡದಿದೆ.

12 mins ago

ಮ್ಯಾಗಿ ತಿಂದು 10 ವರ್ಷದ ಬಾಲಕ ಸಾವು : 6 ಮಂದಿ ಅಸ್ವಸ್ಥ

ಉತ್ತರ ಪ್ರದೇಶದ ಪಿಲಿಬಿತ್‌ ಜಿಲ್ಲಯಲ್ಲಿ ಒಂದು ದಾರುಣ ಘಟನೆ ನಡೆದಿದ್ದು 10 ವರ್ಷದ ಅಪ್ರಾಪ್ತ ಬಾಲಕ ಅನ್ನದೊಂದಿಗೆ ಮ್ಯಾಗಿ ತಿಂದ…

27 mins ago

ಪಲ್ಟಿಯಾದ ಲಾರಿಯಲ್ಲಿ 7 ಕೋ. ಹಣ ಪತ್ತೆ: ವಶಕ್ಕೆ ಪಡೆದ ಪೊಲೀಸರು

ಪಲ್ಟಿಯಾದ ಲಾರಿಯಲ್ಲಿ ಬರೋಬ್ಬರಿ 7 ಕೋಟಿ ಹಣವನ್ನು ವಶಕ್ಕೆ ಪಡೆದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

42 mins ago

ಪುಸ್ತಕದಲ್ಲಿ ಬೈಬಲ್‌ ಪದ ಬಳಕೆ : ಕರೀನಾ ಕಪೂರ್‌ಗೆ ಕೋರ್ಟ್‌ ನೋಟಿಸ್‌

ಗರ್ಭಧಾರಣೆಗೆ (ಪ್ರಗ್ನೆನ್ಸಿ) ಸಂಬಂಧಿಸಿದಂತೆ ಬರೆದ ಪುಸ್ತಕದ ಶೀರ್ಷಿಕೆಯಲ್ಲಿ ‘ಬೈಬಲ್’ ಪದ ಬಳಕೆ ಮಾಡಿದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ಬಾಲಿವುಡ್ ನಟಿ ಕರೀನಾ…

50 mins ago

ಭಯೋತ್ಪಾದಕ ಕೃತ್ಯದಲ್ಲಿ ಭಾಗಿ: ಉಗ್ರರ ಇಬ್ಬರು ಸಹಚರರ ಬಂಧನ

ಉಗ್ರರ ಇಬ್ಬರು ಸಹಚರರನ್ನು ಜಮ್ಮು–ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

1 hour ago