Categories: ಮನರಂಜನೆ

ಮಂಗಳೂರು: ಯಾನ್ ಸೂಪರ್ ಸ್ಟಾರ್ ತುಳು ಸಿನಿಮಾ ತೆರೆಗೆ ರೆಡಿ

ಮಂಗಳೂರು: ಆನಂದ ಫಿಲಂಸ್ ಮತ್ತು ದ ಮಂಗಳೂರಿಯನ್ಸ್ ಲಾಂಛನದಲ್ಲಿ ರಾಮ್ ಶೆಟ್ಟಿ ಅರ್ಪಿಸುವ, ದಯಾನಂದ ಶೆಟ್ಟಿ ನಿರ್ಮಾಣ, ಸಂತೋಷ್ ಶೆಟ್ಟಿ ನಿರ್ದೇಶನದಲ್ಲಿ ತಯಾರಾದ “ಯಾನ್ ಸೂಪರ್ ಸ್ಟಾರ್” ತುಳು ಚಲನ ಚಿತ್ರದ ಚಿತ್ರೀಕರಣ, ಡಬ್ಬಿಂಗ್ ಕೆಲಸ ಕಾರ್ಯಗಳು ಸಂಪೂರ್ಣಗೊಂಡಿದ್ದು, ಸಿನಿಮಾ ಆಗೋಸ್ಟ್ ತಿಂಗಳಿನಲ್ಲಿ ತೆರೆಕಾಣಲಿದೆ.

ಉಡುಪಿ ಸುತ್ತಮುತ್ತ ಒಂದೇ ಹಂತದಲ್ಲಿ 25 ದಿನಗಳ ಕಾಲ ಯಾನ್ ಸೂಪರ್ ಸ್ಟಾರ್ ಸಿನಿಮಾಕ್ಕೆ ಚಿತ್ರೀಕರಣ ನಡೆದಿತ್ತು. ಮುಖ್ಯವಾಗಿ ಇಲ್ಲಿ ಜನಮನ್ನಣೆ ಪಡೆದಿರುವ ಸಿಐಡಿ ಧಾರಾವಾಹಿಯ ಮುಂಬಯಿ ಕಲಾವಿದರು ಈ ಸಿನಿಮಾದಲ್ಲಿ ಮುಖ್ಯ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ದಯಾನಂದ ಶೆಟ್ಟಿ, ಹರೀಶ್ ವಾಸು ಶೆಟ್ಟಿ, ಸಾಯಿ ಬಲ್ಲಾಲ್ ರೊಂದಿಗೆ ತುಳು ನಾಡಿನ ಖ್ಯಾತ ಕಲಾವಿದರಾದ ನವೀನ್ ಡಿ ಪಡೀಲ್, ಭೋಜರಾಜ ವಾಮಂಜೂರು, ಮಾನಸಿ ಸುಧೀರ್, ಅನ್ ಷಾ, ಅಶೋಕ್ ಪಕ್ಕಳ, ಮಾಸ್ಟರ್ ಅತಿಶ್ ಶೆಟ್ಟಿ, ಮಾಸ್ಟರ್ ಅರುಷ್ ಯು ಪೂಜಾರಿ, ಕುಮಾರಿ ಶ್ರೀಯಾ ಹೆಗ್ಡೆ ಮೊದಲಾದವರು ತಾರಾಗಣದಲ್ಲಿದ್ದಾರೆ.

ಸಂತೋಷ್ ಶೆಟ್ಟಿಯವರ ಕತೆಗೆ ಸಚಿನ್ ಶೆಟ್ಟಿ ಕುಂಬಳೆ ಸಂಭಾಷಣೆ ಬರೆದಿದ್ದಾರೆ. ಚಿತ್ರಕತೆ : ಅಂಕಣ ಜೋಷಿ, ಸಂತೋಷ್ ಶೆಟ್ಟಿ, ಸಾಹಿತ್ಯ ಹಾಡು: ವಿ ಮನೋಹರ್, ಗುರುಕಿರಣ್ ಈ ಸಿನಿಮಾಕ್ಕೆ ಹಾಡು ಹಾಡಿದ್ದಾರೆ. ಹಿನ್ನಲೆ ಸಂಗೀತ: ಸಂಜಯ್ ವಾಂದ್ರೇಕರ್, ಕ್ಯಾಮರಾ :ಕೃಷ್ಣರಾಜ್ ಕೋಟ್ಯಾನ್, ಸಾಹಸ: ಆನಂದ ಶೆಟ್ಟಿ, ಎಕ್ಸಿಕ್ಯೂಟಿವ್ ಪ್ರೊಡ್ಯುಸರ್ ಸತೀಶ್ ದುಬೆ, ಕ್ರಿಯೇಟಿವ್ ಡೈರಕ್ಟರ್ : ಕ್ರಿಸ್ತಬೆಲ್ಲೆ ಡಿ ಸೋಜ, ಪ್ರೊಡಕ್ಷನ್ ಹೆಡ್ಡ್ : ಚಂದ್ರಕಾಂತ್ ಭಂಡಾರಿ, ಸಿನಿಮಾ ಪೂರ್ಣಗೊಂಡಿದ್ದು, ಆಗೋಸ್ಟ್ ತಿಂಗಳಲ್ಲಿ ತೆರೆಕಾಣಲಿದೆ.

ಮನರಂಜನೆಯ ಸಿನಿಮಾ
ಯಾನ್ ಸೂಪರ್ ಸ್ಟಾರ್ ಹೆಸರು ಸೂಚಿಸಿರುವಂತೆ ಇದು ತುಳುವಿನಲ್ಲಿ ಹೊಸ ಬಗೆಯ ಸಿನಿಮಾ. ಪ್ರೇಕ್ಷಕರ ನಾಡಿಮಿಡಿತವನ್ನು ಅರಿತು ನಿರ್ದೇಶಕರು ಇಲ್ಲಿ ಸಿನಿಮಾದ ಕತೆಯನ್ನು ಹೆಣೆದಿದ್ದಾರೆ. ಸಿನಿಮಾದಲ್ಲಿ ಹಾಸ್ಯವೂ ಇದೆ, ಸಂದೇಶವೂ ಇದೆ. ಪ್ರೆಕ್ಷಕರಿಗೆ ಸಿನಿಮಾದ ಕುರಿತು ಅತೀವ ಕುತೂಹಲ ಇದೆ. ಆನಂದ್ ಫಿಲಂಸ್ ನಲ್ಲಿ ತೆರೆಕಂಡಿರುವ ಸಿನಿಮಾಗಳು ಯಶಸ್ವೀ ಪ್ರದರ್ಶನಗಳನ್ನು ಕಂಡಿರುವುದರಿಂದ ಪ್ರೇಕ್ಷಕರು ಯಾನ್ ಸೂಪರ್ ಸ್ಟಾರ್ ಸಿನಿಮಾದ ಕುರಿತು ಕೂಡಾ ಬಹಳಷ್ಟು ನಿರೀಕ್ಷೆ ಇಟ್ಟು ಕೊಂಡಿದ್ದಾರೆ.

Ashika S

Recent Posts

ರಕ್ತದಲ್ಲಿ ಪ್ರಧಾನಿ ಮೋದಿ ಚಿತ್ರ ಬಿಡಿಸಿ ಉಡುಗೊರೆ ನೀಡಲಿರುವ ಯುವಕ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ರಾಜ್ಯ ಪ್ರವಾಸದಲ್ಲಿದ್ದು, ಇಂದು ಬಾಗಲಕೋಟೆಗೆ ಭೇಟಿ ನೀಡಲಿದ್ದಾರೆ. ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ…

14 mins ago

ಎನ್‌ಡಿಎ ಸರ್ಕಾರ ಬಂದ್ರೆ ಮೆಕ್ಕಾಗೆ ಹೋಗುವ ಮುಸ್ಲಿಮರಿಗೆ 1 ಲಕ್ಷ ರೂ ನೆರವು: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶದಲ್ಲಿ ಲೋಕಸಭಾ ಚುನಾವಣೆ ಜತೆಗೆ ವಿಧಾನಸಭೆ ಚುನಾವಣೆಯೂ ನಡೆಯುತ್ತಿದ್ದು, ರಾಜಕೀಯ ಬಿಸಿ ಹೆಚ್ಚಿದೆ.

18 mins ago

ಶ್ರೀನಿವಾಸ ಪ್ರಸಾದ್‌ ನಿಧನ; ಪ್ರಧಾನಿ ಮೋದಿ ಸಂತಾಪ

ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ಅವರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

27 mins ago

ಶ್ರೀನಿವಾಸ ಪ್ರಸಾದ್‌ರಂತಹ ಧೀಮಂತರು ಈಗೆಲ್ಲಿದ್ದಾರೆ: ರಾಜು ಆಲಗೂರ್ ತೀವ್ರ ಕಳವಳ

ವಿ.ಶ್ರೀನಿವಾಸ್ ಪ್ರಸಾದ ಅವರು ಒಬ್ಬ ಧೀಮಂತ ಹಾಗೂ ಜನಾನುರಾಗಿ ನಾಯಕರಾಗಿದ್ದರು ಎಂದು ಕಾಂಗ್ರೆಸ್‌ನ ಲೋಕಸಭೆ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು…

32 mins ago

ಶಬ್ದ ಮಾಲಿನ್ಯದಿಂದ ನಿದ್ರೆಗೆ ಭಂಗ: ಹೃದಯಾಘಾತದ ಆತಂಕ ಹೆಚ್ಚಳ

ಇಂದು ಶಬ್ದ ಮಾಲಿನ್ಯ ಮಾತ್ರವಲ್ಲದೆ ಪ್ರತಿಯೊಂದು ಮಾಲಿನ್ಯವು ಪರಿಸರದ ಗುಣಮಟ್ಟಕ್ಕೆ ಮಾತ್ರವಲ್ಲದೆ ಮನುಷ್ಯನ ಜೀವನಕ್ಕೂ ಗಂಭೀರ ಅಪಾಯವಾಗಿದೆ. ಶಬ್ದ ಮಾಲಿನ್ಯವು…

59 mins ago

ಮಂಗಳೂರು: ಗುದನಾಳದಲ್ಲಿ ಬಚ್ಚಿಟ್ಟು 54 ಲಕ್ಷ ರೂ. ಮೌಲ್ಯದ ಚಿನ್ನ ಸಾಗಾಟ !

ಗುದನಾಳದಲ್ಲಿ ಬಚ್ಚಿಟ್ಟು 54 ಲಕ್ಷ ರೂ. ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಿದ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ.…

1 hour ago