ಒಟಿಟಿಯಲ್ಲಿ ಬಿಡುಗಡೆ ಆಗಲ್ಲ ‘ಮಂಜ್ಞುಮ್ಮೆಲ್ ಬಾಯ್ಸ್’

ಮಲಯಾಳಂ ಚಿತ್ರರಂಗದ ಇತ್ತೀಚೆಗಿನ ಸೂಪರ್ ಹಿಟ್ ಸಿನಿಮಾ ‘ಮಂಜ್ಞುಮ್ಮೆಲ್ ಬಾಯ್ಸ್’ ಮಲಯಾಳಂ ಚಿತ್ರರಂಗದಲ್ಲಿಯೇ ಅತಿ ಹೆಚ್ಚು ಕಲೆಕ್ಷನ್ ಮಾಡಿರುವ ಸಿನಿಮಾ ಎನಿಸಿಕೊಂಡಿದೆ.

ಈ ಸಿನೆಮಾ ಈವರೆಗೆ 250 ಕೋಟಿಗೂ ಹೆಚ್ಚು ಗಳಿಕೆ ಮಾಡಿದ್ದು, ತಮಿಳು ಭಾಷೆಯಲ್ಲಿಯೂ ಬಿಡುಗಡೆ ಆಗಿ ಸೂಪರ್ ಹಿಟ್ ಎನಿಸಿಕೊಂಡಿದೆ. ‘ಮಂಜ್ಞುಮ್ಮೆಲ್ ಬಾಯ್ಸ್’ ಸಿನಿಮಾ ಒಟಿಟಿಗೆ ಬಿಡುಗಡೆ ಆಗಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಅದು ಸುಳ್ಳು ಎನ್ನಲಾಗುತ್ತಿದೆ.

ಇದೀಗ ಸಿನಿಮಾ ತಂಡವು ಈ ಸ್ಪಷ್ಟನೆ ನೀಡಿದ್ದು ‘ಮಂಜ್ಞುಮ್ಮೆಲ್ ಬಾಯ್ಸ್’ ಸಿನಿಮಾ ಏಪ್ರಿಲ್ 5 ರಂದು ಒಟಿಟಿಯಲ್ಲಿ ಬಿಡುಗಡೆ ಆಗಲಿದೆ ಎಂಬ ಮಾತು ಸುಳ್ಳು ಎಂದಿದೆ.

‘ಮಂಜ್ಞುಮ್ಮೆಲ್ ಬಾಯ್ಸ್’ ನೈಜ ಘಟನೆಯನ್ನು ಆಧರಸಿದ ಸಿನಿಮಾ ಆಗಿದೆ. ಕೇರಳದ ಸ್ನೇಹಿತರ ಗುಂಪೊಂದು ಕೊಡೈಕೆನಾಲ್​ಗೆ ಪ್ರವಾಸಕ್ಕೆಂದು ಬಂದು ಅಲ್ಲಿ, ಕಮಲ್ ಹಾಸನ್ ನಟಿಸಿರುವ ‘ಗುಣ’ ಸಿನಿಮಾದ ಚಿತ್ರೀಕರಣ ಮಾಡಿರುವ ಗುಣ ಗುಹೆ ನೋಡಲು ಹೋದಾಗ ಅಲ್ಲಿನ ದುರ್ಗಮ ಕಂದಕವೊಂದಕ್ಕೆ ಸ್ನೇಹಿತರ ಗುಂಪಿನ ಒಬ್ಬ ವ್ಯಕ್ತಿ ಬಿದ್ದು ಬಿಡುತ್ತಾನೆ. ಆ ಯುವಕನ್ನು ಆ ಗುಂಪು ಹೇಗೆ ಕಾಪಾಡುತ್ತದೆ ಅವರಿಗೆ ಎದುರಾಗುವ ಸಮಸ್ಯೆಗಳು ಎಂಥಹವು, ಅವನ್ನು ಹೇಗೆ ಅವರು ಎದುರಿಸುತ್ತಾರೆ ಎಂಬುದೇ ಈ ಸಿನಿಮಾದ ಕತೆ.

Ashika S

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

3 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

3 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

4 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

4 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

5 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

5 hours ago