News Karnataka Kannada
Monday, April 29 2024
ಮನರಂಜನೆ

ಕೊನೆಗೂ ನಟಿ ತ್ರಿಷಾರಲ್ಲಿ ಕ್ಷಮೆ ಯಾಚಿಸಿದ ನಟ ಮನ್ಸೂರ್ ಅಲಿ ಖಾನ್

Thrish
Photo Credit : News Kannada

ಚೆನ್ನೈ: ನಟ ಮನ್ಸೂರ್ ಅಲಿ ಖಾನ್ ನಟಿ ತ್ರಿಶಾ ಕೃಷ್ಣನ್ ಅವರ ಬಗ್ಗೆ ವಿವಾದತ್ಮಾಕ ಹೇಳಿಕೆಗಾಗಿ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ತ್ರಿಶಾ ಕೃಷ್ಣನ್ ಅವರ ಬಗ್ಗೆ ಅಸಹ್ಯಕರ ಮತ್ತು ಕೆಟ್ಟ ಕಾಮೆಂಟ್‌ಗಳಿಗಾಗಿ ಕಳೆದ ಕೆಲವು ದಿನಗಳಿಂದ ನಟ ಮನ್ಸೂರ್ ಅಲಿ ಖಾನ್ ಸುದ್ದಿಯಲ್ಲಿದ್ದಾರೆ.

ವ್ಯಾಪಾರ ವಿಶ್ಲೇಷಕ ಮತ್ತು ಚಲನಚಿತ್ರ ವಿಮರ್ಶಕ ರಮೇಶ್ ಬಾಲಾ, “ಮನ್ಸೂರ್ ಹೇಳಿಕೆಯನ್ನು ಬಿಡುಗಡೆ ಮಾಡಿದರು ಮತ್ತು ಕ್ಷಮೆ ಕೇಳಿದರು” ಎಂದು ತಿಳಿಸಿದ್ದಾರೆ ಎಂದು ವರದಿಯಾಗಿದೆ. “ನನ್ನ ಸಹನಟಿ ತ್ರಿಶಾ, ದಯವಿಟ್ಟು ನನ್ನನ್ನು ಕ್ಷಮಿಸಿ” ಎಂದು ಮನ್ಸೂರ್ ಬರೆದುಕೊಂಡಿರುವುದಾಗಿ ತಿಳಿದುಬಂದಿದೆ.

ತ್ರಿಷಾ ಬಗೆಗಿನ ಮತ್ತು ಒಟ್ಟಾರೆ ನಟಿಯರ ಬಗ್ಗೆ ಆಡಿದ್ದ ಈ ಮಾತು ಭಾರೀ ವಿವಾದಕ್ಕೆ ಕಾರಣವಾಗಿತ್ತು. ತ್ರಿಷಾ ಸೇರಿದಂತೆ ಹಲವರು ನಟನೆ ನಡೆಯನ್ನು ಖಂಡಿಸಿದ್ದರು. ಆದರೂ ಮನ್ಸೂರ್ ಅಲಿ ಖಾನ್ ಮಾತ್ರ ಕ್ಷಮೆ ಕೇಳುವುದಿಲ್ಲ ಎಂದು ಹೇಳಿಕೆ ನೀಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಆಯೋಗ ಮಧ್ಯ ಪ್ರವೇಶಿಸಿತ್ತು.

ದೂರು ದಾಖಲಿಸುವಂತೆ ಪೊಲೀಸ್ ಇಲಾಖೆಗೆ ತಿಳಿಸಿತ್ತು. ಅದರಂತೆ ತಮಿಳು ನಾಡು ಪೊಲೀಸರು ನಟನ ವಿರುದ್ಧ ದೂರು ದಾಖಲಿಸಿಕೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು