ದೇವರಾಜ್ ಪೂಜಾರಿ ನಿರ್ದೇಶನದ ‘ಮತ್ಸ್ಯಗಂಧ’ ಚಿತ್ರ ಫೆಬ್ರವರಿ 23 ರಂದು ರಾಜ್ಯದ್ಯಂತ ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಸಿನಿಮಾದಲ್ಲಿ ಪೃಥ್ವಿ ಅಂಬಾರ್ ಖಡಕ್ ಪೊಲೀಸ್ ಆಫೀಸರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಕರಾವಳಿ ಮೀನುಗಾರರ ಸಂಪ್ರದಾಯ ಹಾಗೂ ಹೋರಾಟವನ್ನು ತೋರಿಸಲಾಗಿದೆ.
ಸಹ್ಯಾದ್ರಿ ಪ್ರೊಡಕ್ಷನ್ ಬ್ಯಾನರ್ ನಡಿ ವಿಶ್ವನಾಥ್ ನಿರ್ಮಾಣ ಮಾಡಿದ್ದಾರೆ. ಶ್ರೀನಿವಾಸ್ ಸಂಕಲನ, ಪ್ರವೀಣ್ ಛಾಯಾಗ್ರಹಣ, ಪ್ರಶಾಂತ್ ಸಿದ್ದಿ ಸಂಗೀತ ಸಂಯೋಜನೆ ನೀಡಿದ್ದಾರೆ.
ಭಜರಂಗಿ ಲೋಕಿ, ಶರತ್ ಲೋಹಿತಾಶ್ವ, ಪ್ರಶಾಂತ್ ಸಿದ್ಧಿ, ನಾಗರಾಜ್ ಬೈಂದೂರ್, ಅಶೋಕ್ ಹೆಗಡೆ, ಸತೀಶ್ ಚಂದ್ರ, ಧಿಶಾ ಶೆಟ್ಟಿ, ಅಂಜಲಿ ಪಾಂಡೆ, ಪ್ರತಿಮಾ ನಾಯಕ್, ಗೌತಮ್, ದೀಪಾ ಶ್ರೀನಿವಾಸ್, ಕಾಂತರಾಜ್ ಕಡ್ಡಿಪುಡಿ, ಸೇರಿದಂತೆ ಹಲವರ ತಾರಬಳಗವಿದೆ.
https://www.instagram.com/pruthvi_ambaar_official/?igsh=YzR0dmM2Mm1qYjc3