News Karnataka Kannada
Sunday, April 28 2024
ಮನರಂಜನೆ

ದರ್ಶನ್ ಅಭಿಮಾನಿ ಎಂದು ಹೇಳಿಕೊಂಡು ನೈತಿಕ ಪೊಲೀಸ್ ಗಿರಿ

ದರ್ಶನ್ ಅಭಿಮಾನಿ ಎಂದು ಹೇಳಿಕೊಂಡಿರುವ  ವ್ಯಕ್ತಿಯೋರ್ವ ನೈತಿಕ ಪೊಲೀಸ್ ಗಿರಿ ಮೆರೆದಿದ್ದು, ದರ್ಶನ್ ಬಗ್ಗೆ ಕೆಟ್ಟದಾಗಿ ಪೋಸ್ಟ್ ಹಾಕಿದ್ದ ಎಂದು ಆರೋಪಿಸಿ ಯುವಕನೊಬ್ಬನಿಗೆ ಶಿಕ್ಷೆ ನೀಡಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ.
Photo Credit : News Kannada

ದಾವಣಗೆರೆ: ದರ್ಶನ್ ಅಭಿಮಾನಿ ಎಂದು ಹೇಳಿಕೊಂಡಿರುವ  ವ್ಯಕ್ತಿಯೋರ್ವ ನೈತಿಕ ಪೊಲೀಸ್ ಗಿರಿ ಮೆರೆದಿದ್ದು, ದರ್ಶನ್ ಬಗ್ಗೆ ಕೆಟ್ಟದಾಗಿ ಪೋಸ್ಟ್ ಹಾಕಿದ್ದ ಎಂದು ಆರೋಪಿಸಿ ಯುವಕನೊಬ್ಬನಿಗೆ ಶಿಕ್ಷೆ ನೀಡಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ದೊಡ್ಡೇಶ್ ನೈತಿಕ ಪೊಲೀಸ್ ಗಿರಿ ಮೆರೆದ  ವ್ಯಕ್ತಿ.

ಲಿಂಗರಾಜು ಹೆಸರಿನ ಯುವಕ ಕೆಲವು ದಿನಗಳ ಹಿಂದೆ ದರ್ಶನ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟದಾಗಿ ಪೋಸ್ಟ್ ಮಾಡಿದ್ದ ಎನ್ನಲಾಗಿದೆ. ಈ ಯುವಕ ಪುನೀತ್ ರಾಜ್​ಕುಮಾರ್ ಅಭಿಮಾನಿ ಎಂದು ಸಹ ಹೇಳಲಾಗುತ್ತಿದೆ. ಈ ಯುವಕನ್ನು ಹಿಡಿದು ತಂದು ‘ಕಾಟೇರ’ ಸಿನಿಮಾ ಪ್ರದರ್ಶನವಾಗುತ್ತಿರುವ ದಾವಣಗೆರೆಯ ಗೀತಾಂಜಲಿ ಚಿತ್ರಮಂದಿರದ ಮುಂದೆ ನಿಲ್ಲಿಸಿ ಆತನಿಗೆ ಶಿಕ್ಷೆ ನೀಡಿದ್ದಾನೆ ದೊಡ್ಡೆಶ್.

ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ದೊಡ್ಡೇಶ್ ಹಂಚಿಕೊಂಡಿದ್ದಾನೆ. ಭಯಗೊಂಡಿದ್ದ ಯುವಕ ದೊಡ್ಡೇಶ್ ಹೇಳಿದಂತೆ ಬರಿಗೈಯಲ್ಲಿ ಕರ್ಪೂರ ಹಚ್ಚಿಕೊಂಡು ಆರತಿ ಮಾಡಿದ್ದಾನೆ.

ಯುವಕನ ಮೇಲೆ ನೈತಿಕ ಪೊಲೀಸ್​ಗಿರಿ ನಡೆಸಿರುವ ದೊಡ್ಡೇಶ್​ ಈ ಹಿಂದೆ ದುನಿಯಾ ವಿಜಯ್ ಅಭಿಮಾನಿ ಸಂಘದಲ್ಲಿದ್ದ ಎನ್ನಲಾಗುತ್ತಿದೆ. ಇದೀಗ ತಾನು ದರ್ಶನ್ ಅಭಿಮಾನಿ ಎಂದು ಹೇಳಿಕೊಂಡು ಈಗ ಈ ಕೃತ್ಯ ಎಸಗಿದ್ದಾನೆ. ದೊಡ್ಡೇಶ್​ ಮೇಲೆ ಈ ಹಿಂದೆಯೂ ನೈತಿಕ ಪೊಲೀಸ್​ಗಿರಿ ಎಸಗಿದ ಆರೋಪವಿದೆ. ಚಿತ್ರಮಂದಿರವೊಂದರಲ್ಲಿ ಒಮ್ಮೆ ಯುವಕ ಹಾಗೂ ಯುವತಿಯ ಮೇಲೆ ಹಲ್ಲೆ ಎಸಗಿದ್ದನಂತೆ ದೊಡ್ಡೇಶ್.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು