Categories: ಮನರಂಜನೆ

ನನ್ನ ಸಂಸತ್ತು ನನ್ನ ಹೆಮ್ಮೆ ಎಂದ ಶಾರುಖ್‌ ಖಾನ್‌

ನವದೆಹಲಿ: ಹೊಸ ಸಂಸತ್ ಭವನ ಕುರಿತು ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಟ್ವೀಟ್ ಮಾಡಿದ್ದಾರೆ. “ ಸಂಸತ್‌ ಹೊಸ ಕಟ್ಟಡ ನಮ್ಮ ಸಂವಿಧಾನವನ್ನು ಎತ್ತಿಹಿಡಿಯುವ ಭವ್ಯವಾದ ಹೊಸ ಮನೆ, ಈ ಮಹಾನ್ ರಾಷ್ಟ್ರದ ಪ್ರತಿಯೊಬ್ಬ ನಾಗರಿಕರನ್ನು ಈ ಕಟ್ಟಡ ಪ್ರತಿನಿಧಿಸುತ್ತದೆ ಎಂದು ಟ್ವೀಟ್‌ ಮಾಡಿದ್ದು, ಟ್ವೀಟ್‌ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಉಲ್ಲೇಖಿಸಲಾಗಿದೆ. ಅಲ್ಲದೆ ನವ ಭಾರತಕ್ಕಾಗಿ ಹೊಸ ಸಂಸತ್ತಿನ ಕಟ್ಟಡ ಜೈ ಹಿಂದ್. ವೈಭವದ ಹಳೆಯ ಕನಸಿನೊಂದಿಗೆ ಹೊಸಕಟ್ಟಡ ನಿರ್ಮಾಣವಾಗಿದೆ ಎಂದು ಹೇಳಿದ್ದಾರೆ.

ನನ್ನ ಸಂಸತ್ತು ನನ್ನ ಹೆಮ್ಮೆ ಎಂಬ ಹ್ಯಾಷ್‌ ಟ್ಯಾಗ್‌ ಕೂಡ ಇದೆ. ಇದರೊಂದಿಗೆ 1:48 ನಿಮಿಷಗಳ ವೀಡಿಯೊವನ್ನು ಕೂಡ ಶಾರುಖ್‌ ಬಿಡುಗಡೆ ಮಾಡಿದ್ದಾರೆ ಅದರಲ್ಲಿ ‘ಸ್ವದೇಸ್’ ಗೀತೆ ‘ಯೇ ಜೋ ದೇಸ್ ಹೈ ತೇರಾ’ ಪ್ಲೇ ಆಗುತ್ತಿದೆ, ಅಲ್ಲಿ ಶಾರುಖ್ ಹೊಸ ಸಂಸತ್ತಿನ ಕಟ್ಟಡದ ಮಹತ್ವವನ್ನು ವಿವರಿಸುತ್ತಾರೆ. ಅಲ್ಲದೆ ಕಟ್ಟಡವನ್ನು ಪ್ರಧಾನಿ ಮೋದಿ ಉದ್ಘಾಟಿಸುತ್ತಾರೆ ಎಂದು ಹೇಳಿದ್ದಾರೆ.

ಕೊನೆಯಲ್ಲಿ ಅವರು ಇಂಗ್ಲಿಷ್‌ನಲ್ಲಿ ಹೇಳಲು ಹೀಗೆ ಹೇಳಿದ್ದಾರೆ “ಪಾರ್ಲಿಮೆಂಟ್ ಎಂಬುದು ರಾಷ್ಟ್ರದ ದೇಹಕ್ಕೆ ಆತ್ಮ. ನಮ್ಮ ಪ್ರಜಾಪ್ರಭುತ್ವದ ಆತ್ಮವು ಅದರ ಹೊಸ ಮನೆಯಲ್ಲಿ ದೃಢವಾಗಿ ಉಳಿಯುತ್ತದೆ ಮತ್ತು ಸ್ವಾತಂತ್ರ್ಯವನ್ನು ಪೋಷಿಸಲು ಮುಂದುವರೆಯಲಿ ಎಂಬುದು ನನ್ನ ಪ್ರಾಮಾಣಿಕ ಪ್ರಾರ್ಥನೆಯಾಗಿದೆ ಎಂದು ಹೇಳಿದ್ದಾರೆ.

Gayathri SG

Recent Posts

ಬಾತ್​ರೂಂನಲ್ಲಿ ಹುಟ್ಟಿದ ನವಜಾತ ಶಿಶು : ತಕ್ಷಣವೆ ಕತ್ತು ಹಿಸುಕಿ ಕೊಂದ ತಾಯಿ

ಕೊಚ್ಚಿಯ ಮಹಿಳೆಯರೊಬ್ಬರು ನವಜಾತ ಶಿಶುವನ್ನು ಕತ್ತು ಹಿಸುಕಿ, ಕೆಳಗೆ ಎಸೆದು ಕೊಂದಿರುವ ಆಘಾತಕಾರಿ ಘಟನೆ ನಡೆದಿದೆ. ಕೊಚ್ಚಿಯ  ಅಪಾರ್ಟ್‌ಮೆಂಟ್‌ನಲ್ಲಿ ಪೋಷಕರೊಂದಿಗೆ…

8 mins ago

ಮುಕ್ಕಾಲು ಕರ್ನಾಟಕಕ್ಕೆ ಸುಡು ಬಿಸಿಲು : ಉಳಿದೆಡೆ ಗುಡುಗು ಸಹಿತ ಮಳೆ

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಪ್ರಮುಖವಾಗಿ ಬೆಂಗಳೂರು ಗ್ರಾಮಾಂತರ, ರಾಮನಗರ, ಬೆಂಗಳೂರು…

32 mins ago

ಈ ರಾಶಿಯವರಿಗೆ ಇಂದು ಆಪ್ತರಿಂದ ಆರ್ಥಿಕವಾಗಿ ಸಹಾಯ

ದೈಹಿಕ ಶ್ರಮ ಹೆಚ್ಚಲಿದೆ. ಸಂಶಯಾಸ್ಪದವಾದ ಹಣಕಾಸು ವ್ಯವಹಾರದಲ್ಲಿ ತೊಡಗುವುದು ಬೇಡ. ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಆಪ್ತರಿಂದ ಸಿಹಿ…

52 mins ago

85 ರೂನಷ್ಟು ಕಡಿಮೆಗೊಂಡ ಚಿನ್ನದ ಬೆಲೆ : ಇಲ್ಲಿದೆ ಇವತ್ತಿನ ದರಪಟ್ಟಿ

ಮೂರ್ನಾಲ್ಕು ವಾರಗಳ ಅದ್ವಿತೀಯ ರೀತಿಯಲ್ಲಿ ಏರಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಈ ವಾರ ಶಾಂತಗೊಂಡಿವೆ. ಈ ವಾರ…

1 hour ago

ಇಂದು ವಿಶ್ವ ನಗುವಿನ ದಿನ : ನಾವು ನಗೋಣ, ಇನ್ನೊಬ್ಬರನ್ನು ನಗಿಸೋಣ

ʻನಗುʼ ಇದು ಎಲ್ಲ ಮಾನಸಿಕ ಹಾಗೂ ದೈಹಿಕ ಕಾಯಿಲೆಗಳನ್ನು ದೂರವಿರಿಸುವ ಒಂದು ಅಸ್ತ್ರ.ಹೀಗಾಗಿಯೇ ನಗುವಿನ ಪ್ರಾಮುಖ್ಯತೆಯನ್ನು ಸಾರಲು ವಿಶ್ವದಾದ್ಯಂತ ಮೇ…

1 hour ago

ಗುಜರಾತ್ ವಿರುದ್ಧ ಆರ್‌ಸಿಬಿಗೆ 4 ವಿಕೆಟ್‌ಗಳ ಭರ್ಜರಿ ಜಯ

ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್‌ಸಿಬಿ…

9 hours ago