Categories: ಮನರಂಜನೆ

ದೆಹಲಿ: ಗಳಿಕೆಯಲ್ಲೂ ದಾಖಲೆ ಬರೆದ ‘ದಿ ಕೇರಳ ಸ್ಟೋರಿʼ

ದೆಹಲಿ: ವಿವಾದದಿಂದಲೇ ಸುದ್ದಿಯಾಗಿ ಇದೀಗ ಸಿನಿಮಾ ಫೀಲ್ಡ್‌ನಲ್ಲೇ ಭಾರೀ ಸದ್ದು ಮಾಡುತ್ತಿರುವ ʼದಿ ಕೇರಳ ಸ್ಟೋರಿʼ ಹೊಸ ದಾಖಲೆಯೊಂದನ್ನು ಬರೆದಿದೆ.

ಮೇ. 5 ರಂದು ಗ್ರ್ಯಾಂಡ್‌ ರಿಲೀಸ್‌ ಆದ ಸುದೀಪ್ತೋ ಸೇನ್ ಅವರ ʼದಿ ಕೇರಳ ಸ್ಟೋರಿʼ ಒಂದಷ್ಟು ವಿವಾದದಿಂದ ಸುದ್ದಿಯಾಗಿತ್ತು. ಕೇರಳದ ಹಿಂದೂ ಯುವತಿ ಇಸ್ಲಾಂ ಧರ್ಮಕ್ಕೆ ಸೇರಿ ಅಲ್ಲಿಂದ ಐಸಿಸ್ ಸೇರುವ ಕಥೆಯನ್ನು ಚಿತ್ರ ಒಳಗೊಂಡಿದೆ ಎನ್ನಲಾಗಿದೆ.

ಆರಂಭದಲ್ಲಿ 32 ಸಾವಿರ ಭಾರತೀಯ ಮಹಿಳೆಯರು ಈ ರೀತಿ ಐಸಿಸ್‌ ಸೇರಿದ್ದಾರೆ ಎಂದು ಚಿತ್ರತಂಡ ಟೀಸರ್‌ ನಲ್ಲಿ ಹೇಳಿತ್ತು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿ, ಇದು ಸುಳ್ಳು ಎಂದ ಬಳಿಕ ಸಿನಿಮಾ ತಂಡ 32 ಸಾವಿರ ಮಹಿಳೆಯರು ಎನ್ನುವ ದೃಶ್ಯ ಸೇರಿ ಅನೇಕ ದೃಶ್ಯಗಳನ್ನು ತೆಗೆದು ಹಾಕಿತ್ತು.

ಆದರೆ ವಿವಾದದಿಂದ ಸುದ್ದಿಯಾದ ಸಿನಿಮಾ ನಿಧಾನವಾಗಿ ಬಾಕ್ಸ್‌ ಆಫೀಸ್‌ ನಲ್ಲಿ ಕಮಾಲ್‌ ಮಾಡುತ್ತಿದೆ. ಸಿನಿಮಾ ನೋಡಿದ ಪ್ರತಿಯೊಬ್ಬರೂ ಕೂಡಾ ತಮ್ಮ ಜೀವನದಲ್ಲಿ ನಡೆದ ಘಟನೆ ಹೇಳಿಕೊಂಡಿದ್ದಾರೆ .ಶನಿವಾರ ( ಮೇ.13ರಂದು) ಸಿನಿಮಾ 19.50 ಕೋಟಿ ರೂ.ವನ್ನು ಗಳಿಸಿದ್ದು, ರಿಲೀಸ್‌ ಆದ 9 ದಿನದಲ್ಲಿ ಸಿನಿಮಾ ಒಟ್ಟು 112.87 ಕೋಟಿ ರೂ. ಗಳಿಸಿದೆ ಎಂದು ಅಂಕಿ ಅಂಶಗಳು ಪ್ರಕಟಗೊಂಡಿವೆ.

ಆ ಮೂಲಕ ಈ ವರ್ಷ ಬಾಲಿವುಡ್‌ ನಲ್ಲಿ ಅತೀ ಹೆಚ್ಚು ಕಲೆಕ್ಷನ್‌ ಮಾಡಿದ ಸಿನಿಮಾಗಳಲ್ಲಿ ಎರಡನೇ ಸಿನಿಮಾವಾಗಿ ʼದಿ ಕೇರಳ ಸ್ಟೋರಿʼ ಹೊರಹೊಮ್ಮಿದೆ. ಮಲಯಾಳಂ , ತಮಿಳು , ಕನ್ನಡ , ಹಿಂದಿ , ಬೇರೆ ಬೇರೆ ಭಾಷೆಗಳ ಪ್ರೇಕ್ಷಕರ ಮನ ಗೆದ್ದಿದೆ. ಅದಾ ಶರ್ಮಾ,ಯೋಗಿತಾ ಬಿಹಾನಿ ,ಸೋನಿಯಾ ಬಲಾನಿ, ಸಿದ್ಧಿ ಇದ್ನಾನಿ ಮುಂತಾದ ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ ಎಂದು ವರದಿ ತಿಳಿಸಿದೆ.

Ashika S

Recent Posts

ಮೈಸೂರು ಜಿಲ್ಲೆಯಲ್ಲಿ ಶೇ.75ರಷ್ಟು ಮಳೆ ಕೊರತೆ

ಈ ಬಾರಿ ಮುಂಗಾರು ಕೈಕೊಟ್ಟಿದ್ದರಿಂದ ಜಿಲ್ಲೆಯಲ್ಲಿ ಅಂತರ್ಜಲ ಕುಸಿದಿದ್ದು, ಬಿತ್ತನೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ವಾಡಿಕೆಯಷ್ಟು…

6 hours ago

ಮುರುಘಾ ಶರಣರಂತೆ ಪ್ರಜ್ವಲ್‌ ರೇವಣ್ಣನನ್ನು ಬಂಧಿಸಿ: ಮಾರಸಂದ್ರ ಮುನಿಯಪ್ಪ

'ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದಡಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಬಂಧಿಸಿರುವಂತೆ ಹಾಸನದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ…

6 hours ago

ಯುವತಿಯ ಮೇಲೆ ಅತ್ಯಾಚಾರವೆಸಗಿ ವೀಡಿಯೋ ಹರಿಬಿಟ್ಟ ನಾಲ್ವರು ಅಪ್ರಾಪ್ತರ ಬಂಧನ

ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೃತ್ಯವನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ  ಹರಿಬಿಟ್ಟ ಘಟನೆ ಏಪ್ರಿಲ್ 21 ರಂದು…

6 hours ago

ಸ್ವತಂತ್ರರಾಗಿ ಬದುಕಲು ಸ್ವತಂತ್ರ ಅಭ್ಯರ್ಥಿಯನ್ನು ಬೆಂಬಲಿಸಿ: ಕೆ. ಬುಕ್ಕಾ ಮನವಿ

ಜಿಲ್ಲೆಯ ಜ‌ನ ಸ್ವತಂತ್ರರಾಗಿ ಬದುಕಬೇಕಾದರೆ‌ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನಗೆ ಬೆಂಬಲಿಸಿ ಮತ ಹಾಕಬೇಕೆಂದು ಪಕ್ಷೇತರ ಅಭ್ಯರ್ಥಿ ಜೈರಾಜ ಕೆ.…

6 hours ago

ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ

ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.

6 hours ago

ಪಾದಯಾತ್ರೆ ನಡೆಸಿ ಮತಯಾಚಿಸಿದ ಶಾಸಕ ಅಶೋಕ್ ಮನಗೂಳಿ

ಭಾನುವಾರ ಸಂಜೆ ಅಲ್ಮೆಲ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಮತ್ತು ಶಾಸಕ ಅಶೋಕ ಮನಗೂಳಿಯವರು ಪಾದಯಾತ್ರೆ ನಡೆಸಿ ಮತಯಾಚಿಸಿದರು.

7 hours ago