ಹೈದರಾಬಾದ್: ತೆಲುಗು ಬಿಗ್ ಬಾಸ್ ಸೀಸನ್ 7 ರ ವಿಜೇತೆ ಪಲ್ಲವಿ ಪ್ರಶಾಂತ್ ಅವರನ್ನು ಹೈದರಾಬಾದ್ ನಲ್ಲಿ ಬುಧವಾರ ಬಂಧಿಸಲಾಗಿದೆ.
ಪಲ್ಲವಿ ಪ್ರಶಾಂತ್ ಅವರನ್ನು ಕಾರ್ಯಕ್ರಮದ ವಿಜೇತರೆಂದು ಘೋಷಿಸಿದ ನಂತರ, ಅವರ ಅಭಿಮಾನಿಗಳು ರಿಯಾಲಿಟಿ ಶೋನ ರನ್ನರ್ ಅಪ್ ಅಮರ್ದೀಪ್ ಚೌಧರಿ ಅವರ ಕಾರಿನ ಮೇಲೆ ದಾಳಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಪ್ರಮುಖ ಆರೋಪಿ ಪ್ರಶಾಂತ್ ಮತ್ತು ಅವನ ಸಹೋದರ ಮನೋಹರ್ ಸೇರಿದಂತೆ ಭಾಗಿಯಾಗಿರುವವರ ವಿರುದ್ಧ ಪೊಲೀಸರು ಅನೇಕ ಪ್ರಕರಣಗಳನ್ನು ದಾಖಲಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳು ಮತ್ತು ಪ್ರತ್ಯಕ್ಷದರ್ಶಿಗಳ ಹೇಳಿಕೆಗಳ ಮೂಲಕ ಇತರ ವ್ಯಕ್ತಿಗಳನ್ನು ಗುರುತಿಸುವ ಕೆಲಸವನ್ನು ಅಧಿಕಾರಿಗಳು ಮಾಡುತ್ತಿದ್ದಾರೆ.
ಡಿಸೆಂಬರ್ 17 ರಂದು ನಡೆದ ಬಿಗ್ ಬಾಸ್ ತೆಲುಗು 7 ಗ್ರ್ಯಾಂಡ್ ಫಿನಾಲೆಯಲ್ಲಿ ಪಲ್ಲವಿ ಪ್ರಶಾಂತ್ ವಿಜೇತರಾಗಿದ್ದರು. ಇನ್ನು ಸಿದ್ದಿಪೇಟೆ ಜಿಲ್ಲೆಯ ಕೊಲ್ಲೂರಿನಲ್ಲಿ ಪಲ್ಲವಿ ಪ್ರಶಾಂತ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಶಾಂತ್ ನನ್ನು ಪೊಲೀಸರು ಬಂಧಿಸಿ ಜುಬಿಲಿ ಹಿಲ್ಸ್ ಪಿಎಸ್ ಠಾಣೆಗೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.