ಮಂಗಳೂರು: ‘ಸಲಾರ್’ ಸಿನಿಮಾ ಸಕ್ಸಸ್ ಬೆನ್ನಲ್ಲೇ ಪ್ರಭಾಸ್ ಹಾಗೂ ತಂಡ ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.
ಪ್ರಭಾಸ್, ಪ್ರಶಾಂತ್ ನೀಲ್, ಹೊಂಬಾಳೆ ಸಂಸ್ಥೆಯ ರೂವಾರಿ ವಿಜಯ್ ಕಿರಂಗದೂರು ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಸಾಲು ಸಾಲು ಸೋಲುಗಳನ್ನೇ ಕಂಡ ಪ್ರಭಾಸ್ಗೆ ‘ಸಲಾರ್’ ಚಿತ್ರದ ಮೂಲಕ ಸಕ್ಸಸ್ ರುಚಿ ಸಿಕ್ಕಂತೆ ಆಗಿದೆ. ಇದೇ ಸಂಭ್ರಮಲ್ಲಿ ಚಿತ್ರತಂಡ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಆಗಮಿಸಿದೆ.