ಬೆಂಗಳೂರು: ಮಾಜಿ ಬಿಗ್ ಬಾಸ್ ಸ್ಪರ್ಧಿ ಪ್ರಶಾಂತ್ ಸಂಬರ್ಗಿ ಅವರಿಗೆ ವಾಟ್ಸಪ್ ಮತ್ತು ಇ-ಮೇಲ್ ಮೂಲಕ ಕಿಡಿಗೇಡಿಗಳು ಕೊಲೆ ಬೆದರಿಕೆ ಹಾಕಿದ್ದಾರೆ.
ಆ್ಯಸಿಡ್ ಹಾಕುವುದಾಗಿ ವಿದೇಶದ ಮೊಬೈಲ್ ಸಂಖ್ಯೆಗಳಿಂದ ಪ್ರಶಾಂತ್ ಸಂಬರ್ಗಿ ಅವರಿಗೆ ಬೆದರಿಕೆ ಸಂದೇಶ ಬಂದಿದೆ. ಈ ಸಂಬಂಧವಾಗಿ ಪ್ರಶಾಂತ್ ಸಂಬರ್ಗಿ ಅವರು ಬೆಂಗಳೂರಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಬೆದರಿಕೆ ಹಾಕಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ತಮಗೆ ರಕ್ಷಣೆ ನೀಡಬೇಕು ಎಂದು ಪ್ರಶಾಂತ್ ಸಂಬರ್ಗಿ ಅವರು ದೂರಿನಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಅಮೆರಿಕ, ಕ್ರೊಯೇಷ್ಯಾ ಮುಂತಾದ ದೇಶಗಳ ವಾಟ್ಸಪ್ ಸಂಖ್ಯೆಗಳನ್ನು ಬಳಸಿ ಬೆದರಿಕೆ ಸಂದೇಶ ಕಳಿಸಲಾಗಿದೆ. ಪ್ರಶಾಂತ್ ಸಂಬರ್ಗಿ ಅವರ ಫ್ಯಾಮಿಲಿ ಫೋಟೋವನ್ನು ಕಳಿಸಿ, ‘ಟಾರ್ಗೆಟ್’ ಎಂದು ಬರೆಯಲಾಗಿದೆ. ಪತ್ನಿ ಮತ್ತು ಮಕ್ಕಳನ್ನು ಕೂಡ ಬಲಿ ತೆಗೆದುಕೊಳ್ಳುವುದಾಗಿ ಬೆದರಿಕೆ ಸಂದೇಶ ಕಳಿಸಲಾಗಿದೆ.
‘ಮಾರ್ಚ್ 10ರ ಮಧ್ಯರಾತ್ರಿಯಿಂದ ನನಗೆ ಮೇಲ್ಕಂಡ ಮೊಬೈಲ್ ಸಂಖ್ಯೆಗಳಿಂದ ಬೆದರಿಕೆ ಸಂದೇಶ ಬಂದಿದೆ. ನಮ್ಮ ಫೋಟೋ ಕಳಿಸಿ ನನಗೆ ಮತ್ತು ನನ್ನ ಕುಟುಂಬದವರಿಗೆ ಜೀವ ಬೆದರಿಕೆ ಹಾಕಲಾಗಿದೆ. ನಮ್ಮ ಮೊಬೈಲ್ ಹ್ಯಾಕ್ ಮಾಡಲಾಗಿದೆ. ಅದರಲ್ಲಿನ ಖಾಸಗಿ ಮಾಹಿತಿಯನ್ನು ಕದಿಯಲಾಗಿದೆ. ವೈಯಕ್ತಿಕ ಫೋಟೋ, ಕಾಲ್ ರೆಕಾರ್ಡ್, ಎಸ್ಎಂಎಸ್ ಹಾಗೂ ಇಮೇಲ್ಗಳನ್ನು ಟ್ರಾನ್ಸ್ಫರ್ ಮಾಡಲಾಗಿದೆ’ ಎಂದು ಪ್ರಶಾಂತ್ ಸಂಬರ್ಗಿ ಅವರು ದೂರಿನಲ್ಲಿ ತಿಳಿಸಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…
ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…
ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…
ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…
ಎಸ್ಸಿ, ಎಸ್ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…