ಮನರಂಜನೆ

‘ವೆಜ್-ನಾನ್ ವೆಜ್‍’ಗೆ ಒಂದೇ ಚಮಚ ಬಳಕೆ ಬಗ್ಗೆ ಸುಧಾ ಮೂರ್ತಿ ಮಾತು: ನೆಟ್ಟಿಗರ ಚರ್ಚೆ

ಲೇಖಕಿ, ಜನೋಪಕಾರಿಯೂ ಆಗಿರುವ ಇನ್‌ಫೋಸಿಸ್ ಮುಖ್ಯಸ್ಥೆ ಸುಧಾ ಮೂರ್ತಿ ಅವರು ಆಹಾರಪ್ರೇಮಿ. ಆದರೆ ಶುದ್ಧ ಸಸ್ಯಾಹಾರಿ. ಅವರು ಮೊಟ್ಟೆ, ಬೆಳ್ಳುಳ್ಳಿ ಕೂಡ ತಿನ್ನಲ್ಲ. ಈ ಬಗ್ಗೆ ಅವರೇ ಸ್ವತಃ ಹೇಳಿಕೊಂಡಿದ್ದಾರೆ.

ಖ್ಯಾತ ಫುಡ್​ ಬ್ಲಾಗರ್​ ಕುನಾಲ್ ವಿಜ್ಜಯಕರ್  ಸಾರಥ್ಯದ ‘ಖಾನೇ ಮೇ ಕ್ಯಾ ಹೈ?’ ಯೂಟ್ಯೂಬ್​ ಸೀರೀಸ್​ನಲ್ಲಿ ಇತ್ತೀಚೆಗೆ ಇನ್​​ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾ ಮೂರ್ತಿ ಪಾಲ್ಗೊಂಡಿದ್ದರು. ಆಹಾರದ ಬಗ್ಗೆ ಅನೇಕ ವಿಷಯಗಳನ್ನು ಚರ್ಚಿಸುತ್ತ, ‘ನಾನು ಶುದ್ಧ ಸಸ್ಯಾಹಾರಿ, ಬೆಳ್ಳುಳ್ಳಿ ಮತ್ತು ಮೊಟ್ಟೆಯನ್ನು ಕೂಡ ತಿನ್ನುವುದಿಲ್ಲ. ಏಕೆಂದರೆ ಮಾಂಸಾಹಾರ ಮತ್ತು ಸಸ್ಯಾಹಾರಕ್ಕೆ ಒಂದೇ ಚಮಚವನ್ನು ಬಳಸುವ ಸಾಧ್ಯತೆ ಇರುತ್ತದೆ. ಆದ್ದರಿಂದ ವಿದೇಶಗಳಿಗೆ ಹೋಗುವಾಗ ಆಹಾರ ಪೊಟ್ಟಣಗಳನ್ನು ತೆಗೆದುಕೊಂಡು ಹೋಗುತ್ತೇನೆ. ಇಲ್ಲವೆ ಸಸ್ಯಾಹಾರಿ ರೆಸ್ಟೋರೆಂಟ್​​​ಗಳಿಗೆ ಹೋಗುತ್ತೇನೆ. ಅದೂ ಸಾಧ್ಯವಾಗದಿದ್ದರೆ ನಾನೇ ಅಡುಗೆ ಮಾಡಿ ಉಣ್ಣುತ್ತೇನೆ’ ಎಂದಿದ್ದಾರೆ.

ನನ್ನ ಪತಿ ನಾರಾಯಣ ಮೂರ್ತಿ ಅವರು ಸಿಹಿತಿಂಡಿಗಳಿಂದ ದೂರ. ಆದರೆ ನಾನು ಎಲ್ಲಾ ರೀತಿಯ ಸಿಹಿತಿಂಡಿಗಳನ್ನು ಪ್ರೀತಿಸುತ್ತೇನೆ. ಅವರು ಆಹಾರಪ್ರಿಯನಲ್ಲ. ಆದರೆ ಅವರಿಗೆ ಮೈಸೂರು ಶೈಲಿಯ ಬೈಂಗನ್ ಇಷ್ಟ. ನಾನು ತಯಾರಿಸುವ ಬಿಸಿಬೆಳ್ಳೆ ಬಾತ್ ಕೂಡ ಅವರಿಗೆ ಇಷ್ಟ ಎಂದು ಇದೇ ವೇಳೆ ತಿಳಿಸಿದರು.

ಕೆಲವರು ಇವರ ಆಹಾರ ಕ್ರಮವನ್ನು ಬೆಂಬಲಿಸಿದ್ದಾರೆ. ವ್ಯಕ್ತಿಯ ಆಹಾರ ಕ್ರಮ, ಜಾತಿ ಮತ್ತು ವೈಯಕ್ತಿಕ ವಿಚಾರಗಳನ್ನು ಗಣನೆಗೆ ತೆಗೆದುಕೊಳ್ಳದೆ ವ್ಯಕ್ತಿಯನ್ನು ಗೌರವದಿಂದ ಕಾಣುವ ಬಗ್ಗೆ ಯೋಚಿಸಬೇಕು ಎಂದಿದ್ದಾರೆ. ಸುಧಾ ಮೂರ್ತಿಯ ‘ಸರಳತನ’ವು ಮಾರಾಟದ ಸರಕು ಎಂದು ಅನೇಕರು ವ್ಯಂಗ್ಯೋಕ್ತಿಯಾಡಿದ್ದಾರೆ. ನಿಜಕ್ಕೂ ನಿಮ್ಮ ಸರಳತನ ಹಂತಹಂತವಾಗಿ ಬೇಸರ ತರಿಸುತ್ತಿದೆ ಎಂದಿದ್ದಾರೆ ಒಬ್ಬರು

Ashitha S

Recent Posts

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

48 mins ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

1 hour ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

2 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

2 hours ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

2 hours ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

2 hours ago