ಮುಂಬೈ: ಪುಷ್ಪ’ ಸಿನಿಮಾ ಅಲ್ಲು ಅರ್ಜುನ್ ಅವರ ಸ್ನೇಹಿತನ ಪಾತ್ರ ಮಾಡಿದ್ದ ನಟ ಜಗದೀಶ್ ಅರೆಸ್ಟ್ ಆಗಿದ್ದಾರೆ.
ಮಹಿಳೆಗೆ ಕಿರುಕುಳ ನೀಡಿದ ಆರೋಪ ಅವರ ಮೇಲೆ ಎದುರಾಗಿದೆ. ಈ ಘಟನೆಯಿಂದ ಟಾಲಿವುಡ್ ಮಂದಿಗೆ ಶಾಕ್ ಆಗಿದೆ. ಜಗದೀಶ್ ನೀಡಿದ ಕಿರುಕುಳ ತಾಳಲಾಗದೇ ಆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಿರುಕುಳ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ‘ಪುಷ್ಪ’ ಸಿನಿಮಾದ ನಟ ಜಗದೀಶ್ ಬಂಧನಕ್ಕೆ ಒಳಗಾಗಿದ್ದಾರೆ.
ಸಹ ನಟಿಯು ಬೇರೆ ಪುರುಷನ ಜೊತೆ ಖಾಸಗಿಯಾಗಿದ್ದ ಕ್ಷಣದ ಕೆಲವು ಫೋಟೋಗಳನ್ನು ಜಗದೀಶ್ ಕ್ಲಿಕ್ಕಿಸಿಕೊಂಡಿದ್ದರು. ಅವುಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಇದರಿಂದ ಮನನೊಂದ ಮಹಿಳೆಯು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.