ಯಶ್, ರಣ್​ಬೀರ್ ಕಪೂರ್ ನಟನೆಯ ‘ರಾಮಾಯಣ’ ಮುಹೂರ್ತಕ್ಕೆ ದಿನಾಂಕ ಫಿಕ್ಸ್

ಮುಂಬೈ:  ಬಾಲಿವುಡ್​ನಲ್ಲಿ ರಣ್​ಬೀರ್ ಕಪೂರ್, ಯಶ್, ಸಾಯಿ ಪಲ್ಲವಿ ಇನ್ನೂ ಕೆಲವು ತಾರೆಯರು ನಟಿಸಲಿರುವ ರಾಮಾಯಣ ಸಿನಿಮಾ ನಿರ್ಮಾಣಗೊಳ್ಳುವ ಸುದ್ದಿ ಕಳೆದ ಒಂದು ವರ್ಷದಿಂದಲೂ ಹರಿದಾಡುತ್ತಲೇ ಇದೆ.

ಜನಪ್ರಿಯ ನಿರ್ದೇಶಕ ನಿತೀಶ್ ತಿವಾರಿ ಈ ಸಿನಿಮಾ ನಿರ್ದೇಶನ ಮಾಡಲಿದ್ದಾರೆ. ಈಗಾಗಲೇ ಎಲ್ಲ ನಟ-ನಟಿಯರ ಲುಕ್ ಟೆಸ್ಟ್, ಧ್ವನಿ ಪರೀಕ್ಷೆ ಇನ್ನಿತರೆಗಳು ಮುಗಿದಿದೆ ಎನ್ನಲಾಗಿದೆ. ಇದೀಗ ಸಿನಿಮಾದ ಮುಹೂರ್ತಕ್ಕೆ ದಿನಾಂಕವನ್ನು ಚಿತ್ರತಂಡ ನಿಗದಿ ಮಾಡಿದೆ.

ಏಪ್ರಿಲ್ 17ರಂದು ಸಿನಿಮಾದ ಮುಹೂರ್ತವನ್ನು ಚಿತ್ರತಂಡ ಅದ್ಧೂರಿಯಾಗಿ ಮಾಡಲಿದೆ. ಘೋಷಣೆಗೆ ಏಪ್ರಿಲ್ 17ನ್ನೇ ಆಯ್ದುಕೊಳ್ಳಲು ಕಾರಣವೂ ಇದೆ. ಅಂದು ರಾಮನವಮಿ. ಹಾಗಾಗಿ ಅದೇ ದಿನದಂದು ಚಿತ್ರತಂಡ ಸಿನಿಮಾದ ಮುಹೂರ್ತ ಮಾಡಲಿದೆ. ಸಿನಿಮಾದ ಹೆಸರು ಸಹ ಅದೇ ದಿನ ಘೋಷಣೆ ಆಗಲಿದೆ.

ಸಿನಿಮಾದಲ್ಲಿ ರಣ್​ಬೀರ್ ಕಪೂರ್ ರಾಮನ ಪಾತ್ರದಲ್ಲಿ ನಟಿಸಲಿದ್ದಾರೆ. ಸಾಯಿ ಪಲ್ಲವಿ ಸೀತೆಯ ಪಾತ್ರದಲ್ಲಿ. ಕನ್ನಡದ ನಟ ಯಶ್ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಟ ಸನ್ನಿ ಡಿಯೋಲ್ ಹನುಮಂತನ ಪಾತ್ರದಲ್ಲಿ ನಟಿಸಲಿದ್ದಾರೆ. ರಕುಲ್ ಪ್ರೀತ್ ಸಿಂಗ್, ಲಾರಾ ದತ್ತ ಅವರುಗಳು ಕೈಕೆ, ಊರ್ಮಿಳೆಯ ಪಾತ್ರದಲ್ಲಿ ನಟಿಸಲಿದ್ದಾರೆ.

Ashika S

Recent Posts

ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಾಸ: ಗ್ರಾಮಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ

ಧಾರವಾಡ ಜಿಲ್ಲೆಯಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರು, ಮೇವು ಕೊರತೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ, ಕ್ರಮವಹಿಸಲು ಸೂಚಿಸಲಾಗಿದ್ದರೂ ತಾಂತ್ರಿಕ ಸಮಸ್ಯೆ,…

3 mins ago

ಮನೆಯ ಗೇಟ್ ಬಳಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಮೃತ್ಯು

ಮನೆಯ ಗೇಟ್ ಮುಂಭಾಗದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಮುದ್ರುಮಕ್ಕಿ…

18 mins ago

ಐತಿಹಾಸಿಕ ʻಹಲಗಲಿʼ ಕಥೆಗೆ ನಾಯಕನಾದ ನಟರಾಕ್ಷಸ ಧನಂಜಯ್

ಐತಿಹಾಸಿಕ ಕಥೆಯ ʻಹಲಗಲಿʼ ಸಿನಿಮಾಗೆ ನಟ ಡಾಲಿ ಧನಂಜಯ್‌ ನಾಯಕನಾಗಿ ಆಯ್ಕೆಯಾಗಿದ್ದಾರೆ. 'ಕೃಷ್ಣ ತುಳಸಿ' ಚಿತ್ರದ ಖ್ಯಾತ ಡೈರೆಕ್ಟರ್‌ ಸುಕೇಶ್‌…

19 mins ago

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚೆಕ್ ಇನ್ ವೇಳೆ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದ ಪ್ರಯಾಣಿಕ!

ನಗರದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಚೆಕ್ ಇನ್ ಮಾಡುತ್ತಿದ್ದ ವೇಳೆ ಪ್ರಯಾಣಿಕನೊಬ್ಬನ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದ ಘಟನೆ…

24 mins ago

ಮುಂಬೈನ ಮೆಕ್​ಡೊನಾಲ್ಡ್ಸ್​ಗೆ ಬಾಂಬ್​ ಬೆದರಿಕೆ

ಇತ್ತೀಚೆಗೆ ದೇಶದಾದ್ಯಂತ ಬಾಂಬ್‌ ಬೆದರಿಕೆ ಕೇಳಿಬರುತ್ತವೆ ಇದರ ಹಿಂದೆ ಯಾರ ಕೈಚಳಕವಿದೆ ಎಂದು ಇನ್ನು ಬೆಳಕಿಗೆ ಬಂದಿಲ್ಲ. ಈಗಾಗಲೇ ಶಾಲೆಗಳಿಗ,…

34 mins ago

ಅಂಜಲಿ ಅಂಬಿಗೇರ ಸಹೋದರಿ ಆತ್ಮಹತ್ಯೆಗೆ ಯತ್ನ

ಹುಬ್ಬಳ್ಳಿಯಲ್ಲಿ ಹಂತಕನ ದಾಳಿಗೆ ಬಲಿಯಾಗಿರುವ ಅಂಜಲಿ ಅಂಬಿಗೇರ ಕುಟುಂಬಕ್ಕೆ ಭಾರಿ ಸಿಡಿಲು ಬಡಿದಿದೆ.

47 mins ago