‘ಸ್ವಾತಂತ್ರ್ಯ ವೀರ ಸಾವರ್ಕರ್’ ಸಿನಿಮಾ ಪ್ರಮೋಷನ್ನಲ್ಲಿ ನಟ ರಣದೀಪ್ ಹೂಡಾ ಬ್ಯುಸಿ ಆಗಿದ್ದಾರೆ. ಈ ಸಿನಿಮಾವನ್ನು ನಿರ್ದೇಶನ ಮಾಡುವುದರ ಜೊತೆಗೆ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಇದು ವಿನಾಯಕ್ ದಾಮೋದರ್ ಸಾವರ್ಕರ್ಅವರ ಬದುಕಿನ ವಿವರವನ್ನು ಆಧರಿಸಿ ತಯಾರಾದ ಸಿನಿಮಾ.
ಸಿನಿಮಾದಲ್ಲಿ ಸಾವರ್ಕರ್ ಪಾತ್ರದಲ್ಲಿ ರಣದೀಪ್ ಹೂಡಾ ಕಾಣಿಸಿಕೊಂಡಿದ್ದು, ಪಾತ್ರದ ಮೇಲಿನ ಗೌರವ ಹಾಗೂ ಬದ್ಧತೆಗಾಗಿ ರಣದೀಪ್ ಹೂಡಾ ಅಚ್ಚರಿಯ ರೀತಿಯಲ್ಲಿ ಬಾಡಿ ಟ್ರಾನ್ಸ್ಫಾರ್ಮೇಷನ್ ಮಾಡಿಕೊಂಡಿದ್ದಾರೆ.
‘ಸ್ವಾತಂತ್ರ್ಯ ವೀರ ಸಾವರ್ಕರ್’ ಸಿನಿಮಾ ಮಾರ್ಚ್ 22ರಂದು ಬಿಡುಗಡೆ ಆಗಲಿದೆ. ಸಿನಿಮಾದ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಇರುವಾಗ ರಣದೀಪ್ ಹೂಡಾ ಅವರು ಒಂದು ಫೋಟೋ ಹಂಚಿಕೊಂಡಿದ್ದಾರೆ. ಹೂಡಾ ಹಂಚಿಕೊಂಡಿರುವ ಫೋಟೋದಲ್ಲಿ ಗುರುತೇ ಸಿಗದಷ್ಟು ಬದಲಾಗಿದ್ದಾರೆ.
ಕಟ್ಟುಮಸ್ತಾದ ಬಾಡಿ ಹೊಂದಿದ್ದ ರಣದೀಪ್ ಹೂಡಾ ಅವರು ಸಾವರ್ಕರ್ ಪಾತ್ರಕ್ಕಾಗಿ ಸಿಕ್ಕಾಪಟ್ಟೆ ತೆಳ್ಳಗಾಗಿದ್ದಾರೆ. ಅಂದಾಜು 30 ಕೆಜಿ ದೇಹದ ತೂಕವನ್ನು ಅವರು ಕಡಿಮೆ ಮಾಡಿಕೊಂಡಿದ್ದು, ಎದೆಗೂಡಿನ ಮೂಳೆಗಳು ಕಾಣುವ ರೀತಿಯಲ್ಲಿ ಬದಲಾಗಿದ್ದಾರೆ. ಇವರಿಗೆ ಸಿನಿಮಾದ ಮೇಲಿನ ಪ್ರೀತಿ ನೋಡಿ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.
ರಣದೀಪ್ ಹೂಡಾ ನಟನೆಯ ‘ಸ್ವಾತಂತ್ರ್ಯ ವೀರ ಸಾವರ್ಕರ್’ ಚಿತ್ರ ಮಾರ್ಚ್ 22ರಂದು ತೆರೆಗೆ ಬರ್ತಿದ್ದು ನಟಿ ಅಂಕಿತಾ ಲೋಖಂಡೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ತುಂಬಾ ಸ್ಲಿಮ್ ಆಗಿ ಕಾಣ್ತಿರುವ ರಣದೀಪ್ ಹೂಡಾ, ಶಾರ್ಟ್ಸ್ ತೊಟ್ಟಿದ್ದಾರೆ. ಈ ಫೋಟೋವನ್ನು ಹಂಚಿಕೊಂಡ ರಣದೀಪ್, “ಕಾಲಾ ಪಾನಿ” ಎಂದು ಬರೆದಿದ್ದಾರೆ. ರಣದೀಪ್ ಸೆಲ್ಯುಲಾರ್ ಜೈಲ್ ದೃಶ್ಯದ ಚಿತ್ರೀಕರಣದ ಸಮಯದಲ್ಲಿ ಈ ಫೋಟೋ ತೆಗೆಯಲಾಗಿದೆ ಎನ್ನಲಾಗ್ತಿದೆ.
https://www.facebook.com/photo.php?fbid=1010276120454417&set=a.290792479069455&type=3&ref=embed_post
ಇನ್ನು ಚಿತ್ರವು ಇತಿಹಾಸವನ್ನು ಹೊಸ ಪೀಳಿಗೆಗೆ ಕೊಂಡೊಯ್ಯುವ ಕೆಲಸ ಮಾಡುತ್ತದೆ ಎಂದು ರಂಜಿತ್ ಸಾವರ್ಕರ್ ಹೇಳಿದ್ರು. ರಣದೀಪ್ ಹೂಡಾ ಅವರು ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಚಿತ್ರದಲ್ಲಿ ಮುಖ್ಯ ಪಾತ್ರವನ್ನು ನಿರ್ವಹಿಸಿದ್ದಾರೆ ಮಾತ್ರವಲ್ಲದೆ ಅವರೇ ಚಿತ್ರವನ್ನು ನಿರ್ದೇಶಿಸಿದ್ದಾರೆ . ನಿರ್ದೇಶಕರಾಗಿ ಇದು ಅವರ ಮೊದಲ ಚಿತ್ರ. ರಣದೀಪ್ ಹೂಡಾ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಚಿತ್ರವನ್ನು ತಾವೇ ನಿರ್ಮಿಸಿದ್ದಾರೆ.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…