ಮುಂಬೈ: ವಿನಾಯಕ್ ದಾಮೋದರ್ ಸಾವರ್ಕರ್ ಅವರ ಬದುಕಿನ ವಿವರವನ್ನು ಆಧರಿಸಿ ಸಿನಿಮಾ ‘ಸ್ವಾತಂತ್ರ್ಯ ವೀರ ಸಾವರ್ಕರ್’ ತಯಾರಾಗುತ್ತಿದೆ. ಈ ಚಿತ್ರಕ್ಕೆ ಬಾಲಿವುಡ್ ನಟ ರಣದೀಪ್ ಹೂಡಾ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಅಲ್ಲದೇ ನಿರ್ದೇಶನ ಕೂಡ ಅವರೇ ಮಾಡಿದ್ದಾರೆ.
ಮೊನ್ನೆಯಷ್ಟೇ ಸ್ವಾತಂತ್ರ್ಯ ವೀರ ಸಾವರ್ಕರ್ ಚಿತ್ರದ ಟ್ರೇಲರ್ ಬಿಡುಗಡೆಯಾಗಿತ್ತು. ಈ ಟ್ರೇಲರ್ ನೋಡಿದ ಅಭಿಮಾನಿಗಳಲ್ಲಿ ಸಿನಿಮಾದ ಬಗ್ಗೆ ನಿರೀಕ್ಷೆ ದುಪ್ಪಟ್ಟಾಗಿದೆ.
ಆ ಪಾತ್ರದ ಮೇಲಿನ ಬದ್ಧತೆಗಾಗಿ ರಣದೀಪ್ ಹೂಡಾ ಅವರು ಬಾಡಿ ಟ್ರಾನ್ಸ್ಫಾರ್ಮೇಷನ್ ಮಾಡಿಕೊಂಡಿದ್ದಾರೆ. ಅವರು ಬದಲಾದ ಪರಿ ಕಂಡು ಅಭಿಮಾನಿಗಳಿಗೆ ಅಚ್ಚರಿ ಆಗಿದೆ.
ರಣದೀಪ್ ಹೂಡಾ ಅವರ ಫೋಟೋವೊಂದು ಸಾಮಾಜಿಕ ಜಾಲತಾಣಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಫೋಟೋದಲ್ಲಿ ವೀರ್ ಸಾವರ್ಕರ್ ಚಿತ್ರಕ್ಕಾಗಿ ತಮ್ಮ ದೇಹದ ತೂಕವನ್ನು ಬರೋಬ್ಬರಿ 30 ಕೆಜಿ ಇಳಿಸಿಕೊಂಡಿದ್ದಾರೆ. ಕಟ್ಟುಮಸ್ತಾದ ಬಾಡಿ ಹೊಂದಿದ್ದ ರಣದೀಪ್ ಹೂಡಾ ಅವರು ಸಾವರ್ಕರ್ ಪಾತ್ರಕ್ಕಾಗಿ ಸಿಕ್ಕಾಪಟ್ಟೆ ತೆಳ್ಳಗಾಗಿದ್ದಾರೆ.
ಈ ಸಿನಿಮಾದಲ್ಲಿ ರಣದೀಪ್ ಹೂಡಾ ಜೊತೆ ನಟಿ ಅಂಕಿತಾ ಲೋಖಂಡೆ ಕೂಡ ಒಂದು ಪ್ರಮುಖ ಪಾತ್ರ ಮಾಡಿದ್ದಾರೆ. ಮಾರ್ಚ್ 22ರಂದು ಹಿಂದಿ ಮಾತ್ರವಲ್ಲದೇ ಮರಾಠಿ ಭಾಷೆಯಲ್ಲೂ ಈ ಸಿನಿಮಾ ಬಿಡುಗಡೆ ಆಗಲಿದೆ.
‘ಸ್ವಾತಂತ್ರ್ಯ ವೀರ ಸಾವರ್ಕರ್’ ಸಿನಿಮಾ ಮಾರ್ಚ್ 22ರಂದು ಬಿಡುಗಡೆ ಆಗಲಿದೆ.
ಕೊಪ್ಪಾ ತಾಲೂಕಿನ ಕಾಡ್ಕೆರೆಯಲ್ಲಿ ಕುಡಿಯುವ ನೀರಿನ ಹಳ್ಳಕ್ಕೆ ಪ್ರಭಾವಿಗಳು ನಿರ್ಮಿಸಿರುವ ತಡೆಗೋಡೆಯನ್ನು ತೆರವುಗೊಳಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಡಳಿತವನ್ನು…
ಕಾಡಾನೆ ಹಾವಳಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಒಂದು ವರ್ಷದ ಅವಧಿಯಲ್ಲಿ ಐದು ಜನ ಪ್ರಾಣ ಕಳೆದುಕೊಂಡಿದ್ದಾರೆ.
ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಜೋಡಿ ಕೊಲೆ ಮಾಡಲಾದ ಘಟನೆ ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ನಡೆದಿದೆ.
ದೊಡ್ಡ ದೊಡ್ಡವರ ಕಷ್ಟ ಕೇಳಲು ದೊಡ್ಡ ದೊಡ್ಡವರಿದ್ದಾರೆ. ಆದರೆ ಜಗತ್ತಿಗೆ ಅನ್ನ ನೀಡುವ ರೈತನ ಕಷ್ಟ ಕೇಳುವ ಮನಸ್ಸು ದೊಡ್ಡವರಿಗಿಲ್ಲ…
ಎಲ್ಲರೂ ಮೂಗುಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಮೈಸೂರಿನ ಸರ್ಕಾರಿ ಮೆಡಿಕಲ್ ಕಾಲೇಜು ಬಳಿಯ ಶವಾಗಾರದ ಬಳಿ ಎದುರಾಗಿದೆ. ಇದಕ್ಕೆ ಶವಾಗಾರದ ಶೀತಲ…
“ದಕ್ಷಿಣ ಭಾರತೀಯರು ಆಫ್ರಿಕನ್ನರಂತೆ ಇದ್ದಾರೆ” ಎಂಬುದಾಗಿ ಹೇಳುವ ಮೂಲಕ ಮನುಷ್ಯರ ಚರ್ಮದ ಬಣ್ಣದ ಕುರಿತು ಕೀಳು ಹೇಳಿಕೆ ನೀಡಿ ವಿವಾದ…