ವೇಣು ಸ್ವಾಮಿ ತೆಲುಗು ರಾಜ್ಯಗಳಲ್ಲಿ ಅತಿಜನಪ್ರಿಯ ಜ್ಯೋತಿಷಿ. ಹಲವು ಸೆಲೆಬ್ರಿಟಿಗಳು ಸೇರಿದಂತೆ ಗಣ್ಯರು ಇವರಲ್ಲಿ ಜ್ಯೋತಿಷ್ಯ ಕೇಳುತ್ತಾರೆ. ಆ ವೇಣುಸ್ವಾಮಿ ಇದೀಗ ರಶ್ಮಿಕಾ ಮಂದಣ್ಣ ಬಗ್ಗೆ ವೈವಾಹಿಕ ಬದುಕಿನ ಬಗ್ಗೆ ಮಾತನಾಡಿದ್ದಾರೆ. ರಶ್ಮಿಕಾ ಮಂದಣ್ಣ ತಮ್ಮ ವೃತ್ತಿ ಬದುಕಿನ ಆರಂಭದಲ್ಲಿದ್ದಾಗ ಇದೇ ವೇಣು ಸ್ವಾಮಿ ಅವರಿಂದ ವಿಶೇಷ ಪೂಜೆ ಮಾಡಿಸಿದ್ದರು. ಇವರ ಸಲಹೆ ಪಡೆದೇ ರಕ್ಷಿತ್ ಶೆಟ್ಟಿ ಜೊತೆಗಿನ ಮದುವೆ ಮುರಿದುಕೊಂಡು ವೃತ್ತಿ ಬದುಕಿನ ಕಡೆಗೆ ಹೆಚ್ಚು ಗಮನವಹಿಸಿ ಯಶಸ್ಸು ಗಳಿಸಿದ್ದರು.
ಇತ್ತಿಚೆಗೆ ಯೂಟ್ಯೂಬ್ ಚಾನೆಲ್ ಒಂದಕ್ಕೆ ನೀಡಿರುವ ಸಂದರ್ಶನದಲ್ಲಿ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಬಗ್ಗೆ ಮಾತನಾಡಿರುವ ವೇಣು ಸ್ವಾಮಿ, ‘‘ರಶ್ಮಿಕಾ ಹಾಗೂ ವಿಜಯ್ ದೇವರೊಂಡ ಪರಸ್ಪರ ಪ್ರೀತಿಯಲ್ಲಿರುವುದು ಗುಟ್ಟೇನೂ ಅಲ್ಲ. ಅವರಿಬ್ಬರು ವಿವಾಹ ಆಗಲಿದ್ದಾರೆ. ಆದರೆ ವಿವಾಹವಾದ ಬಳಿಕ ಇಬ್ಬರೂ ದೂರಾಗಲಿದ್ದಾರೆ. ಇದು ಖಚಿತ’’ ಎಂದಿದ್ದಾರೆ.
‘‘ವಿಜಯ್ ದೇವರಕೊಂಡ ಜೊತೆ ಮದುವೆಯಾದರೆ ವಿಚ್ಛೇದನ ಆಗಲಿದೆ ಎಂದು ನಾನು ನೇರವಾಗಿ ರಶ್ಮಿಕಾ ಮಂದಣ್ಣ ಅವರಿಗೆ ಹೇಳಿದ್ದೇನೆ. ಇದೇ ಕಾರಣಕ್ಕೆ ಅವರು ನನ್ನೊಂದಿಗೆ ಮಾತನಾಡುವುದು ಬಿಟ್ಟು, ನನ್ನ ಸಂಪರ್ಕ ಕಡಿದುಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ಸಮಾಜಕ್ಕೆ ನಾಯಕಿ ಆಗಿರಬಹುದು ಆದರೆ ನನಗೆ ಕೇವಲ ಕ್ಲೈಂಟ್ ಅಷ್ಟೆ. ಅವರ ಜನಪ್ರಿಯತೆ ನೋಡಿ ನಾನು ಭವಿಷ್ಯ ಹೇಳುವುದಿಲ್ಲ, ಅವರ ಗ್ರಹಗತಿ ನೋಡಿ ಭವಿಷ್ಯ ಹೇಳುತ್ತೇನೆ. ನಾನು ಹೇಳಿದ ನಿಜ ಅವರಿಗೆ ಹಿಡಿಸಲಿಲ್ಲ, ಇರಲಿ ಪರವಾಗಿಲ್ಲ, ಆದರೆ ಅವರಿಬ್ಬರು ಮದುವೆಯಾಗಿ ದೂರಾಗುವುದು ಖಚಿತ’’ ಎಂದಿದ್ದಾರೆ ವೇಣು ಸ್ವಾಮಿ.
‘ಕಿರಿಕ್ ಪಾರ್ಟಿ’ ಸಿನಿಮಾದಲ್ಲಿ ನಟಿಸಿದ ಬಳಿಕ ವೇಣು ಸ್ವಾಮಿ ಅವರ ಬಳಿ ರಶ್ಮಿಕಾ ಮಂದಣ್ಣ ವಿಶೇಷ ಪೂಜೆ ಮಾಡಿಸಿದ್ದರು. ಆ ವೇಳೆಗೆ ರಕ್ಷಿತ್ ಶೆಟ್ಟಿ ಜೊತೆ ರಶ್ಮಿಕಾರ ಮದುವೆ ಸಹ ನಿಗದಿಯಾಗಿತ್ತು. ಆದರೆ ವೇಣು ಸ್ವಾಮಿಯ ಸಲಹೆಯಂತೆ ರಕ್ಷಿತ್ ಶೆಟ್ಟಿ ಜೊತೆ ಮದುವೆ ಮುರಿದುಕೊಂಡರು ರಶ್ಮಿಕಾ. ಈ ವಿಷಯವನ್ನು ಸ್ವತಃ ವೇಣು ಸ್ವಾಮಿ ಹಲವು ಸಂದರ್ಶನಗಳಲ್ಲಿ ಹೇಳಿಕೊಂಡಿದ್ದಾರೆ.