News Karnataka Kannada
Sunday, April 28 2024
ಮನರಂಜನೆ

“ನಾವು ಇಂದು ಸಾವಿನ ದವಡೆಯಿಂದ ಪಾರಾಗಿದ್ದೇವೆ” ಎಂದ ರಶ್ಮಿಕಾ ಮಂದಣ್ಣ !

Rash
Photo Credit : News Kannada

ಮುಂಬೈ:  ನಟಿ ರಶ್ಮಿಕಾ ಮಂದಣ್ಣ ಸಂಚರಿಸುತ್ತಿದ್ದ ವಿಮಾನ ತುರ್ತು ಭೂ ಸ್ಪರ್ಶ ಮಾಡಿದೆ. ಇದರಿಂದ ಕೆಲ ಹೊತ್ತು ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಇದರ ಬಗ್ಗೆ ಖುದ್ದು ರಶ್ಮಿಕಾ ಮಂದಣ್ಣ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದಾರೆ.

ವಿಮಾನದಲ್ಲಿ ಕುಳಿತಿರುವ- ಫೋಟೋದ ಜೊತೆ ಆತಂಕದ ಕ್ಷಣಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.

ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ರಶ್ಮಿಕಾ ಅವರು ನಟಿ ಶ್ರದ್ಧಾ ಅವರೊಂದಿಗೆ ಸೆಲ್ಫಿ ಹಂಚಿಕೊಂಡಿದ್ದಾರೆ. “ನಾವು ಇಂದು ಸಾವಿನ ದವಡೆಯಿಂದ ಪಾರಾಗಿದ್ದೇವೆ” ಎಂದು ಬರೆದುಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ಮುಂಬೈನಿಂದ ಹೈದರಾಬಾದ್‌ಗೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ತಾಂತ್ರಿಕ ಸಮಸ್ಯೆಯಿಂದ ವಿಮಾನ 30 ನಿಮಿಷಗಳ ನಂತರ ಮತ್ತೆ ಮುಂಬೈಗೆ ಮರಳಿತು. ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.

ರಶ್ಮಿಕಾ ಮಂದಣ್ಣ ಸದ್ಯ ನ್ಯಾಷನಲ್‌ ಕ್ರಶ್‌ ಎಂದೇ ಖ್ಯಾತರಾಗಿದ್ದಾರೆ. ಅನಿಮಲ್ ಯಶಸ್ಸಿನ ಬಳಿಕ, ಪುಷ್ಪಾ 2 ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಸುಕುಮಾರ್ ಬರೆದು ನಿರ್ದೇಶಿಸಿದ ಪುಷ್ಪ: ದಿ ರೈಸ್ 2021 ರಲ್ಲಿ ಬಿಡುಗಡೆಯಾಯಿತು. ಅದು ಬ್ಲಾಕ್ ಬಸ್ಟರ್ ಹಿಟ್‌ ಆಯಿತು. ಚಿತ್ರದಲ್ಲಿ ಶ್ರೀವಲ್ಲಿ ಪಾತ್ರದಲ್ಲಿ ರಶ್ಮಿಕಾ ನಟಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು