ಕಾಂತಾರ ಮೂಲಕ ಮೋಡಿ ಮಾಡಿದ ನಟ ನಿರ್ದೇಶಕ ರಿಷಬ್ ಶೆಟ್ಟಿ. ಸದ್ಯ ಪ್ರೀಕ್ವೆಲ್ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಹೊಸ ವಿಚಾರವೊಂದು ಹೊರಬಿದ್ದಿದೆ. ರಾಮ್ರಾಜ್ ಬ್ರ್ಯಾಂಡ್ ಅಂಬಾಸಿಡರ್ ಆಗಿ ಆಯ್ಕೆ ಆಗಿದ್ದಾರೆ.
ಕಳೆದ ಎರಡು ವರ್ಷಗಳಿಂದ ನಟ ರಾಕಿಂಗ್ ಯಶ್ ಯಶ್ ಈ ಸಂಸ್ಥೆಯ ಬ್ರ್ಯಾಂಡ್ ಅಂಬಾಸಿಡರ್ ಆಗಿದ್ದರು. ಈ ವರ್ಷ ರಿಷಬ್ ಅವರು ಅಂಬಾಸಿಡರ್ ಆಗಿ ಆಯ್ಕೆ ಆಗಿದ್ದಾರೆ. ಪಾಲಾಗಿದೆ. ಇ ‘ಕಾಂತಾರ’ ಸಿನಿಮಾ ಸಮಯದಿಂದಲೂ ರಿಷಬ್ ಹೆಚ್ಚು ಪಂಚೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಜಾಹೀರಾತು ಸಹ ರಿಲೀಸ್ ಆಗಿ ವೈರಲ್ ಆಗುತ್ತಿದೆ. ಬಹಳ ಸೊಗಸಾಗಿ ಅದನ್ನು ಕಟ್ಟಿಕೊಡಲಾಗಿದೆ. ಕನ್ನಡದಲ್ಲಿ ಈ ಜಾಹೀರಾತು ಮೂಡಿ ಬಂದಿದೆ.
“ವಿವಿಧತೆಯಲ್ಲಿ ಏಕತೆ ನಮ್ಮ ಹೆಮ್ಮೆ. ಪ್ರತಿ ನೂರು ಕಿಲೋಮೀಟರ್ಗೆ ಒಂದು ಸಂಸ್ಕೃತಿ ಆದರೆ ನೆಲೆ ಒಂದೇ. ಹೊಸ ಮನೆಯ ಗೃಹ ಪ್ರವೇಶದ ಹಾಗೆ. ಹಾಲು ಉಕ್ಕಿದರೂ ಹುಗ್ಗಿ ಉಕ್ಕಿದರೂ ಹರುಷದ ಘೋಷ ಒಂದೇ ಆಹಾ ಸಕ್ಕರ್ ಪಂಗಲ್, 200 ಕಿಲೋ ಮೀಟರ್ ದಾಟಿದರೆ ಉಟೋಪಚಾರ ಬದಲಾಗುತ್ತದೆ. ಆದರೆ ಸಂಕ್ರಾಂತಿ ಸಿಹಿ ಇರಲಿ, ಓಣಂನ ಸವಿ ಇರಲಿ ರುಚಿ ಒಂದೇ. 400 ಕಿಲೋ ಮೀಟರ್ ದಾಟಿದರೆ ಭಾಷೆ ಬದಲಾಗುತ್ತದೆ. ಆದರೆ ಮನ ತುಂಬಿ ಹಾರೈಸುವುದು ಒಂದೇ ಸದಾ ಸುಖವಾಗಿರಿ. 600 ಕಿಲೋಮೀಟರ್ ದಾಟಿದರೆ ಆಚಾರ ವಿಚಾರ ಬದಲಾಗುತ್ತದೆ ಆದರೆ ಮನಸ್ಸುಗಳು ಒಂದಾಗಿಸುವ ಬಾಂಧವ್ಯ ಒಂದೇ” ಎಂದು ರಿಷಬ್ ವಾಯ್ಸ್ ಓವರ್ ಹಿನ್ನೆಲೆಯಲ್ಲಿ ಜಾಹೀರಾತು ಬಂದಿದೆ.
ಪಟ್ಟಣದಲ್ಲಿ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಸ್ಥಳೀಯ ಆಡಳಿತದ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಬೇಸರಗೊಂಡಿದ್ದಾರೆ. ಪಟ್ಟಣದಲ್ಲಿ ಒಟ್ಟು 27 ವಾರ್ಡ್ಗಳು…
ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಮೇ.19 ರಂದು ಭಾನುವಾರ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ ಸಾಯಿಬಾಬಾ…
ಗಡಿಜಿಲ್ಲೆ ವರುಣಾರ್ಭಟ ಮುಂದುವರೆದಿದ್ದು ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಯಿತು.
ಮುಂದಿನ ತಿಂಗಳು ಅಮೆರಿಕ ಮತ್ತು ವೆಸ್ಟ್ ಇಂಡೀಸ್ ಜಂಟಿ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್ಗಾಗಿ ಟೀಮ್ ಇಂಡಿಯಾದ ಮೊದಲ ಬ್ಯಾಚ್…
ಖಾಸಗಿ ಕಾರ್ಯಕ್ರಮದಲ್ಲಿ ಬಸವಕಲ್ಯಾಣ ಶಾಸಕ ಶರಣು ಸಲಗರ್ ಅವರು ಪತ್ನಿ ಹಾಗು ಮಕ್ಕಳೊಂದಿಗೆ ಹೆಜ್ಜೆ ಹಾಕಿದ್ದಾರೆ. ಶಾಸಕ ಶರಣು ಸಲಗರ್ರಿಂದ…
ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…