Categories: ಮನರಂಜನೆ

ಕೇರಳ ಸ್ಟೋರಿ ಸತ್ಯವೆಂದು ನಿರೂಪಿಸುವವರಿಗೆ 1 ಕೋಟಿ ರೂ. ಬಹುಮಾನ

ತಿರುವನಂತಪುರಂ: “ದಿ ಕೇರಳ ಸ್ಟೋರಿ” ಚಲನಚಿತ್ರದಲ್ಲಿ ಇರುವ ಅಂಶಗಳು ಸತ್ಯವೆಂದು ನಿರೂಪಿಸುವವವರಿಗೆ 1 ಕೋಟಿ ರೂ. ನೀಡುವುದಾಗಿ ಯುಡಿಎಫ್‌ನ ಯುವ ಘಟಕ ಮುಸ್ಲಿಂ ಲೀಗ್‌ ಮುಖ್ಯಸ್ಥ ಮುಖ್ಯಸ್ಥ ಫಿರೋಜ್ ಹೇಳಿದ್ದಾರೆ.

ಮೇ 5 ರಂದು ಚಲನಚಿತ್ರ ಬಿಡುಗಡೆಯಾಗಲಿದ್ದು, ಕೇರಳದಿಂದ ಸುಮಾರು 32,000 ಮಹಿಳೆಯರನ್ನು ಬ್ರೈನ್ ವಾಶ್ ಮಾಡಿ, ಮತಾಂತರಗೊಳಿಸಿ ಭಾರತ ಮತ್ತು ವಿದೇಶಗಳಲ್ಲಿ ಭಯೋತ್ಪಾದಕ ಕಾರ್ಯಾಚರಣೆಗಳಿಗೆ ಅವರನ್ನು ಬಳಕೆ ಮಾಡಿಕೊಂಡಿದ್ದು, ನಂತರ ಅವರು ನಾಪತ್ತೆಯಾಗಿದ್ದಾರೆ ಎಂಬ ಕಥಾಹಂದರ ಹೊಂದಿದೆ.

ಅದೇ ರೀತಿ ಮತಾಂತರಗೊಂಡ ಮತ್ತು ನಂತರ ಇಸ್ಲಾಮಿಕ್ ಸ್ಟೇಟ್‌ಗೆ ಸೇರಿದ ಕೇರಳದ ಮಹಿಳೆಯರನ್ನು ಹೆಸರಿಸುವ ಯಾರಿಗಾದರೂ 11 ಲಕ್ಷ ರೂಪಾಯಿಗಳನ್ನು ನೀಡುವುದಾಗಿ ವಕೀಲ ಮತ್ತು ನಟ ಶುಕ್ಕೂರ್ ಹೇಳಿದ್ದಾರೆ.

ಚಿತ್ರದ ಟೀಸರ್ ಬಿಡುಗಡೆಯಾದ ಕೂಡಲೇ ಆಡಳಿತಾರೂಢ ಸಿಪಿಐ-ಎಂ ನೇತೃತ್ವದ ಎಡಪಕ್ಷಗಳು ಮತ್ತು ಯುಡಿಎಫ್ ಚಿತ್ರ ಪ್ರದರ್ಶನ ಮಾಡಬಾರದು ಎಂದು ಒತ್ತಾಯಿಸಿದವು. ಕೇರಳದ ಸಂಸ್ಕೃತಿ ಸಚಿವ ಸಾಜಿ ಚೆರಿಯನ್, ‘ದಿ ಕೇರಳ ಸ್ಟೋರಿ’ ತೆರೆಕಂಡರೆ ಜನರು ಬಹಿಷ್ಕಾರ ಹಾಕಬೇಕು. ಅಲ್ಲದೆ ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದರು.

Gayathri SG

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

6 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

6 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

6 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

7 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

7 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

7 hours ago