ಮುಂಬೈ : ಸಲ್ಮಾನ್ ಖಾನ್ ಅವರಿಗೆ ಜೀವ ಬೆದರಿಕೆ ಬರುತ್ತಲೇ ಇತ್ತು ಆದ್ರೆ ಈಗ ಅವರ ವ್ಯಕ್ತಿಯ ಮೇಲೆ ರಾಡ್ ಮತ್ತು ಕಲ್ಲುಗಳಿಂದ ಹಲ್ಲೆ ನಡೆದ ಘಟನೆ ನಡೆದಿದೆ.
ಹಲ್ಲೆಗೊಳಗಾದ ವ್ಯಕ್ತಿಯನ್ನು ಪಾಲೇಶ್ವರ್ ಚೌಹಾಣ್ ಎಂದು ಗುರುತಿಸಲಾಗಿದೆ.
ಸಾಲದ ವಿಚಾರಕ್ಕೆ ಈ ಗಲಾಟೆ ನಡೆದಿದೆ ಎಂದು ತಿಳಿದು ಬಂದಿದ್ದು, ಇದು ಹಣದ ವಿಚಾರಕ್ಕೆ ನಡೆದ ಗಲಾಟೆ ಎಂದು ತಿಳಿದ ಬಳಿಕ ಸಲ್ಲು ಫ್ಯಾನ್ಸ್ಸಮಾಧಾನಗೊಂಡಿದ್ದರೆ.
ಹಲ್ಲೆಗೊಳಗಾದ ವ್ಯಕ್ತಿ ಸಲ್ಮಾನ್ ಖಾನ್ ಅವರ ಪ್ರೊಡಕ್ಷನ್ ಹೌಸ್ನಲ್ಲಿ ಮೇಕಪ್ ಕಲಾವಿದರಾಗಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಸಲ್ಮಾನ್ ಖಾನ್ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಪಾಲೇಶ್ವರ್ ನೀಡಿದ ದೂರಿನ ಮೇರೆಗೆ ಪೊಲೀಸರು ಸತೀಶ್ ಹಾಗೂ ಆತನ ಸಹಚರರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಮುಂದೇನು ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.
ನಟ ಸಲ್ಮಾನ್ ಖಾನ್ಅವರಿಗೆ ನಿರಂತರವಾಗಿ ಜೀವ ಬೆದರಿಕೆ ಬರುತ್ತಲೇ ಇದೆ. ಇದು ಸಲ್ಲು ಅಭಿಮಾನಿಗಳ ಆತಂಕಕ್ಕೆ ಕಾರಣ ಆಗಿದೆ. ಸಲ್ಮಾನ್ ಖಾನ್ ಅವರಿಗೆ ಈಗಾಗಲೇ ಸರ್ಕಾರದ ಕಡೆಯಿಂದ ವೈ ಪ್ಲಸ್ ಕೆಟಗರಿ ಭದ್ರತೆ ನೀಡಲಾಗಿದೆ.