ಬಾಲಿವುಡ್ ನಟ ಶಾರುಖ್ ಖಾನ್ ಒಡೆತನದ ‘ಕೋಲ್ಕತ್ತಾ ನೈಟ್ ರೈಡರ್ಸ್’ ತಂಡ ಸುಲಭದಲ್ಲಿ ಈ ವರ್ಷದ ಐಪಿಎಲ್ ಫಿನಾಲೆಗೆ ಏರಿದೆ. ಹೈದರಾಬಾದ್ ನೀಡಿದ 159 ರನ್​ಗಳ ಗುರಿಯನ್ನು ಕೇವಲ 13.4 ಓವರ್​ಗಳಲ್ಲಿ ತಲುಪಿ ಕೆಕೆಆರ್​ ಗೆಲುವಿನ ನಗೆ ಬೀರಿದೆ. ಇದನ್ನು ಶಾರುಖ್ ಖಾನ್ ಅವರು ಸಂಭ್ರಮಿಸಿದ್ದಾರೆ.

ಈ ಮಧ್ಯೆ ತಮ್ಮಿಂದಾದ ಅಚಾತುರ್ಯಕ್ಕೆ ಅವರು ಮಾಜಿ ಕ್ರಿಕೆಟಿಗ ಸುರೇಶ್ ರೈನಾ, ಕಮೆಂಟೇಟರ್ ಆಕಾಶ್ ಚೋಪ್ರಾ ಬಳಿ ಅವರು ಕ್ಷಮೆ ಕೇಳಿದ್ದಾರೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಕೆಕೆಆರ್ ಹಾಗೂ ಎಸ್​ಆರ್​ಎಚ್​ ನಡುವೆ ಪಂದ್ಯ ನಡೆದಿದೆ. ಪಂದ್ಯ ಮುಗಿದ ಬಳಿಕ ಶಾರುಖ್ ಖಾನ್ ಅವರು ಮೈದಾನಕ್ಕೆ ಇಳಿದರು. ಅಷ್ಟೇ ಅಲ್ಲ ಅಭಿಮಾನಿಗಳತ್ತ ಕೈ ಬೀಸುತ್ತಾ ಬಂದರು. ಸುರೇಶ್ ರೈನಾ, ಆಕಾಶ್ ಚೋಪ್ರಾ ಲೈವ್​ನಲ್ಲಿ ಮಾತನಾಡುತ್ತಿರುವುದನ್ನು ಶಾರುಖ್ ಗಮನಿಸಲೇ ಇಲ್ಲ. ಅವರತ್ತ ನುಗ್ಗಿಯೇ ಬಿಟ್ಟರು.

ಸುರೇಶ್ ಹಾಗೂ ಆಕಾಶ್ ಲೈವ್​ನಲ್ಲಿದ್ದಾರೆ ಅನ್ನೋ ವಿಚಾರ ಆ ಬಳಿಕ ಶಾರುಖ್​ಗೆ ಗೊತ್ತಾಗಿದೆ. ಹೀಗಾಗಿ, ಅವರು ಕ್ಷಮೆ ಕೇಳಿದ್ದಾರೆ. ಎಲ್ಲರಿಗೂ ಹಗ್ ಕೊಟ್ಟು ಆ ಬಳಿಕ ಕೈ ಮುಗಿದ ಅಲ್ಲಿಂದ ತೆರಳಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

— 😎Sourav Srkian Das😎 (@SrkianDas04) May 21, 2024