“ಹಿಟ್ ಆಂಡ್ ರನ್”ಗೆ ಇಬ್ಬರ ಬಲಿ ಪ್ರಕರಣ, ಸ್ಟ್ಯಾಂಡ್ ಅಪ್ ಕಾಮಿಡಿಯನ್ ಅರ್ಪಿತ್ ಆರೆಸ್ಟ್

ಸುರತ್ಕಲ್: ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿ-ಪಡುಪಣಂಬೂರು ರಾಷ್ಟ್ರೀಯ ಹೆದ್ದಾರಿಯ ಪೆಟ್ರೋಲ್ ಬಂಕ್ ಬಳಿ ಕಳೆದ ಮಂಗಳವಾರ ಮಧ್ಯರಾತ್ರಿ 1 ಗಂಟೆಯ ಸುಮಾರಿಗೆ ಹಿಟ್ ಆಂಡ್ ರನ್ ಗೆ ಇಬ್ಬರು ಬಲಿಯಾಗಿ ಒಬ್ಬ ಗಂಭೀರ ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿದ್ದ ಕಾರ್ ಚಾಲಕನನ್ನು ಮಂಗಳೂರು ಉತ್ತರ ಸಂಚಾರಿ ಠಾಣಾ ಪೊಲೀಸರು ಕಾರ್ ಸಮೇತ ವಶಕ್ಕೆ ಪಡೆದಿದ್ದು ಆತ ಜಾಮೀನು ಪಡೆದುಕೊಂಡಿರುವ ಮಾಹಿತಿ ಲಭಿಸಿದೆ.

ಆರೋಪಿಯನ್ನು “ಮ್ಯಾಡ್ ಇನ್ ಕುಡ್ಲ” ಹೆಸರಿನ ಯೂಟ್ಯೂಬರ್ ಹಳೆಯಂಗಡಿ ಇಂದಿರಾನಗರ ನಿವಾಸಿ ಅರ್ಪಿತ್(35) ಎಂದು ಗುರುತಿಸಲಾಗಿದೆ.

ಮಧ್ಯಪ್ರದೇಶದಿಂದ ಕೇರಳ ಕಡೆಗೆ ಹೋಗುತ್ತಿದ್ದ ಲಾರಿಯ ಟೈರ್ ಪಂಕ್ಚರ್ ಆಗಿದ್ದು ಹೆದ್ದಾರಿ ಬದಿ ನಿಲ್ಲಿಸಿದ್ದ ವೇಳೆ ಅರ್ಪಿತ್ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿದ್ದ ಕಾರ್ ತೀರಾ ಎಡಗಡೆಗೆ ಬಂದು ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಬಬುಲು(23), ಆಚಲ್ ಸಿಂಗ್ (30) ಸ್ಥಳದಲ್ಲೇ ಸಾವನ್ನಪ್ಪಿದ್ದು ಅವರ ಶವದ ಭಾಗಗಳು ಹೆದ್ದಾರಿ ತುಂಬಾ ಚೆಲ್ಲಾಡಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದರು.

ಘಟನೆಯಲ್ಲಿ ಕೇರಳ ನಿವಾಸಿ ಅನೀಶ್(42) ಗಂಭೀರ ಗಾಯಗೊಂಡಿದ್ದಾರೆ.

Gayathri SG

Recent Posts

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನೆಯ ಕಾಲಿಗೆ ಗಾಯ; ನಿರ್ವಹಣೆ ನಿರ್ಲಕ್ಷ್ಯ ಆರೋಪ

ರಾಜ್ಯದ ಶ್ರೀಮಂತ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಆನೆ ಕಾಲಿಗೆ ಗಾಯವಾಗಿದೆ. ಆನೆ ಮಾವುತ ಶ್ರೀನಿವಾಸ್ ಮೇಲೆ ಆನೆಯ ನಿರ್ವಹಣೆಯ ನಿರ್ಲಕ್ಷ್ಯದ…

19 mins ago

ಕಾರ್ಕಳ ಜ್ಞಾನಸುಧಾ ಶಾಲೆಯ ವಿದ್ಯಾರ್ಥಿನಿ ಸಹನಾ ರಾಜ್ಯಕ್ಕೆ ತೃತೀಯ

ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಘೋಷಣೆಯಾಗಿದ್ದು, ಕಾರ್ಕಳ ತಾಲೂಕಿನ ಗಣಿತನಗರದ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ಸಹನಾ…

24 mins ago

ಸಲ್ಮಾನ್‌ ಖಾನ್‌ ʼಸಿಕಂದರ್‌ʼಗೆ ರಶ್ಮಿಕಾ ಮಂದಣ್ಣ ನಾಯಕಿ

ಕನ್ನಡದ ರಶ್ಮಿಕಾ ಮಂದಣ್ಣ ಅವರಿಗೆ ದಕ್ಷಿಣದ ಸಿನಿಮಾಗಳ ಬಳಿಕ ಬಿಟೌನ್ ನಲ್ಲಿ ಅದೃಷ್ಟ ಖುಲಾಯಿಸಿದೆ. ರಣ್ಬೀರ್ ಕಪೂರ್ ಅವರ 'ಅನಿಮಲ್'…

36 mins ago

ಇಂದು ಏರ್ ಇಂಡಿಯಾ ಎಕ್ಸ್​ಪ್ರೆಸ್​ನ 85 ವಿಮಾನ ಹಾರಾಟ ರದ್ದು

ಇಂದು ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ ಎಕ್ಸ್​ಪ್ರೆಸ್ ಸಂಸ್ಥೆಯ 85 ಫ್ಲೈಟ್​ಗಳು ರದ್ದಾಗಿವೆ.

43 mins ago

ಅಯೋಧ್ಯಾದಲ್ಲಿ ಬಾಲರಾಮನಿಗೆ ತಲೆಬಾಗಿ ನಮಿಸಿದ ರಾಜ್ಯಪಾಲ ಆರಿಫ್‌ ಮೊಹಮ್ಮದ್

ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್  ಖಾನ್‌ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿ ದೇವರಿಗೆ ನಮಿಸಿದರು.ಕೇರಳ ರಾಜಭವನದ ಎಕ್ಸ್ ನಲ್ಲಿನ…

46 mins ago

ಚಿಕನ್ ಶವರ್ಮಾ ವಿಷ ಏಕಾಗ್ತಿದೆ ಗೊತ್ತ; ಇದನ್ನೊಮ್ಮೆ ಓದಿ

ಚಿಕನ್ ಶವರ್ಮಾ ತಿಂದ 19 ವರ್ಷದ ತರುಣನೋರ್ವ ಸಾವಿಗೀಡಾದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಕೆಟ್ಟು ಹೋದ ಕೋಳಿ ಮಾಂಸವನ್ನು ಶವರ್ಮಾ…

1 hour ago