ಮನರಂಜನೆ

ಕನ್ನಡದಲ್ಲೂ ಬರಲಿದೆ ‘ಬೋಟ್​’ ಸಿನಿಮಾ: ಟೀಸರ್​ ನೋಡಿ ಮೆಚ್ಚಿದ ಸುದೀಪ್

ಬೆಂಗಳೂರು:  ಕಾಲಿವುಡ್​ನ ಜನಪ್ರಿಯ ಹಾಸ್ಯ ನಟ ಯೋಗಿ ಬಾಬು ಅವರು ಈಗ ಮತ್ತೆ ಹೀರೋ ಆಗಿ  ಎಂಟ್ರಿ ನೀಡುತ್ತಿದ್ದಾರೆ.

ಹೌದು! ಅವರು ನಟಿಸಿರುವ ‘ಬೋಟ್’  ಸಿನಿಮಾದ ಟೀಸರ್ ಈಗ ಬಿಡುಗಡೆ ಆಗಿದ್ದು, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ.

‘ಬೋಟ್’ ಸಿನಿಮಾ ಕನ್ನಡದ ಜೊತೆ ದಕ್ಷಿಣ ಭಾರತದ ಎಲ್ಲ ಭಾಷೆಯಲ್ಲೂ ಬಿಡುಗಡೆ ಆಗಲಿದೆ.ಅವರಿಗೆ ಕಿಚ್ಚ ಸುದೀಪ್​ ಅವರು ಸ್ವಾಗತ ಕೋರಿದ್ದಾರೆ. ‘ಬೋಟ್’ ಸಿನಿಮಾದ ಟೀಸರ್ ಹಂಚಿಕೊಂಡಿರುವ ಸುದೀಪ್​ ಅವರು ಇಡೀ ತಂಡಕ್ಕೆ ಶುಭ ಹಾರೈಸಿದ್ದು, ಈ ಮೂಲಕ ತಂಡಕ್ಕೆ ಕಿಚ್ಚ ಸುದೀಪ್ ಅವರು ಸಾಥ್​ ನೀಡಿದ್ದಾರೆ.

ಚಿಂಬು ದೇವನ್ ಅವರ ನಿರ್ದೇಶನದಲ್ಲಿ ‘ಬೋಟ್’ ಸಿನಿಮಾ ಮೂಡಿ ಬಂದಿದೆ. ಈ ಸಿನಿಮಾ ಸಂಪೂರ್ಣವಾಗಿ ಸಮುದ್ರದಲ್ಲಿಯೇ ಚಿತ್ರೀಕರಣಗೊಂಡಿದೆ.

‘ಬೋಟ್​’ ಸಿನಿಮಾದಲ್ಲಿ ಯೋಗಿ ಬಾಬು, ಗೌರಿ ಜಿ. ಕಿಶನ್ ಮುಂತಾದವರು ನಟಿಸಿದ್ದಾರೆ. ಗಿಬ್ರಾನ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಮಾದೇಶ್ ಮಾಣಿಕ್ಕಂ ಛಾಯಾಗ್ರಹಣ ಮಾಡಿದ್ದಾರೆ. ದಿನೇಶ್ ಅವರ ಸಂಕಲನ ಹಾಗೂ ಟಿ ಸಂತಾನಂ ಅವರ ಕಲಾ ನಿರ್ದೇಶನ ಈ ಸಿನಿಮಾಗಿದೆ. ಈ ಸಿನಿಮಾವನ್ನು ‘ಮಾಲಿ ಮತ್ತು ಮಾನ್ವಿ ಮೂವೀ ಮೇಕರ್ಸ್’ ಸಂಸ್ಥೆಯ ಮೂಲಕ ಪ್ರಭಾ ಪ್ರೇಮಕುಮಾರ್ ಅದ್ದೂರಿಯಾಗಿ ನಿರ್ಮಿಸಿದ್ದಾರೆ. ಫೆಬ್ರವರಿಯಲ್ಲಿ ಬಿಡುಗಡೆ ಆಗುವ ನಿರೀಕ್ಷೆ ಇದೆ.

Ashika S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

5 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

5 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

6 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

6 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

6 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

6 hours ago