News Karnataka Kannada
Saturday, April 27 2024
ಮನರಂಜನೆ

ಯುಪಿ ಸಿಎಂ ಯೋಗಿ ಭೇಟಿಯಾದ ಸೂಪರ್‌ ಸ್ಟಾರ್‌ ರಜನಿಕಾಂತ್‌

Superstar Rajinikanth meets UP CM Yogi Adityanath
Photo Credit : News Kannada

ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ರಾಜ್ಯಪಾಲ ಆನಂದಿಬೆನ್ ಪಟೇಲ್ ಅವರನ್ನು ಶನಿವಾರ ಸೂಪರ್‌ಸ್ಟಾರ್ ರಜನಿಕಾಂತ್ ಭೇಟಿಯಾದರು. ಇಂದು ಅವರು (ಭಾನುವಾರ) ಅಯೋಧ್ಯೆಗೆ ಭೇಟಿ ನೀಡಿ ರಾಮ್ ಲಲ್ಲಾಗೆ ನಮನ ಸಲ್ಲಿಸಲಿದ್ದಾರೆ.

ಶನಿವಾರ ಸಂಜೆ ಮುಖ್ಯಮಂತ್ರಿಗಳ ನಿವಾಸದಲ್ಲಿ ನಡೆದ ಸಭೆಯಲ್ಲಿ ರಜನಿಕಾಂತ್ ಅವರು ಯೋಗಿ ಆದಿತ್ಯನಾಥ್ ಅವರ ಪಾದ ಮುಟ್ಟಿ ಆಶೀರ್ವಾದ ಪಡೆದರು. ನಂತರ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಮತ್ತು ಇತರ ಗಣ್ಯರೊಂದಿಗೆ ಲಕ್ನೋದ ಥಿಯೇಟರ್‌ವೊಂದರಲ್ಲಿ ಜೈಲರ್‌ ಚಿತ್ರದ ವಿಶೇಷ ಪ್ರದರ್ಶನದಲ್ಲಿ ಪಾಲ್ಗೊಂಡರು.

ಸ್ವಲ್ಪ ಸಮಯ ಚಲನಚಿತ್ರವನ್ನು ವೀಕ್ಷಿಸಿದ ನಂತರ, ಮೌರ್ಯ ನಂತರ ಅಲ್ಲಿಂದ ತೆರಳಿದರು. ನಾನು ಸ್ವಲ್ಪ ಹೊತ್ತು, ಚಿತ್ರ ವೀಕ್ಷಿಸಿದೆ. ಬೇರೆ ಕಾರ್ಯಕ್ರಮಗಳಿಗೆ ಹಾಜರಾಗಬೇಕಾದ ಅನಿವಾರ್ಯತೆ ಇದ್ದ ಕಾರಣ ಪೂರ್ಣ ಚಲನತ್ರವನ್ನು ವೀಕ್ಷಿಸಲು ಸಾಧ್ಯವಾಗಿಲ್ಲ ಎಂದರು. ರಜನಿಕಾಂತ್ ತಮ್ಮ ಚಿತ್ರ ಜೈಲರ್‌ ಪ್ರಚಾರ ನಿಮಿತ್ತ ಲಕ್ನೋಗೆ ಭೇಟಿ ನೀಡಿದ್ದಾರೆ. ಚಿತ್ರ ಉತ್ತಮ ಕಲೆಕ್ಷನ್‌ ಮಾಡಿದ ಬಗ್ಗೆ ಪ್ರತಿಕ್ರಿಯೆ ನೀಡಿದ ರಜನಿ “ಸಬ್ ಭಗವಾನ್ ಕಿ ದುವಾ ಹೈ…” (ಇದಕ್ಕೆಲ್ಲ ದೇವರ ದಯೆ ಕಾರಣ) ಎಂದು ಹೇಳಿದರು.

ಮೊನ್ನೆಯಷ್ಟೇ ನಟ ಉತ್ತರಾಖಂಡದ ಬದರಿನಾಥ ದೇವಸ್ಥಾನಕ್ಕೆ ಹೋಗಿದ್ದರು. ಶುಕ್ರವಾರ ಜಾರ್ಖಂಡ್‌ನ ಪ್ರಸಿದ್ಧ ಚಿನ್ನಮಸ್ತ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದರು. ಅಲ್ಲದೆ ರಾಂಚಿಯ ‘ಯಾಗೋದ ಆಶ್ರಮ’ದಲ್ಲಿ ಅವರು ಒಂದು ಗಂಟೆಗಳ ಕಾಲ ಧ್ಯಾನಸ್ಥರಾಗಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು