ಈ ಹಿಂದೆ ನಿರ್ಧಾರವಾಗಿದ್ದ ಪ್ರಕಾರ ಎಸ್. ಎಸ್ ರಾಜಮೌಳಿ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ಬಿಡುಗಡೆಯ ದಿನಾಂಕ ಮತ್ತೆ ಮುಂದೆ ಹೋಗಿದೆ. . ಈ ಕುರಿತು ಚಿತ್ರತಂಡ ಅಧಿಕೃತವಾಗಿ ಟ್ವಿಟರ್ ಮುಖಾಂತರ ಘೋಷಿಸಿದೆ.
ಈ ಹಿಂದೆ ನಿರ್ಧಾರವಾಗಿದ್ದರ ಪ್ರಕಾರ, ಆರ್ಆರ್ಆರ್ ಚಿತ್ರವು ಇದೇ ವರ್ಷದ ಅಕ್ಟೋಬರ್ 13ರಂದು ಬಿಡುಗಡೆಯಾಗಬೇಕಿತ್ತು. ಆದರೆ ಇದನ್ನು ಚಿತ್ರತಂಡ ಮುಂದೂಡಿದ್ದು, ಮುಂದೆ ಯಾವಾಗ ಚಿತ್ರವನ್ನು ಬಿಡುಗಡೆ ಮಾಡಲಾಗುವುದು ಎಂಬ ಮಾಹಿತಿಯನ್ನು ತಿಳಿಸಿಲ್ಲ. ಈ ಕುರಿತು ಮಾಹಿತಿ ನೀಡಿರುವ ಚಿತ್ರತಂಡ ಬಿಡುಗಡೆಯ ದಿನಾಂಕವನ್ನು ಸದ್ಯಕ್ಕೆ ಘೋಷಿಸಸುವುದಿಲ್ಲ. ಚಿತ್ರಮಂದಿರಗಳ ಲಭ್ಯತೆ ನೋಡಿಕೊಂಡು ತಿಳಿಸುತ್ತೇವೆ ಎಂದು ಮಾಹಿತಿ ನೀಡಿದೆ.
ಆರ್ಆರ್ಆರ್ ಚಿತ್ರತಂಡದ ಅಧಿಕೃತ ಟ್ವಿಟರ್ ಖಾತೆಯ ಮುಖಾಂತರ ಚಿತ್ರ ಮುಂದೂಡಲ್ಪಟ್ಟಿರುವ ಮಾಹಿತಿಯನ್ನು ನೀಡಲಾಗಿದೆ. ‘ಬಹುತೇಕರಿಗೆ ತಿಳಿದಿರುವಂತೆ ಆರ್ಆರ್ಆರ್ ಚಿತ್ರದ ಬಿಡುಗಡೆಯನ್ನು ಮುಂದೂಡಲಾಗಿದೆ. ಚಿತ್ರಮಂದಿರಗಳ ಲಭ್ಯತೆ ಇದಕ್ಕೆ ಮುಖ್ಯ ಕಾರಣ. ಜಾಗತಿಕವಾಗಿ ಯಾವಾಗ ಚಿತ್ರಗಳಿಗೆ ಮುಕ್ತವಾಗಿ ಬಿಡುಗಡೆಯ ಅವಕಾಶ ಲಭ್ಯವಾಗುತ್ತದೋ ಆಗ ಚಿತ್ರವನ್ನು ಬಿಡುಗಡೆ ಮಾಡಲಾಗುವುದು. ಆದಷ್ಟು ಶೀಘ್ರವಾಗಿ ಚಿತ್ರವನ್ನು ಬಿಡುಗಡೆ ಮಾಡಲು ಪ್ರಯತ್ನಿಸಲಾಗುವುದು. ಪ್ರಸ್ತುತ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಬಹುತೇಕ ಮುಗಿದಿವೆ’ ಎಂದು ಚಿತ್ರತಂಡ ಘೋಷಿಸಿದೆ.
ಲೋಕಸಭೆ ಚುನಾವಣೆ ಮುಗಿದ ಬಳಿಕ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಶೀಘ್ರದಲ್ಲೇ ಕೊಚ್ಚಿಯ ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದೆ.
ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 133ನೇ ಜಯಂತೋತ್ಸವ ಅಂಗವಾಗಿ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ವಿಮೋಚನಾ ಯುವಕರ ಸಂಘದ…
ಭಾನುವಾರ ಸಂಜೆ ಪುತಯ್ತೂರು ನಗರ ವ್ಯಾಪ್ತಿಯಲ್ಲಿ ಭಾರೀ ಗಾಳಿಮಳೆ ಬಂದಿದ್ದು ಬಪ್ಪಳಿಗೆಯ ಸಿಂಗಾಣಿ ಎಂಬಲ್ಲಿ ಕಮಲ ಎಂಬವರ ಮನೆಯ ಮಾಡಿನ…
ಯಾವಾಗಲೂ ಯಾರೇ ಆದರೂ ಟ್ರಾಫಿಕ್ ರೂಲ್ಸ್ ಪಾಲನೆ ಮಾಡಲೇ ಬೇಕು. ಅದು ರಿಯಲ್ ಆಗಿರಲಿ ಅಥವಾ ರೀಲ್ ಆಗಿರಲಿ. ಹೌದು…
ಉಕ್ರೇನ್ ಮೇಲೆ ರಷ್ಯಾ ದಾಳಿ ಮಾಡಿದ ಬಳಿಕ ಅಮೆರಿಕ ಸೇರಿದಂತೆ ಹಲವು ಯೂರೋಪಿಯನ್ ದೇಶಗಳು ರಷ್ಯಾದ ಮೇಲೆ ಅನೇಕ ನಿರ್ಬಂಧಗಳನ್ನು…
ಐಪಿಎಲ್ 2024ರ 62 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಇಂದು ಸಂಜೆ…