ಕೊವಿಡ್ ಅಂಟಿದ ನಂತರದಲ್ಲಿ ಕೆಲ ದಿನಗಳ ಕಾಲ ಸುಸ್ತು ಇರುತ್ತದೆ ಎಂದು ವೈದ್ಯರು ಹೇಳುತ್ತಾರೆ. ಕಮಲ್ಗೆ ಈಗ 67ನೇ ವರ್ಷ. ಹೀಗಾಗಿ, ಕೊವಿಡ್ ಕಾಣಸಿಕೊಂಡ ನಂತರ ಅವರು ವಿಶ್ರಾಂತಿ ಪಡೆಯಲೇಬೇಕು.ಕೊವಿಡ್ ನಿಧಾನವಾಗಿ ಹೆಚ್ಚುತ್ತಿರುವ ಸಂದರ್ಭದಲ್ಲೇ ನಟ ಕಮಲ್ ಹಾಸನ್ಗೆ ಕೊವಿಡ್ ಅಂಟಿದ್ದು ಸಾಕಷ್ಟು ಆತಂಕ ಮೂಡಿಸಿತ್ತು.
ಕಮಲ್ ಬೇಗ ಗುಣಮುಖರಾಗಲಿ ಎಂದು ಅವರ ಅಭಿಮಾನಿಗಳು ಕೋರಿಕೊಂಡಿದ್ದರು. ಈ ಪ್ರಾರ್ಥನೆ ಈಗ ಸಫಲವಾಗಿದೆ. ನಟ ಕಮಲ್ ಹಾಸನ್ ಅವರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಹೀಗಾಗಿ, ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ. ಈ ಸುದ್ದಿ ಕೇಳಿ ಅವರ ಅಭಿಮಾನಿಗಳು ಖುಷಿಪಟ್ಟಿದ್ದಾರೆ.
ಕಮಲ್ ಹಾಸನ್ ಅಮೆರಿಕಕ್ಕೆ ಪ್ರವಾಸ ಹೋಗಿದ್ದರು. ಅಲ್ಲಿಂದ ಮರಳಿದ ಮೇಲೆ ಸಣ್ಣ ಪ್ರಮಾಣದ ಕೊವಿಡ್ ಲಕ್ಷಣಗಳು ಅವರಿಗೆ ಕಾಣಿಸಿಕೊಂಡಿತ್ತು. ಹೀಗಾಗಿ, ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿಸಿದ್ದರು . ಈ ವೇಳೆ ಕೊರೊನಾ ಪಾಸಿಟಿವ್ ಆಗಿರುವುದು ಖಚಿತಗೊಂಡಿತ್ತು. ತಕ್ಷಣಕ್ಕೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರ ಆರೋಗ್ಯ ಈಗ ಸಂಪೂರ್ಣವಾಗಿ ಸುಧಾರಿಸಿದೆ.
ಕೊವಿಡ್ ಅಂಟಿದ ನಂತರದಲ್ಲಿ ಕೆಲ ದಿನಗಳ ಕಾಲ ಸುಸ್ತು ಇರುತ್ತದೆ ಎಂದು ವೈದ್ಯರು ಹೇಳುತ್ತಾರೆ. ಕಮಲ್ಗೆ ಈಗ 67ನೇ ವರ್ಷ. ಹೀಗಾಗಿ, ಕೊವಿಡ್ ಕಾಣಸಿಕೊಂಡ ನಂತರ ಅವರು ವಿಶ್ರಾಂತಿ ಪಡೆಯಲೇಬೇಕು. ಹೀಗಾಗಿ, ಕಡ್ಡಾಯವಾಗಿ ಕೆಲ ದಿನಗಳ ಕಾಲ ಮನೆಯಲ್ಲೇ ಇರುವಂತೆ ವೈದ್ಯರು ಅವರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ, ಸಿನಿಮಾ ಕೆಲಸಗಳಲ್ಲಿ ಪಾಲ್ಗೊಳ್ಳದೆ ಅವರು ಮನೆಯಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿದ್ದ ಕಮಲ್ ‘ಅಮೆರಿಕದಿಂದ ವಾಪಸ್ ಬಂದ ಬಳಿಕ ನನಗೆ ಸಣ್ಣದಾಗಿ ಕೆಮ್ಮು ಆರಂಭವಾಗಿತ್ತು. ಪರೀಕ್ಷೆ ಮಾಡಿಸಿದ ನಂತರ ಇದು ಕೋವಿಡ್-19 ಪಾಸಿಟಿವ್ ಎಂಬುದು ತಿಳಿದುಬಂತು. ನಾನೀಗ ಆಸ್ಪತ್ರೆಯಲ್ಲಿ ಐಸೋಲೇಟ್ ಆಗಿದ್ದೇನೆ. ಒಂದು ಅರಿವಾಗಿದ್ದೇನೆಂದರೆ, ಈ ಮಹಾಮಾರಿ ನಮ್ಮನ್ನು ಬಿಟ್ಟು ಇನ್ನೂ ಹೋಗಿಲ್ಲ. ನಾವೆಲ್ಲ ಸುರಕ್ಷಿತವಾಗಿ ಇರಬೇಕಿದೆ’ ಎಂದಿದ್ದರು ಕಮಲ್.
ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…
ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್ ಆಗಿದೆ. ಬೆಂಗಳೂರಿನ…
ಚಾರ್ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…
ಭಾರತದ ಎಂಡಿಎಚ್ ಹಾಗೂ ಎವರೆಸ್ಟ್ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…
ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…
ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ನನ್ನು ಪೊಲೀಸರು ಬಂಧಿಸಿದ್ದಾರೆ.…