ಜೈ ಭೀಮ್ ಸಿನಿಮಾದ ದೃಶ್ಯವೊಂದು ಸದ್ಯ ವಿವಾದಕ್ಕೆ ಕಾರಣವಾಗಿದ್ದು, ಸಿನಿಮಾದ ದೃಶ್ಯ ವಿರೋಧಿಸಿ ನಾಯಕನ ಮೇಲೆ ಹಲ್ಲೆ ನಡೆಸಿದವರಿಗೆ 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಪಿಎಂಕೆ ನಾಯಕ ಘೋಷಿಸಿದ ಬೆನ್ನಲ್ಲೇ ನಟ ಸೂರ್ಯ ಅವರ ನಿವಾಸದ ಭದ್ರತೆಯನ್ನು ಹೆಚ್ಚಿಸಲಾಗಿದೆ.
ನಟನ ಮೇಲೆ ಹಲ್ಲೆ ನಡೆಸಿದವರ ಮೇಲೆ 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಪಿಎಂಕೆ ಜಿಲ್ಲಾ ಕಾರ್ಯದರ್ಶಿ ಪಳನಿಸ್ವಾಮಿ ಅವರು ಘೋಷಿಸಿದ್ದರು. ಈ ಹಿನ್ನೆಲೆ ಚೆನ್ನೈ ನ ಟಿ ನಗರದಲ್ಲಿರುವ ನಟ ಸೂರ್ಯ ನಿವಾಸಕ್ಕೆ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಜೈ ಭೀಮ್ ಸಿನಿಮಾದಲ್ಲಿ ಜನಾಂಗವೊಂದನ್ನು ನಿಂದಿಸಲಾಗಿದೆ ಎಂದು ಪಳನಿಸ್ವಾಮಿ ಆರೋಪಿಸಿದ್ದಾರೆ.