ತಮಿಳು

ತಮಿಳುನಾಡು: ಶೂಟಿಂಗ್ ಚಾಂಪಿಯನ್‌ಶಿಪ್ ನಲ್ಲಿ 4 ಚಿನ್ನ ಗೆದ್ದ ಕಾಲಿವುಡ್‌ ಸೂಪರ್ ಸ್ಟಾರ್ ಅಜಿತ್!

ಕಾಲಿವುಡ್‌: ಚಿತ್ರರಂಗದ ಸೂಪರ್‌ ಸ್ಟಾರ್‌ ಅಜಿತ್‌ ತಾವು ತೆರೆಯ ಮೇಲಷ್ಟೇ ಹೀರೋ ಅಲ್ಲ ಎಂಬುದನ್ನು ಸಾಬೀತುಪಡಿಸಿದ್ದಾರೆ.  ತಿರುಚ್ಚಿಯಲ್ಲಿ ನಡೆಯುತ್ತಿರುವ 47ನೇ ತಮಿಳುನಾಡು ರಾಜ್ಯ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾಗಿಯಾಗಿರುವ ಅಜಿತ್ ಕುಮಾರ್ ಒಟ್ಟು ನಾಲ್ಕು ಚಿನ್ನ ಮತ್ತು ಎರಡು ಕಂಚಿನ ಪದಕಗಳನ್ನು ಗೆಲ್ಲುವ ಮೂಲಕ ಅಪರೂಪದ ಸಾಧನೆ ಮೆರೆದಿದ್ದಾರೆ.

ಚಾಂಪಿಯನ್‌ ಶಿಪ್‌ ನ ಸಿಎಫ್‌ಪಿ ಮಾಸ್ಟರ್ ಮೆನ್ ಟೀಮ್ ಈವೆಂಟ್, ಎಸ್‌ಟಿಡಿಪಿ ಮಾಸ್ಟರ್ ಮೆನ್ ಟೀಮ್ ಈವೆಂಟ್ ಮತ್ತು 50 ಮೀಟರ್ ಎಫ್‌ಪಿ ಮಾಸ್ಟರ್ ಮೆನ್ ಟೀಮ್ ಈವೆಂಟ್ ಸೇರಿದಂತೆ ಒಟ್ಟು ನಾಲ್ಕು ಟೀಮ್ ಈವೆಂಟ್‌ಗಳಲ್ಲಿ ಅಜಿತ್ ಮತ್ತು ತಂಡ ಚಿನ್ನದ ಪದಕಗಳನ್ನು ಗೆದ್ದಿದೆ. ಜುಲೈ 24 ರಂದು ಆರಂಭವಾದ ಚಾಂಪಿಯನ್‌ಶಿಪ್ ಭಾನುವಾರದವರೆಗೆ ನಡೆಯಲಿದೆ.

ನಟ ಅಜಿತ್‌ ಕುಮಾರ್‌ ತಿರುಚ್ಚಿನ ಶೂಟಿಂಗ್‌ ಚಾಂಪಿಯನ್‌ ಶಿಪ್‌ನಲ್ಲಿ ಪಾಲ್ಗೊಂಡಿರುವ ಚಿತ್ರಗಳು ಮತ್ತು ವಿಡಿಯೋ ತುಣುಕುಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಸಾವಿರಾರು ಜನರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಅಜಿತ್‌ ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳುತ್ತಿರುವುದು ಇದೇ ಮೊದಲೇನಲ್ಲ. ಅವರು ಕಳೆದ ವರ್ಷ, ಚೆನ್ನೈನಲ್ಲಿ ನಡೆದ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಆರು ಚಿನ್ನದ ಪದಕಗಳನ್ನು ಗೆದ್ದಿದ್ದರು.

ಇನ್ನು ಸಿನಿಮಾ ವಿಚಾರಕ್ಕೆ ಬಂದರೆ ಅಜಿತ್ ಪ್ರಸ್ತುತ #AK61 ಎಂದು ತಾತ್ಕಾಲಿಕ ಶೀರ್ಷಿಕೆಯ ಇರಿಸಲಾಗಿರುವ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರದ ಕಥಾವಸ್ತುವು ಬ್ಯಾಂಕ್ ದರೋಡೆಯ ಸುತ್ತ ಸುತ್ತುತ್ತದೆ. ಪ್ರಸ್ತು ತ ಹೈದರಾಬಾದ್‌ ನಲ್ಲಿ ಈ ಚಿತ್ರದ ಚಿತ್ರೀಕರಣ ಸಾಗುತ್ತಿದೆ. ಆ ಬಳಿಕ ವಿಘ್ನೇಶ್ ಶಿವನ್ ನಿರ್ದೇಶನದ ಚಿತ್ರದಲ್ಲಿ ನಟಿಸಲಿದ್ದಾರೆ.

Sneha Gowda

Recent Posts

ಉದಯ ಟಿವಿಯಲ್ಲಿ‘ಶ್ರೀಮದ್ ರಾಮಾಯಣ’ ಧಾರಾವಾಹಿ ನೋಡಿ ಬಹುಮಾನ ಗೆಲ್ಲಿ

ಈಗ ‘ಉದಯ’ ವಾಹಿನಿಯು ಒಂದು ಹೊಸ ಧಾರಾವಾಹಿಯನ್ನು ಪ್ರೇಕ್ಷಕರ ಎದುರು ತರುತ್ತಿದೆ. ‘ಶ್ರೀಮದ್ ರಾಮಾಯಣʼ ಸೀರಿಯಲ್ ಪ್ರಸಾರಕ್ಕೆ ಸಜ್ಜಾಗಿದೆ. ಮೇ…

9 mins ago

ಲಾರಿಗೆ ಬಸ್‌ ಡಿಕ್ಕಿ : 4 ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ

ಓವರ್​ಟೇಕ್​ ಮಾಡುವ ಭರದಲ್ಲಿ ಪ್ರಯಾಣಿಕರಿದ್ದ ಬಸ್​ವೊಂದು​ ಲಾರಿಗೆ ಡಿಕ್ಕಿ ಹೊಡೆದ ಘಟನೆ ಚೆನ್ನೈ-ತಿರುಚಿ ಹೆದ್ದಾರಿಯಲ್ಲಿ ಇಂದು ನಡೆದಿದೆ.ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.…

30 mins ago

ಸ್ಲೊವಾಕಿಯಾ ಪ್ರಧಾನ ಮಂತ್ರಿಗೆ ಗುಂಡೇಟು : ಶಂಕಿತ ಅರೆಸ್ಟ್

ಅಮೆರಿಕ ವಿರೋಧಿ ನಿಲುವುಗಳನ್ನು ಹೊಂದಿರುವ ತೀವ್ರ ಎಡಪಂಥೀಯ ನಾಯಕ, ಸ್ಲೊವಾಕಿಯಾ ಪ್ರಧಾನ ಮಂತ್ರಿ ರಾಬರ್ಟ್ ಫಿಕೊ ಹತ್ಯೆ ಯತ್ನಬುಧವಾರ ನಡೆದಿದೆ.…

49 mins ago

49 ಅಭ್ಯರ್ಥಿಗಳಿಂದ ಉಮೇದುವಾರಿಕೆ : ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ

ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಗುರುವಾರ ಕೊನೆಯ ದಿನ.…

1 hour ago

ವೈದ್ಯರ ಎಡವಟ್ಟಿಗೆ ಆಸ್ಪತ್ರೆಯಲ್ಲಿ ರೋಗಿ ಸಾವು

ವೈದ್ಯರ ಎಡವಟ್ಟಿಗೆ ಆಸ್ಪತ್ರೆಯಲ್ಲಿ ರೋಗಿ ಸಾವನಪ್ಪಿರುವ ಘಟನೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.ಕೃಷ್ಣಪ್ಪ ಗೌಡ(47) ಮೃತ ವ್ಯಕ್ತಿ. ಬಂಟ್ವಾಳ ತಾಲೂಕಿನ…

1 hour ago

ನೀವು ತಡರಾತ್ರಿ ವರೆಗೆ ಎಚ್ಚರ ಇರುತ್ತೀರಾ? ಇದರ ಸಮಸ್ಯೆಗಳೇನು ಗೊತ್ತೇ?

ತಡರಾತ್ರಿ ಇಲ್ಲ ಮುಂಜಾವರೆಗೂ ಕೆಲವರು ನಿದ್ದೆ ಗೆಡುತ್ತಾರೆ ಇದೊಂದು ಈಗಿನ ಜಯಮಾನದ ಸಾಮಾನ್ಯ ಅಭ್ಯಾಸವಾಗಿದೆ.ಕೆಲಸದ ಒತ್ತಡ, ಕಚೇರಿಯ ಕೆಲಸಗಳು, ಸಾಮಾಜಿಕ…

2 hours ago