ತೆಲಗು ಹಿರಿಯ ನಟ ಕೈಕಾಲ ಸತ್ಯನಾರಾಯಣ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೈಕಾಲ ಅವರು ಹೈದರಾಬಾದ್ ನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆ ಬಿಡುಗಡೆಗೊಳಿಸಿರುವ ಹೆಲ್ತ್ ಬುಲೆಟಿನ್ನಲ್ಲಿ ” ಸತ್ಯನಾರಾಯಣ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಚಿಕಿತ್ಸೆ ಸರಿಯಾಗಿ ಅವರು ಸ್ಪಂದಿಸುತ್ತಿಲ್ಲ” ಎಂದು ಹೇಳಲಾಗಿದೆ.
ಸತ್ಯನಾರಾಯಣ ಅವರು ಕಳೆದ ತಿಂಗಳು ಮನೆಯಲ್ಲಿ ಕಾಲು ಜಾರಿ ಬಿದ್ದು, ತೀವ್ರ ಅಸ್ವಸ್ಥಗೊಂಡಿದ್ದರು. ನಂತರ ಆಸ್ಪತ್ರೆಯಲ್ಲಿ ಕೆಲವು ದಿನ ಚಿಕಿತ್ಸೆ ಪಡೆದು ಗುಣಮಖರಾಗಿದ್ದರು. ಇದೀಗ ಮತ್ತೆ ಅನಾರೋಗ್ಯಕ್ಕೀಡಾಗಿದ್ದಾರೆ ಎನ್ನಲಾಗಿದೆ.
ಸತ್ಯನಾರಾಯಣ ಸಿಪಾಯಿ ಕುಥುರು, ರಾಜ ಮುಕುಟಂ, ಮದನ ಕಾಮರಾಜು ಕಥ, ಪುಲಿ, ರಕ್ತ ಸಿಂಧೂರಂ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ.