ಟಾಲಿವುಡ್: ಅಖಂಡ ಚಿತ್ರದ ಮೂಲಕ ನಂದಮೂರಿ ಬಾಲಕೃಷ್ಣ ಮತ್ತೆ ಯಶಸ್ಸಿನ ಹಾದಿಗೆ ಮರಳಿರುವುದು ಗೊತ್ತೇ ಇದೆ. ಮಾಸ್ ಚಿತ್ರಗಳ ನಿರ್ದೇಶಕ ಬೋಯಪಾಟಿ ಶ್ರೀನು ತಮ್ಮದೇ ಆದ ಛಾಪು ಮೂಡಿಸಿ ನಿರ್ದೇಶಿಸಿರುವ ಈ ಚಿತ್ರಕ್ಕೆ ನಂದಮೂರಿ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಸಿನಿಮಾ ಬಳಿಕ ಬಾಲಯ್ಯ ಯುವ ನಿರ್ದೇಶಕ ಗೋಪಿಚಂದ್ ಮಲಿನೇನಿ ಅವರ ನಿರ್ದೇಶನದಲ್ಲಿ ಹೊಸ ಚಿತ್ರವನ್ನು ಚಿತ್ರೀಕರಿಸುತ್ತಿದ್ದಾರೆ. ಎನ್ಬಿಕೆ 107 ಎಂಬ ಶೀರ್ಷಿಕೆಯಡಿಯಲ್ಲಿ ಚಿತ್ರೀಕರಣಗೊಳ್ಳುತ್ತಿರುವ ಈ ಚಿತ್ರವನ್ನು ಗೋಪಿಚಂದ್ ಆಕ್ಷನ್ ಎಂಟರ್ಟೈನರ್ ಚಿತ್ರವಾಗಿ ನಿರ್ದೇಶಿಸಲಿದ್ದಾರೆ.
ಈ ಚಿತ್ರ ಪೂರ್ಣಗೊಳ್ಳುವ ಮುನ್ನವೇ ಮತ್ತೊಬ್ಬ ಯುವ ನಿರ್ದೇಶಕ ಅನಿಲ್ ರಾವಿಪುಡಿ ನಿರ್ದೇಶನದಲ್ಲಿ ಬಾಲಯ್ಯ ತಮ್ಮ ಮುಂದಿನ ಸಿನಿಮಾವನ್ನು ತೆರೆಗೆ ತರುವ ತಯಾರಿಯಲ್ಲಿದ್ದಾರೆ. ಅನಿಲ್ ರಾವಿಪುಡಿ ಶೀಘ್ರದಲ್ಲೇ ಈ ಚಿತ್ರವನ್ನು ನಿರ್ದೇಶಿಸಲು ಸಿದ್ಧರಾಗಿದ್ದಾರೆ. ಈ ಸಿನಿಮಾದಲ್ಲಿ ಬಾಲಯ್ಯ ಎದುರು ನಾಯಕಿಯಾಗಿ ಪೆಲ್ಲಿಸಂದಡಿ ನಾಯಕಿ ಶ್ರೀಲೀಲಾ ನಟಿಸಲಿದ್ದಾರೆ ಎಂಬ ಸುದ್ದಿಗೆ ಬ್ರೇಕ್ ಹಾಕಿದ್ದಾರೆ. ಶ್ರೀಲೀಲಾ ನಾಯಕಿ ಅಲ್ಲ ಬಾಲಯ್ಯ ಮಗಳಾಗಿ ನಟಿಸಲಿದ್ದಾರೆ ಎಂದು ಅನಿಲ್ ರಾವಿಪುಡಿ ತಿಳಿಸಿದ್ದಾರೆ.
ಈ ಸಿನಿಮಾದಲ್ಲಿ ನಾಯಕಿಯಾಗಿ ಎಫ್3 ಬ್ಯೂಟಿ ಮೆಹ್ರೀನ್ ಆಯ್ಕೆಯಾಗಿದ್ದಾರೆ ಎಂಬ ಸುದ್ದಿ ಬರುತ್ತಿದೆ. ಚಿತ್ರದಲ್ಲಿ ಬಾಲಯ್ಯ 50ರ ಹರೆಯದ ವ್ಯಕ್ತಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ಅವರ ಎದುರು ಮೆಹ್ರೀನ್ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಎಂಬುದು ಚಿತ್ರ ವಲಯದಲ್ಲಿ ಕೇಳಿಬರುತ್ತಿರುವ ಮಾತು. ಚಿತ್ರದಲ್ಲಿ ಬಾಲಯ್ಯ ಅವರ ಪಾತ್ರ ತುಂಬಾ ಪವರ್ ಫುಲ್ ಆಗಿ ಮೂಡಿಬರಲಿದ್ದು, ಅಪ್ಪ, ಮಗಳ ಭಾವನೆಗಳ ಮೇಲೆ ಸಿನಿಮಾ ಪ್ರೇಕ್ಷಕರ ಮನಸೂರೆಗೊಳ್ಳಲಿದೆ ಎಂಬುದು ಚಿತ್ರರಂಗದ ಮಾತು.
ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್-ಕಣಗಿಲು ಜಾತಿಗೆ ಸೇರಿದ…
ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ ಬೀಗ…
ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.
ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…
ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ
ಐಪಿಎಲ್ ಟೂರ್ನಿಯಲ್ಲಿ ಆರ್ಸಿಬಿ ತಂಡ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ನಿನ್ನೆ ಪಂಜಾಬ್ ಕಿಂಗ್ಸ್ ತಂಡವನ್ನು 60 ರನ್ಗಳಿಂದ ಸೋಲಿಸುವ ಮೂಲಕ,…