ಟಾಲಿವುಡ್: ನಟ ನಾಗ ಚೈತನ್ಯ ಅಭಿನಯದ ‘ಲವ್ ಸ್ಟೋರಿ’ ಸಿನಿಮಾ ಬಿಡುಗಡೆಯಾಗಿದೆ. ಕೋವಿಡ್ ಎರಡನೇ ಅಲೆ ತಗ್ಗಿದ ನಂತರ ಬಿಡುಗಡೆಯಾಗಿರುವ ‘ಲವ್ ಸ್ಟೋರಿ’ ಚಿತ್ರಕ್ಕೆ ಉತ್ತಮ ಓಪನ್ನಿಂಗ್ ಸಿಕ್ಕಿದೆ. ಶೇಖರ್ ಕಮ್ಮುಲ ನಿರ್ದೇಶನ ಮಾಡಿರುವ ನಾಗ ಚೈತನ್ಯ, ಸಾಯಿ ಪಲ್ಲವಿ ನಟನೆಯ ‘ಲವ್ ಸ್ಟೋರಿ’ ಚಿತ್ರಕ್ಕೆ ಪೈರಸಿ ಕಾಟ ಶುರುವಾಗಿದೆ.‘ಲವ್ ಸ್ಟೋರಿ’ ಚಿತ್ರ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಆನ್ಲೈನ್ನಲ್ಲಿ ಇಡೀ ಚಿತ್ರವನ್ನು ತಮಿಳು ರಾಕರ್ಸ್ ಲೀಕ್ ಮಾಡಿದೆ. ಹೈ ಕ್ವಾಲಿಟಿಯಲ್ಲೇ ಟೆಲಿಗ್ರಾಮ್ ಸೇರಿದಂತೆ ಇನ್ನಿತರ ಜಾಲತಾಣಗಳಲ್ಲಿ ‘ಲವ್ ಸ್ಟೋರಿ’ ಸಿನಿಮಾವನ್ನ ಲೀಕ್ ಮಾಡಲಾಗಿದೆ.ಕೋವಿಡ್ ಮೂರನೇ ಅಲೆಯ ಭೀತಿಯ ನಡುವೆಯೂ ‘ಲವ್ ಸ್ಟೋರಿ’ ಚಿತ್ರ ವೀಕ್ಷಿಸಲು ಪ್ರೇಕ್ಷಕರು ಚಿತ್ರಮಂದಿರಕ್ಕೆ ಧಾವಿಸುತ್ತಿದ್ದಾರೆ. ಮೊದಲನೇ ದಿನವೇ ‘ಲವ್ ಸ್ಟೋರಿ’ ಚಿತ್ರ ಭರ್ಜರಿ ಕಲೆಕ್ಷನ್ ಮಾಡಿದೆ ಎಂದು ವರದಿಯಾಗಿದೆ. ಹೀಗಿರುವಾಗಲೇ, ‘ಲವ್ ಸ್ಟೋರಿ’ ಚಿತ್ರದ ಕಲೆಕ್ಷನ್ಗೆ ಪೈರಸಿಯಿಂದ ಪೆಟ್ಟು ಬೀಳುತ್ತಿದೆ. ಹೀಗಾಗಿ ಪೈರಸಿ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ‘ಲವ್ ಸ್ಟೋರಿ’ ಚಿತ್ರತಂಡ ಮುಂದಾಗಿದೆ. ಟಾಲಿವುಡ್ ನಟ ನಾಗ ಚೈತನ್ಯ ಮತ್ತು ಸಮಂತಾ ಸದ್ಯದಲ್ಲೇ ವಿಚ್ಛೇದನ ಪಡೆಯಲಿದ್ದಾರೆ ಎಂಬ ಗಾಳಿಸುದ್ದಿ ತೆಲುಗು ಸಿನಿ ಅಂಗಳದ ತುಂಬೆಲ್ಲಾ ಹಬ್ಬಿದೆ. ನಾಗ ಚೈತನ್ಯ ಮತ್ತು ಸಮಂತಾ ಮಧ್ಯೆ ಮನಸ್ತಾಪ ಮೂಡಿರುವ ವಿಚಾರ ಸಾಮಾಜಿಕ ಜಾಲತಾಣಗಳಲ್ಲೂ ಚರ್ಚೆಗೆ ಗ್ರಾಸವಾಗಿದೆ. ವಿಚ್ಛೇದನದ ವದಂತಿ ಬಗ್ಗೆ ನಾಗ ಚೈತನ್ಯ ಆಗಲಿ ಸಮಂತಾ ಆಗಲಿ ಇನ್ನೂ ಸ್ಪಷ್ಟನೆ ಕೊಟ್ಟಿಲ್ಲ. ಈ ಮಧ್ಯೆ ನಟ ನಾಗ ಚೈತನ್ಯಗೆ ಮತ್ತೊಂದು ಸಮಸ್ಯೆ ಎದುರಾಗಿದೆ.
ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯ ಗುರಿಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ಪ್ರತಿ ವರ್ಷ ಏಪ್ರಿಲ್ 30 ರಂದು ಭಾರತವು…
ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿಯಾದ ಘಟನೆ ಬನ್ನೇರುಘಟ್ಟ ರಸ್ತೆಯ ಸಕಲವಾರ ಸಮೀಪ ನಡೆದಿದೆ.
ಕಳೆದ ಒಂದು ವಾರದಿಂದ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಳಿತ ಮುಂದುವರಿಯುತ್ತಿದ್ದು, ಇಂದು ಚಿನ್ನದ ಬೆಲೆ ಕೊಂಚ ಕಡಿಮೆಯಾಗಿದ್ದು, ಪ್ರತಿ…
ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗ ಗ್ರಾಮಾಂತರದಲ್ಲಿ ಒಂದು ಲಕ್ಷದ ಮತ ದಿಂದ ರಾಘವೇಂದ್ರ ಗೆಲ್ಲಲಿದ್ದಾರೆ ಎಂದು ಮಜಿಮುಖ್ಯಮಂತ್ರಿ ಕುಮಾರ ಸ್ವಾಮಿ…
ಪ್ರಜ್ವಲ್ ರೇವಣ್ಣ ಉಚ್ಚಾಟನೆ ಬಗ್ಗೆ ಮಾಜಿ ಸಿಎಂ ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ್ದು, ನಿನ್ನೆಯೇ ಈ ಬಗ್ಗೆ ನಮ್ಮ…
ಒಲಿಂಪಿಕ್ಸ್ ಆಟಗಾರರ ಮೇಲೆ ಕಿರುಕುಳವಾಗಿತ್ತು, ಮಹಿಳೆಯ ಮೇಲೆ ಅತ್ಯಾಚಾರವಾಗಿತ್ತು. ಆಗ ಪ್ರಧಾನಿ ಮೋದಿ ಸುಮ್ಮನೆ ಇದ್ದರಲ್ಲದೆ ಇಂದು ಕರ್ನಾಟಕದಲ್ಲಿ ಸಾವಿರಾರು…