Categories: ತೆಲುಗು

40ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ʼಸ್ಟೈಲಿಶ್ ಸ್ಟಾರ್ʼ ಅಲ್ಲು ಅರ್ಜುನ್

ಟಾಲಿವುಡ್: ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಇಂದು 40ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.ಐಕಾನ್ ಸ್ಟಾರ್ ಅಲ್ಲು ಅರ್ಜುನ್ 1985ರಲ್ಲಿ ತೆರೆಕಂಡ ‘ವಿಜೇತ’ ಚಿತ್ರದಲ್ಲಿ ಬಾಲ ಕಲಾವಿದನಾಗಿ ತಮ್ಮ ಸಿನಿಪಯಣ ಆರಂಭಿಸಿದರು.

ಇತ್ತೀಚೆಗಷ್ಟೇ ತೆರೆಕಂಡ ಅಲ್ಲು ಅರ್ಜುನ್ ನಟನೆಯ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ‘ಪುಷ್ಪ’ ಭರ್ಜರಿ ಯಶಸ್ಸು ಕಂಡಿದ್ಧು, ಪುಷ್ಪ ಎರಡನೇ ಭಾಗದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ.

ಇವರು ನಾಯಕನಾಗಿ ನಟಿಸಿದ ಮೊದಲ ಸಿನಿಮಾ ‘ಗಂಗೋತ್ರಿ’ ನಂತರ 2004ರಲ್ಲಿ ಸುಕುಮಾರ್ ನಿರ್ದೇಶನದ ಮೂಡಿಬಂದ ‘ಆರ್ಯ’ ಚಿತ್ರದ ಮೂಲಕ ಅಲ್ಲು ಅರ್ಜುನ್ ಸ್ಟಾರ್ ನಟನಾಗಿ ಹೊರಹೊಮ್ಮಿದರು. ನಂತರ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸಿದ ಅಲ್ಲು ಅರ್ಜುನ್ ಗೆ ಕರ್ನಾಟಕದಲ್ಲೂ ಅಭಿಮಾನಿಗಳ ದಂಡೇ ಇದೆ.

ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಅಲ್ಲು ಅರ್ಜುನ್ 17 ಮಿಲಿಯನ್ ಫಾಲೋವರ್ಸ್ ಹೊಂದಿದ್ದು, ದಕ್ಷಿಣ ಭಾರತದಲ್ಲೇ ಇನ್ಸ್ಟಾಗ್ರಾಮ್ ನಲ್ಲಿ ಅತಿಹೆಚ್ಚು ಅನುಯಾಯಿಗಳನ್ನು ಹೊಂದಿರುವ ನಟ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇಂದು ಅಲ್ಲು ಅರ್ಜುನ್ ಅವರ ಹುಟ್ಟುಹಬ್ಬದ ಪ್ರಯುಕ್ತ ‘ಪುಷ್ಪ’ ಚಿತ್ರತಂಡ ಪೋಸ್ಟರ್ ಬಿಡುಗಡೆ ಮಾಡುವ ಸಾಧ್ಯತೆ ಇದೆ.

Swathi MG

Recent Posts

ಪರೀಕ್ಷೆ ಫಲಿತಾಂಶಕ್ಕೆ ಹೆದರಿ ನಾಪತ್ತೆಯಾದ ವಿದ್ಯಾರ್ಥಿ : ಪೋಷಕರ ಹುಡುಕಾಟ

ಇಂದು ರಾಜ್ಯದೆಲ್ಲಡೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಬಿಡುಗಡೆಯಾದ ಹಿನ್ನಲೆ ವಿದ್ಯಾರ್ಥಿನೋರ್ವ ಪರೀಕ್ಷೆ ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾಗಿದ್ದಾನೆ. ಘಟನೆ ಬೆಂ.ಗ್ರಾಮಾಂತರ ಜಿಲ್ಲೆ…

12 mins ago

ಮಧ್ಯರಾತ್ರಿ ಸ್ನೇಹಿತರ ಎಣ್ಣೆ ಪಾರ್ಟಿ : ಬಾಟಲಿಯಿಂದ ಹೊಡೆದು ಓರ್ವನ ಕೊಲೆ

ಬಾಟಲಿಯಿಂದ ಹೊಡೆದು ಯುವಕನೋರ್ವನ ಕೊಲೆ ಮಾಡಿರುವ ಘಟನೆ ಮುಂಡರಗಿ ತಾಲೂಕಿನ ಕೆಎಚ್​ಬಿ ಹೊಸ ಕಾಲೊನಿಯಲ್ಲಿ ನಡೆದಿದೆ.ಕೊಪ್ಪಳದ ಹೈದರ್ ತಾಂಡಾದ ನಿವಾಸಿ…

29 mins ago

ಪಾಕ್ ಬಂದರಿನಲ್ಲಿ ಉಗ್ರರ ದಾಳಿ; 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ

ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗ್ವಾದರ್​ನಲ್ಲಿ ಉಗ್ರ ದಾಳಿ ನಡೆದಿದ್ದು 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

46 mins ago

ಬೋಯಿಂಗ್ ನ್ಯಾಷನಲ್ ಏರೋ ಮಾಡೆಲಿಂಗ್ ಸ್ಪರ್ಧೆ: ಎನ್ಎಂಎಎಂ ಇನ್ಸ್ಟಿಟ್ಯೂಟ್‌ಗೆ ಪ್ರಥಮ

ಭಾರತದ 855 ಸಂಸ್ಥೆಗಳ 2,350 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಆಕರ್ಷಿಸಿದ ಒಂಬತ್ತನೇ ವಾರ್ಷಿಕ ಬೋಯಿಂಗ್ ರಾಷ್ಟ್ರೀಯ ಏರೋ ಮಾಡೆಲಿಂಗ್ ಸ್ಪರ್ಧೆಯಲ್ಲಿ…

47 mins ago

ಏರ್‌ ಇಂಡಿಯಾ 30 ಸಿಬ್ಬಂದಿಗಳ ವಜಾ : 74 ವಿಮಾನಗಳ ಹಾರಾಟ ರದ್ದು

ಸಾಮೂಹಿಕ ಅನಾರೋಗ್ಯದ ರಜೆ ತೆಗೆದುಕೊಂಡ ಏರ್‌ ಇಂಡಿಯಾದ 30 ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ. ಬುಧವಾರ (ಮೇ 9)ದಿಂದ ಸುಮಾರು 300 ಸಿಬ್ಬಂದಿ…

1 hour ago

ಎಸ್​ಎಸ್​ಎಲ್​​​ಸಿ ಫಲಿತಾಂಶ; ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬೆಳ್ತಂಗಡಿ ವಿದ್ಯಾರ್ಥಿ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು…

1 hour ago