ಹೈದರಾಬಾದ್: ನಟ ಮಹೇಶ್ ಬಾಬು ಅವರ ತಂದೆ, ಸೂಪರ್ ಸ್ಟಾರ್ ಕೃಷ್ಣ ಘಟ್ಟಮನೇನಿ ಹೈದರಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಇಂದು ಬೆಳಿಗಿನ ಜಾವ 4 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯ ಕಾರಣದಿಂದ ನಿನ್ನೆ ತಡರಾತ್ರಿ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆತರಲಾಗಿತ್ತು.
ಕೃಷ್ಣ ಅವರು 350ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದು, ‘ತೇನೆಮನಸಲು’, ‘ಸಾಕ್ಷಿ’, ‘ಅಲ್ಲೂರಿ ಸೀತಾರಾಮರಾಜು’ ಮುಂತಾದ ಚಿತ್ರಗಳು ಜನಪ್ರಿಯವಾಗಿದ್ದವು.
ಕೃಷ್ಣ ಅವರಿಗೆ 80 ವರ್ಷ ವಯಸ್ಸಾಗಿತ್ತು. ಅವರ ನಿಧನಕ್ಕೆ ಅಭಿಮಾನಿಗಳು, ಆಪ್ತರು ಹಾಗೂ ಹಲವು ಕ್ಷೇತ್ರಗಳ ಗಣ್ಯರು ಕಂಬನಿ ಮಿಡಿಯುತ್ತಿದ್ದಾರೆ.