ಮೂರು “ಖಾನ್‌”ರನ್ನು ಸೇರಿಸಲು ಸಾಧ್ಯವಿಲ್ಲ ಎಂದಿದ್ದ ಶಾರುಖ್‌: ಆದ್ರೆ ಈಗ ?

ಜಾಮ್‌ ನಗರ್: ಬೇಟಾ… ಚಡ್ಡಿ, ಬನಿಯನ್‌ ಮಾರಿದ್ರೂ ಮೂರು ಖಾನ್‌ರನ್ನು ಒಟ್ಟಿಗೇ ಸೇರಿಸಲು ಯಾರಿಂದಲೂ ಸಾಧ್ಯವಿಲ್ಲ. ಅಂಥ ತಾಕತ್ತು ಯಾರಿಗೂ ಇಲ್ಲ, ಅಷ್ಟು ಹಣವನ್ನು ಹೊಂದಿಸಲು ಯಾರಿಗೂ ಸಾಧ್ಯವಿಲ್ಲ ಎಂದು ಕೆಲ ವರ್ಷಗಳ ಹಿಂದೆ ಬಾಲಿವುಡ್‌ ನಟ ಶಾರುಖ್‌ ಖಾನ್‌ ಹೇಳಿದ್ದರು.

ಆ ಮೂಲಕ ತಮ್ಮನ್ನು ಸೇರಿದಂತೆ ಸಲ್ಮಾನ್‌ ಖಾನ್‌ ಮತ್ತು ಆಮೀರ್‌ ಖಾನ್‌ ಅವರನ್ನು ಒಟ್ಟಿಗೇ ಸೇರಿಸಲು ಸಾಧ್ಯವೇ ಇಲ್ಲ ಎಂದಿದ್ದರು.

ಅಷ್ಟಕ್ಕೂ ಶಾರುಖ್‌ ಖಾನ್‌ ಸಿನಿಮಾದಲ್ಲಿ ಸಲ್ಮಾನ್‌ ಖಾನ್‌ ಅತಿಥಿ ಕಲಾವಿದರಾಗಿ ಕಾಣಿಸಿಕೊಂಡಿದ್ದಾರೆ. ಆದರೆ ಈ ಮೂವರು ಖಾನ್‌ಗಳು ಒಂದೇ ಚಿತ್ರದಲ್ಲಿ ಕಾಣಿಸಿರಲಿಲ್ಲ. ಆದ್ರೆ ಇದೀಗ ಆಗಿದ್ದೇನು? ಯಾವ ನಿರ್ಮಾಪಕರು, ನಿರ್ದೇಶಕರಿಗೂ ಸಾಧ್ಯವಾಗದ ಕೆಲಸವನ್ನು ಮುಕೇಶ್‌ ಅಂಬಾನಿ ಮಾಡಿ ತೋರಿಸಿದ್ದಾರೆ. ಈ ಮೂಲಕ ಶಾರುಖ್‌ ಖಾನ್‌ ಅವರ ಮಾತಿಗೆ ತಿರುಗೇಟು ನೀಡಿದ್ದಾರೆ.

ಇದರ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಸಕತ್‌ ಕಮೆಂಟ್‌ಗಳು ಬರುತ್ತಿದ್ದು, ಶಾರುಖ್‌ ಖಾನ್‌ ಟ್ರೋಲ್‌ಗೆ ಒಳಗಾಗುತ್ತಿದ್ದಾರೆ! ಬಾಲಿವುಡ್‌ ಬಾದ್‌ಶಾಹ್‌ನ ಸೊಕ್ಕು ಈಗ ಹೇಗೆ ಕರಗಿತು ಎಂದು ಹಲವರು ಪ್ರಶ್ನಿಸುತ್ತಿದ್ದಾರೆ.

ಹೌದು. . ಮುಕೇಶ್‌ ಅಂಬಾನಿ ಅವರ ಪುತ್ರಿ ಅನಂತ್‌ ಅಂಬಾನಿಯವರ ಮದುವೆಯಲ್ಲಿ ಇದೀಗ ಸುಳ್ಳಾಗಿದೆ. ಇದನ್ನು ಸಾಬೀತು ಮಾಡಿ ತೋರಿಸಿದ್ದಾರೆ ಮುಕೇಶ್‌ ಅಂಬಾನಿ. ಅಂಬಾನಿ ಕುಟುಂಬದಲ್ಲಿ ಯಾವುದೇ ಸಮಾರಂಭ ನಡೆದರೂ ಶಾರುಖ್ ಖಂಡಿತಾ ಇರುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಅನಂತ್-ರಾಧಿಕಾ ಮದುವೆಯ ಪೂರ್ವದಲ್ಲಿ ಕಿಂಗ್ ಖಾನ್ ಕೂಡ ಕಾಣಿಸಿಕೊಂಡಿದ್ದರು.

ಒಂದು ವಿಡಿಯೋದಲ್ಲಿ ಶಾರುಖ್ ಖಾನ್ ವೇದಿಕೆಗೆ ಬಂದ ಕೂಡಲೇ ಜೈ ಶ್ರೀರಾಮ್ ಘೋಷಣೆಗಳನ್ನು ಕೂಗುತ್ತಿದ್ದಾರೆ. ಆದಾಗ್ಯೂ, ಅವರು ಸಲ್ಮಾನ್ ಖಾನ್ ಮತ್ತು ಅಮೀರ್ ಖಾನ್ ಅವರೊಂದಿಗೆ ನಾಟು-ನಾಟು ಹಾಡಿಗೆ ಹುಕ್ ಸ್ಟೆಪ್ ಹಾಕುವ ವೇದಿಕೆಯಲ್ಲಿ ಕಾಣಿಸಿಕೊಂಡಾಗ ಅತ್ಯಂತ ಆಕರ್ಷಕ ಕ್ಷಣ ಬಂದಿತು. ಈ ವಿಡಿಯೋದಿಂದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಆಗುತ್ತಿದೆ.

 

 

Ashitha S

Recent Posts

ಸಮಸ್ಯೆಗಳ ಆಗರ: ಮೂಲಸೌಕರ್ಯಗಳ ಕೊರತೆಗೆ ಬೇಸತ್ತ ಸಾರ್ವಜನಿಕರು

ಪಟ್ಟಣದಲ್ಲಿ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಸ್ಥಳೀಯ ಆಡಳಿತದ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಬೇಸರಗೊಂಡಿದ್ದಾರೆ. ಪಟ್ಟಣದಲ್ಲಿ ಒಟ್ಟು 27 ವಾರ್ಡ್‌ಗಳು…

2 mins ago

ನಾಳೆ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನೆ

ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಮೇ.19 ರಂದು ಭಾನುವಾರ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ ಸಾಯಿಬಾಬಾ…

4 mins ago

ಚಾಮರಾಜನಗರದಲ್ಲಿ ಮುಂದುವರೆದ ಮಳೆ ಆರ್ಭಟ: ವಾಹನ ಸವಾರರ ಪರದಾಟ

ಗಡಿಜಿಲ್ಲೆ ವರುಣಾರ್ಭಟ ಮುಂದುವರೆದಿದ್ದು ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಯಿತು.

15 mins ago

ನ್ಯೂಯಾರ್ಕ್​ಗೆ ತೆರಳಲಿದೆ ಟೀಮ್ ಇಂಡಿಯಾದ ಮೊದಲ ಬ್ಯಾಚ್ : ಯಾವಾಗ?

ಮುಂದಿನ ತಿಂಗಳು ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್​ಗಾಗಿ ಟೀಮ್​ ಇಂಡಿಯಾದ ಮೊದಲ ಬ್ಯಾಚ್​…

19 mins ago

ಖಾಸಗಿ ಕಾರ್ಯಕ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಶಾಸಕ ಶರಣು ಸಲಗರ್‌

ಖಾಸಗಿ ಕಾರ್ಯಕ್ರಮದಲ್ಲಿ ಬಸವಕಲ್ಯಾಣ ಶಾಸಕ ಶರಣು ಸಲಗರ್‌ ಅವರು ಪತ್ನಿ ಹಾಗು ಮಕ್ಕಳೊಂದಿಗೆ ಹೆಜ್ಜೆ ಹಾಕಿದ್ದಾರೆ. ಶಾಸಕ ಶರಣು ಸಲಗರ್‌ರಿಂದ…

29 mins ago

ಸ್ವಾತಿ ಮೇಲಿನ ಹಲ್ಲೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಬಿಭವ್ ಅರ್ಜಿ

ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…

1 hour ago