News Karnataka Kannada
Sunday, May 12 2024
ಮನರಂಜನೆ

ಅಪಘಾತಕ್ಕೀಡಾದ ತುಕಾಲಿ ಸಂತೋಷ್ ಖರೀದಿಸಿದ್ದ ಹೊಸ ಕಾರು!

Santu
Photo Credit : News Kannada

ತುಮಕೂರು: ಕನ್ನಡ ಬಿಗ್​ ಬಾಸ್​ 10ನೇ ಆವೃತ್ತಿಯ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ್ದ ತುಕಾಲಿ ಸಂತೋಷ್ ಅವರ ಹೊಸ ಕಾರು ಅಪಘಾತಕ್ಕೀಡಾಗಿದೆ. ತುಕಾಲಿ ಸಂತೋಷ್ ಕೆಲ ದಿನಗಳ ಹಿಂದೆ ಕಿಯಾ ಕಂಪನಿಯ ಹೊಸ ಕಾರು ಖರೀದಿಸಿದ್ದರು. ಆದರೆ ಅವರ ಕಾರಿಗೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ಆಟೋ ರಿಕ್ಷಾ ಡಿಕ್ಕಿ ಹೊಡೆದಿದ್ದು ಕಾರೂ ಹಾಗೂ ಆಟೋ ಜಖಂಗೊಂಡಿದೆ.

ಅಪಘಾತದಲ್ಲಿ  ಆಟೋ ಚಾಲಕ ಜಗದೀಶ್ ಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಆ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ  ಮೃತಪಟ್ಟಿದ್ದಾರೆ.  ತುಕಾಲಿ ಸಂತೋಷ್​ ಅವರ ಕಾರು ಅಪಘಾತದ ಫೋಟೋಗಳು ಲಭ್ಯವಾಗಿವೆ. ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

ತುಮಕೂರು ಜಿಲ್ಲೆಯ ಕುಣಿಗಲ್ ತಾ| ಹೊನ್ನೇನಹಳ್ಳಿ ಬಳಿ ಈ ಘಟನೆ ನಡೆದಿದೆ. ತುಮಕೂರು ಕಡೆಯಿಂದ ಕುಣಿಗಲ್ ಮಾರ್ಗವಾಗಿ ಹೊಳೆನರಸೀಪುರ ಕಡೆ ತುಕಾಲಿ ಸಂತೋಷ್ ಅವರು ಪತ್ನಿ ಮಾನಸಾ ಜೊತೆ ಪ್ರಯಾಣಿಸುತ್ತಿದ್ದರು. ಅದೇ ವೇಳೆ ಕುಣಿಗಲ್‌ನಿಂದ ಕುರುಡಿಹಳ್ಳಿಗೆ ಆಟೋ ಬರುತ್ತಿತ್ತು. ತುಕಾಲಿ ಸಂತೋಷ್ ಅವರ ಕಾರು ಆಟೋಗೆ ಡಿಕ್ಕಿ ಹೊಡೆದಿದೆ. ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು