ತುಳು ಚಿತ್ರರಂಗದಲ್ಲಿ ದಾಖಲೆ ಬರೆದ ರೂಪೇಶ್ ಶೆಟ್ಟಿಯ ‘ಸರ್ಕಸ್’

ಬಿಗ್​ಬಾಸ್ ಸೀಸನ್ 9 ಗೆದ್ದ ರೂಪೇಶ್ ಶೆಟ್ಟಿ ನಟಿಸಿರುವ ಹೊಸ ತುಳು ಸಿನಿಮಾ ಸರ್ಕಸ್ ಜೂನ್ 23ಕ್ಕೆ ಬಿಡುಗಡೆ ಆಗಿದ್ದು, ಬಿಡುಗಡೆ ಆದ ಮೊದಲ ದಿನವೇ ತುಳು ಚಿತ್ರರಂಗದಲ್ಲಿ ದಾಖಲೆ ಬರೆದಿದೆ.

ಜೂನ್ 23ರಂದು ಸಿನಿಮಾ ಬಿಡುಗಡೆ ಆಗುವ ಮುನ್ನ ಸಿನಿಮಾದ 51 ವಿಶೇಷ ಪ್ರದರ್ಶನಗಳನ್ನು ವಿಶ್ವದ ಬೇರೆ ಬೇರೆ ದೇಶಗಳಲ್ಲಿ ರೂಪೇಶ್ ಶೆಟ್ಟಿ ಆಯೋಜಿಸಿದ್ದರು. ವಿದೇಶಗಳಲ್ಲಿಯೂ ಸಿನಿಮಾಕ್ಕೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಿಡುಗಡೆ ಆದ ದಿನವೇ ಸರ್ಕಸ್ ಸಿನಿಮಾವನ್ನು 12500 ಮಂದಿ ನೋಡಿದ್ದಾರೆ.

ಇನ್​ಸ್ಟಾಗ್ರಾಂನಲ್ಲಿ ವಿಡಿಯೋ ಮೂಲಕ ತಮ್ಮ ಖುಷಿ ಹಂಚಿಕೊಂಡಿರುವ ರೂಪೇಶ್ ಶೆಟ್ಟಿ, ‘ಸರ್ಕಸ್’ ಈ ರೇಂಜ್ಗೆ ಹಿಟ್ ಆಗತ್ತೆ ಎಂದು ಭಾವಿಸಿರಲಿಲ್ಲ. ತುಳು ಚಿತ್ರರಂಗದಲ್ಲಿ ಈ ಚಿತ್ರ ದಾಖಲೆ ಬರೆದಿದೆ. ಮೊದಲ ದಿನ 12,500 ಜನರು ಈ ಚಿತ್ರ ನೋಡಿದ್ದಾರೆ. ತುಳು ಚಿತ್ರರಂಗದ ದೊಡ್ಡ ಓಪನಿಂಗ್ ಪಡೆದ ಸಿನಿಮಾ. ಬುಕ್ ಮೈ ಶೋನಲ್ಲಿ 9.9 ರೇಟಿಂಗ್ ಸಿಕ್ಕಿದೆ. ಈ ಗೆಲುವಿಗೆ ಕಾರಣರಾದ ಎಲ್ಲರಿಗೂ ಧನ್ಯವಾದ” ಎಂದಿದ್ದಾರೆ ಜೊತೆಗೆ ಕೆಲವು ಮನವಿಗಳನ್ನೂ ಮಾಡಿದ್ದು, ”ಎಲ್ಲರೂ ಮೊದಲ ವಾರವೇ ಸಿನಿಮಾವನ್ನು ನೋಡಿ. ಎರಡನೇ ವಾರ ನಿರ್ಮಾಪಕರಿಗೆ ಬರುವ ಲಾಭಾಂಶ ಕಡಿಮೆ ಆಗುತ್ತದೆ. ಹಾಗೂ ಸಿನಿಮಾ ನೋಡುವ ವೇಳೆ ಯಾರೂ ಸಹ ಚಿತ್ರಮಂದಿರದಿಂದ ಲೈವ್ ಮಾಡಬೇಡಿ, ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಬೇಡಿ” ಎಂದು ಮನವಿ ಮಾಡಿದ್ದಾರೆ.

ಈ ಚಿತ್ರದಲ್ಲಿ ರೂಪೇಶ್ ಶೆಟ್ಟಿ, ನವೀನ್ ಡಿ ಪಡೀಲ್, ಅರವಿಂದ್ ಬೋಳಾರ್, ಭೋಜರಾಜ್ ವಾಮಂಜೂರ್, ಸಾಯಿಕೃಷ್ಣ ಕುಡ್ಲ, ನಟಿ ರಚನಾ ರೈ, ಪ್ರಸನ್ನ ಶೆಟ್ಟಿ, ಸಂದೀಪ್ ಶೆಟ್ಟಿ, ಉಮೇಶ್ ಮಿಜಾರ್, ಚಂದ್ರಹಾಸ ಉಳ್ಳಾಲ, ಪಂಚಮಿ ಭೋಜರಾಜ್, ರೂಪ ವರ್ಕಾಡಿ, ಪ್ರದೀಪ್ ಆಳ್ವ, ನಿತೇಶ್ ಶೆಟ್ಟಿ ಸೇರಿದಂತೆ ಹಲವು ಕಲಾವಿದರು ಬಣ್ಣ ಹಚ್ಚಿದ್ದಾರೆ.

Ashitha S

Recent Posts

ಚುನಾವಣೆಗೂ ಮುನ್ನ ಸ್ಫೋಟ : ಮೂವರು ಅಪ್ರಾಪ್ತರು ಸೇರಿ ನಾಲ್ವರು ಸಾವು!

ಚುನಾವಣೆಗೂ ಮುನ್ನ ದಿನವೇ ಜಾರ್ಖಂಡ್‌ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು…

27 mins ago

ಚುನಾವಣೆ ಹೊತ್ತಲ್ಲೆ ಶಂಕಿತ ಪಾಕ್ ಡ್ರೋನ್ ಹಾರಾಟ : ಸೇನೆಯಿಂದ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಎಲ್‌ಒಸಿ ಬಳಿ ಶನಿವಾರ ತಡರಾತ್ರಿ ಶಂಕಿತ ಪಾಕಿಸ್ತಾನಿ ಡ್ರೋನ್ ಮೇಲೆ ಭಾರತೀಯ ಸೇನಾ…

39 mins ago

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ನಿರೀಕ್ಷೆ: ಯೆಲ್ಲೋ ಅಲರ್ಟ್

ಇಂದು ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ,…

1 hour ago

ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಆರ್.ಪ್ರಜ್ಞಾನಂದಗೆ ಮತ್ತೊಂದು ಗೆಲುವು

ಸೂಪರ್‌ಬಿಟ್‌ ರ್‍ಯಾಪಿಡ್ ಮತ್ತು ಬ್ಲಿಟ್ಜ್‌ ಚೆಸ್‌ ಟೂರ್ನಿಯಲ್ಲಿ ವಿಶ್ವದ ಅಗ್ರಮಾನ್ಯ ಆಟಗಾರ ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಭಾರತದ ಗ್ರ್ಯಾಂಡ್…

1 hour ago

ನಟ ಚೇತನ್​ ಚಂದ್ರ ಮೇಲೆ 20 ಜನರಿಂದ ಹಲ್ಲೆ : ದೂರು ದಾಖಲು

ಕನ್ನಡ ಸಿನಿಮಾ ಹಾಗೂ ಕಿರುತೆರೆಯ ಯುವ ನಟ ಚೇತನ್ ಚಂದ್ರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆದಿದೆ. ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ…

2 hours ago

ಪೆನ್​ಡ್ರೈವ್ ಹಂಚಿಕೆ ಪ್ರಕರಣ : ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಹರಿಬಿಟ್ಟ ಆರೋಪದಲ್ಲಿ ಬಂಧನವಾಗಿರುವ ಆರೋಪಿಗಳಾದ ಚೇತನ್ ಹಾಗೂ ಲಿಖಿತ್‌ಗೆ 14…

2 hours ago