News Karnataka Kannada
Saturday, May 11 2024
ಮನರಂಜನೆ

ಅಟ್ರಾಸಿಟಿ ಕೇಸ್‌ ತನಿಖೆಗೆ ತಡೆಯಾಜ್ಞೆ ಕೋರಿ ಹೈಕೋರ್ಟ್‌ಗೆ ಉಪೇಂದ್ರ ಅರ್ಜಿ

upendra petitioned
Photo Credit : News Kannada

ಬೆಂಗಳೂರು: ಎಸ್‌ಸಿ, ಎಸ್‌ಟಿ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಪದ ಬಳಸಿದ ಆರೋಪದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ವಿರುದ್ಧ ಅಟ್ರಾಸಿಟಿ ಕೇಸ್‌ ದಾಖಲಾಗಿದೆ. ನೋಟಿಸ್ ನೀಡಿರೋ ಪೊಲೀಸರು ಉಪೇಂದ್ರ ಅವರನ್ನು ಬಂಧಿಸೋ ಸಾಧ್ಯತೆ ಇದೆ. ಪೊಲೀಸರ ಹುಡುಕಾಟದ ಮಧ್ಯೆ ನಟ ಉಪೇಂದ್ರ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ತನ್ನ ವಿರುದ್ಧ ಎಫ್ಐಆರ್ ರದ್ದು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಅಟ್ರಾಸಿಟಿ ಕೇಸ್‌ನ ತನಿಖೆಗೆ ಮಧ್ಯಂತರ ತಡೆಯಾಜ್ಞೆಗೆ ಮನವಿ ಮಾಡಲಾಗಿದೆ.

ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿರುವ ಉಪೇಂದ್ರ ಅವರು ಕನ್ನಡ ಗಾದೆಯನ್ನು ಬಳಸಿದ್ದಕ್ಕಾಗಿ ಅರ್ಜಿದಾರರ ವಿರುದ್ಧ ಸುಳ್ಳು ದೂರು ನೀಡಲಾಗಿದೆ. ಕ್ಷುಲ್ಲಕ ಮತ್ತು ಪ್ರಚಾರಕ್ಕಾಗಿ ದೂರನ್ನು ದಾಖಲಿಸಲಾಗಿದೆ.

ನಟ ಉಪೇಂದ್ರ ಅವರು ಸಮಾಜ/ಸಮುದಾಯದ ಎಲ್ಲಾ ವರ್ಗಗಳ ನಡುವೆ ಸೌಹಾರ್ದತೆಯನ್ನು ಕಾಪಾಡಿಕೊಂಡಿದ್ದಾರೆ. ಅಟ್ರಾಸಿಟಿ ದೂರು ದುರುದ್ದೇಶಕ ಪ್ರೇರಿತವಾಗಿದೆ. ಹೀಗಾಗಿ ತಮ್ಮ ವಿರುದ್ಧ ಎಫ್‌ಐಆರ್‌ ಹಾಗೂ ಎಸಿಪಿ ಕೊಟ್ಟ ದೂರು ರದ್ದಿಗೆ ನಟ ಉಪೇಂದ್ರ ಅವರು ಮನವಿ ಮಾಡಿದ್ದಾರೆ. ಉಪೇಂದ್ರ ಅವರ ಅರ್ಜಿಯನ್ನು ಹೈಕೋರ್ಟ್ ಇನ್ನೂ ಪುರಸ್ಕರಿಸಿಲ್ಲ. ಒಂದು ವೇಳೆ ಹೈಕೋರ್ಟ್ ಅರ್ಜಿಯನ್ನು ತಿರಸ್ಕರಿಸಿದರೆ ಉಪೇಂದ್ರ ಅವರನ್ನು ಬಂಧಿಸೋ ಸಾಧ್ಯತೆಯಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು