News Karnataka Kannada
Tuesday, April 30 2024
ಮನರಂಜನೆ

“ನನ್ನ ಮಗಳು ದರ್ಶನ್‌ ಪುತ್ರಿ”: ವಿಜಯಲಕ್ಷ್ಮಿ ಖಡಕ್‌ ಉತ್ತರ ಕೊಟ್ಟ ಪವಿತ್ರ ಗೌಡ !

ಜನವರಿ 25ರ ಕಳೆದ ದಿನ ದರ್ಶನ್​ ಪತ್ನಿ ವಿಜಯಲಕ್ಷ್ಮಿ ಕುಟುಂಬದ ಚಿತ್ರವೊಂದನ್ನು ಅಪ್​ಲೋಡ್ ಮಾಡಿದ್ದರು. ಅದರ ಬೆನ್ನಲ್ಲೆ ದರ್ಶನ್​ಗೆ ಆಪ್ತರಾಗಿರುವ ಪವಿತ್ರಾ ಗೌಡ ಸಹ ತಮ್ಮ ಹಾಗೂ ದರ್ಶನ್​ರ ಹಲವು ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು ‘ನಮ್ಮ ಸಂಬಂಧಕ್ಕೆ ಹತ್ತು ವರ್ಷ’ ಎಂದು ಕ್ಯಾಪ್ಷನ್ ಬರೆದುಕೊಂಡರು. ಇದಕ್ಕೆ ಪ್ರತಿಯಾಗಿ ವಿಜಯಲಕ್ಷ್ಮಿ, ಪವಿತ್ರಾ ಗೌಡ ಅವರನ್ನು ಉದ್ದೇಶಿಸಿ ಇನ್​ಸ್ಟಾಗ್ರಾಂನಲ್ಲಿ ವಾಗ್ದಾಳಿ ನಡೆಸಿದ್ದು, ಕಾನೂನು ಕ್ರಮದ ಎಚ್ಚರಿಕೆಯನ್ನು ನೀಡಿದ್ದಾರೆ.
Photo Credit : News Kannada

ಬೆಂಗಳೂರು:  ಜನವರಿ 25ರ ಕಳೆದ ದಿನ ದರ್ಶನ್​ ಪತ್ನಿ ವಿಜಯಲಕ್ಷ್ಮಿ ಕುಟುಂಬದ ಚಿತ್ರವೊಂದನ್ನು ಅಪ್​ಲೋಡ್ ಮಾಡಿದ್ದರು. ಅದರ ಬೆನ್ನಲ್ಲೆ ದರ್ಶನ್​ಗೆ ಆಪ್ತರಾಗಿರುವ ಪವಿತ್ರಾ ಗೌಡ ಸಹ ತಮ್ಮ ಹಾಗೂ ದರ್ಶನ್​ರ ಹಲವು ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು ‘ನಮ್ಮ ಸಂಬಂಧಕ್ಕೆ ಹತ್ತು ವರ್ಷ’ ಎಂದು ಕ್ಯಾಪ್ಷನ್ ಬರೆದುಕೊಂಡರು. ಇದಕ್ಕೆ ಪ್ರತಿಯಾಗಿ ವಿಜಯಲಕ್ಷ್ಮಿ, ಪವಿತ್ರಾ ಗೌಡ ಅವರನ್ನು ಉದ್ದೇಶಿಸಿ ಇನ್​ಸ್ಟಾಗ್ರಾಂನಲ್ಲಿ ವಾಗ್ದಾಳಿ ನಡೆಸಿದ್ದು, ಕಾನೂನು ಕ್ರಮದ ಎಚ್ಚರಿಕೆಯನ್ನು ನೀಡಿದ್ದಾರೆ.

ಆದರೀಗ ಪವಿತ್ರ ಗೌಡ ತಮ್ಮ ಇನ್‌ಸ್ಟಾಗ್ರಾಮ್‌ ಫೋಸ್ಟ್‌ನಲ್ಲಿ, ನಾನು ಪವಿತ್ರ ಗೌಡ, ನನ್ನ ಮಗಳು ಖುಷಿ ಗೌಡ. ನಾನು ಸಂಜಯ್ ಎಂಬ ವ್ಯಕ್ತಿಯನ್ನು ಮದುವೆಯಾಗಿದ್ದು ನಂತರ ಖುಷಿ ಗೌಡ ಹುಟ್ಟಿರುತ್ತಾಳೆ. ನಮ್ಮ ಲೈಫ್‌ನಲ್ಲಿ ಉಂಟಾದ ತೊಂದರೆ ಇಂದ ನಾನು ಸಂಜಯ್ ಅವರಿಂದ ಡಿವೋರ್ಸ್‌ ಪಡೆದಿದೇನೆ. ಇಲ್ಲಿಯ ವರೆಗೂ ಖುಷಿ ಗೌಡ ದರ್ಶನ್ ಶ್ರೀನಿವಾಸರವರ ಮಗಳೆಂದು ನಾನು ಎಲ್ಲೂ ಹೇಳಿಲ್ಲ!!

ನಾನು ಹಾಗೂ ದರ್ಶನ್ ಶ್ರೀನಿವಾಸರವರು ಕಳೆದ 10 ವರ್ಷಗಳಿಂದ ಜೊತೆಯಲ್ಲಿ ಸಂತೋಷವಾಗಿದ್ದೀವಿ. ದಯವಿಟ್ಟು ಇದನ್ನು ಗಮನಿಸಿ “ನಾನು ಯಾವುದೇ ಸ್ವಂತ ವೈಯಕ್ತಿಕ ಅಗತ್ಯತೆಗಳು ಮತ್ತು ಕೆಲಸಕ್ಕಾಗಿ ಅವರ ಜೊತೆ ಇಲ್ಲ” ಇದು 10 ವರ್ಷಗಳ ಕಾಲ ಶುದ್ಧ ಪ್ರೀತಿ ಮತ್ತು ಕಾಳಜಿ, ಈ ವಿಷಯ ವಿಜಯಲಕ್ಷ್ಮಿ ಅವರಿಗೂ ಮೊದಲೇ ತಿಳಿದಿರುತ್ತದೆ.

ಈ ವಿಚಾರವಾಗಿ ವಿಜಯಲಕ್ಷ್ಮಿಯವರೆ ನನಗೆ ಹಲವಾರು ಸಾರಿ ಕಾಲ್‌ ಮಾಡಿ ನನ್ನ ಬಳಿ ಮಾತನಾಡಿದ್ದು ತಮಗೆ ಯಾವುದೇ ರೀತಿಯ ತೊಂದರೆ ಇಲ್ಲವೆಂದು ತಿಳಿಸಿರುತ್ತಾರೆ. (ಅದರ ಕೆಲವು ದಾಖಲೆ ಹಾಗೂ ನನ್ನ ಡಿವೋರ್ಸ್‌ ಪತ್ರಗಳನ್ನು ಸಮಯ ಬಂದಾಗ ಹಂಚಿಕೊಳ್ಳುತ್ತೇನೆ). ಇದೀಗ ವಿಜಯಲಕ್ಷ್ಮಿರವರು ನನ್ನ ವಿರುದ್ಧವಾಗಿ ಪೋಸ್ಟ್‌ಗಳನ್ನು ಹಾಕುತ್ತಿರುವುದು ನನಗೆ ಬೇಸರ ಉಂಟು ಮಾಡಿದೆ.

ನನ್ನ ಹಾಗೂ ನನ್ನ ಮಗಳಾದ ಖುಷಿ ಗೌಡಳ ಬಗ್ಗೆ ವಿಜಯಲಕ್ಷ್ಮಿ ದರ್ಶನ್‌ ಯಂಬ ಇನ್‌ಸ್ಟಾಗ್ರಾಂ ಪೋಸ್ಟ್‌ನಲ್ಲಿ ಬಹಳಷ್ಟು ಜನ ಕೆಟ್ಟ ಪದಗಳಿಂದ ನಿಂದಿಸುವುದು ನನಗೆ ಮಾನಸಿಕ ನೋವು ಉಂಟುಮಾಡಿದೇ. ನನ್ನ ಜೀವನದ ಹಳೆಯ ವಿಚಾರಗಳನ್ನು ಹಾಗೂ ನನ್ನ ಖಾಸಗಿ ಫೋಟೋಗಳನ್ನು ಪೋಸ್ಟ್‌ ಮಾಡುವ ಹಕ್ಕು ಯಾರಿಗೂ ಇರುವುದಿಲ್ಲ.

ಈ ಮೂಲಕ ನಾನು ಹೇಳುವುದೇನೆಂದರೆ ನನಗೂ ಕಾನೂನು ಬದ್ದ ಕ್ರಮ ತಗೊಳೋ ಹಕ್ಕು ಇದೆ, ಆದರೂ ನಾನು ಈ ವಿಚಾರವನ್ನು ದೊಡ್ಡದು ಮಾಡುತ್ತಿಲ್ಲ. ಎಚ್ಚರ ಇರಲಿ. ನಾನು ನನ್ನನ್ನು ಪ್ರೀತಿಸುವವರ ಜೊತೆಗೆ ಸಂತೋಷದಿಂದಿರಬೇಕೆಂದು ನಿಶ್ಚಯಿಸಿದ್ದೇನೆ ಎಂದು ನೇರವಾಗಿ ವಿಜಯಲಕ್ಷ್ಮಿ ದರ್ಶನ್‌ ಅವರನ್ನು ಟ್ಯಾಗ್‌ ಮಾಡಿ ಎಚ್ಚರಿಕೆ ನೀಡಿದ್ದಾರೆ.

ಪವಿತ್ರಾ ಗೌಡ ಅವರು ತಮ್ಮ ಈ ಪೋಸ್ಟ್​ ಅನ್ನು ನೇರವಾಗಿ ವಿಜಯಲಕ್ಷ್ಮಿ ದರ್ಶನ್ ಅವರಿಗೆ ಟ್ಯಾಗ್ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು