Showing 20 of 755 posts • Page 2 of 38
ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ದಂಪತಿ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ತಾರಾ ಜೋಡಿಯು ಭಾನುವಾರದಂದು ಈ ವಿಷಯವನ್ನು ಸಾಮಾಜಿಕ ಮಾಧ್ಯಮದ ಮೂಲಕ ಬಹಿರಂಗಪಡಿಸಿದ್ದಾರೆ.
ಕರ್ನಾಟಕ ರತ್ನ ಸಾಹಸಸಿಂಹ ಡಾ. ವಿಷ್ಣುವರ್ಧನ್ ರವರು ನಟಿಸಿ ಭರ್ಜರಿ ಜಯಭೇರಿ ಹೊಡೆದ ಕೋಟಿಗೊಬ್ಬ ಚಿತ್ರ 25 ವರ್ಷಗಳ ನಂತರ ರೀ ರಿಲೀಸ್ ಆಗಿದೆ.
ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ ಹಾಗೂ ಯಕ್ಷಗಾನ ಹರಕೆ ಪ್ರದರ್ಶನ ನಡೆದಿದೆ.
ತಮಿಳುನಾಡು ಚುನಾವಣಾ ಪ್ರಚಾರದಲ್ಲಿ ತೊಡಗಿರುವ ನಟ-ರಾಜಕಾರಣಿ ವಿಜಯ್ ಅವರಿಗೆ ಸಂಬಂಧಿಸಿದ ವಿಚಿತ್ರ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ಕಾಂತಾರ ಚಿತ್ರದ ಮೂಲಕ ಜನಪ್ರಿಯತೆ ಗಳಿಸಿರುವ ಡಿವೈನ್ಸ್ಟಾರ್ ರಿಷಬ್ ಶೆಟ್ಟಿ, ದಂಪತಿ ಸಮೇತ ಸೋಮವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.
ರಣ್ಬೀರ್ ಕಪೂರ್ ಹಾಗೂ ಯಶ್ ನಟನೆಯ ‘ರಾಮಾಯಣ’ ಸಿನಿಮಾದ ಟೀಸರ್ ಇಂದು ಬಿಡುಗಡೆಯಾಗಿದೆ.
ʼಪೀಟರ್ʼ ಚಿತ್ರ ಏ.10ಕ್ಕೆ ಬಿಡುಗಡೆಯಾಗುತ್ತಿದೆ. ಈ ಹಿಂದೆ ದೂರದರ್ಶನ ಎಂಬ ಸಿನಿಮಾ ಮಾಡಿದ್ದ ಸುಕೇಶ್ ಈಗ ಪೀಟರ್ ಸಿನಿಮಾ ಮಾಡಿದ್ದಾರೆ.
“ಧುರಂಧರ್ 2 ” ಸಿನಿಮಾ ಬಗ್ಗೆ ಅಭಿಮಾನಿಗಳಿಂದ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆದರೆ ಸಿನಿಮಾದಲ್ಲಿ ತೋರಿಸಲಾಗಿರುವ ಅತಿಯಾದ ಹಿಂಸೆಯ ಬಗ್ಗೆ ಕನ್ನಡದ ಖ್ಯಾತ ನಟಿ, ಮಾಜಿ ಸಂಸದೆ ರಮ್ಯಾ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.
ಬಾಲಿವುಡ್ ಹೀರೋ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2: ದಿ ರಿವೆಂಜ್’ ಚಿತ್ರವು ಭಾರತೀಯ ಬಾಕ್ಸ್ ಆಫೀಸ್ನಲ್ಲಿ ಐತಿಹಾಸಿಕ ಆರಂಭವನ್ನು ಪಡೆದಿದ್ದು, ಮೊದಲ ದಿನ ಬರೋಬ್ಬರಿ ₹145.55 ಕೋಟಿ ಗಳಿಸಿದೆ. ಕೇವಲ ಮೊದಲ ದಿನದ (ಶುಕ್ರವಾರ) ಕಲೆಕ್ಷನ್ ₹102.55 ಕೋಟಿ ಆಗಿದೆ.
ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ ಸಿನಿಮಾ ಇಂದು ವಿಶ್ವದಾದ್ಯಂತ ರಿಲೀಸ್ ಆಗಿದೆ.
ಸ್ಯಾಂಡಲ್ವುಡ್ನ ‘ಕೆಡಿ’ ಚಿತ್ರದ ‘ಸರ್ಸೆ ಸೆರಗ ಸರ್ಸೆ’ ಹಾಡಿನ ಸಾಹಿತ್ಯದ ಸುತ್ತ ಎದ್ದಿದ್ದ ವಿವಾದಕ್ಕೆ ನಿರ್ದೇಶಕ ಪ್ರೇಮ್ ಇದೀಗ ಬ್ರೇಕ್ ಹಾಕಿದ್ದಾರೆ. ಕಳೆದ ಎರಡು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ಈ ಹಾಡಿನ ಬಗ್ಗೆ ಸ್ಪಷ್ಟನೆ ನೀಡಿರುವ ಜೋಗಿ ಪ್ರೇಮ್, ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಲ್ಲದೆ ಹಾಡನ್ನು ಮರು ರಚಿಸುವುದಾಗಿ ಘೋಷಿಸಿದ್ದಾರೆ.
ಧ್ರುವ ಸರ್ಜಾ ನಟನೆಯ ‘KD: The Devil’ ಚಿತ್ರದ “ಸರ್ಸೆ ನಿನ್ನ ಸೆರಗ ಸರ್ಸೆ” ಹಾಡು ಈಗ ದೊಡ್ಡ ಮಟ್ಟದ ವಿವಾದಕ್ಕೆ ಕಾರಣವಾಗಿದೆ. ನಿರ್ದೇಶಕ ಪ್ರೇಮ್ ಅವರೇ ಬರೆದಿರುವ ಈ ಹಾಡಿನ ಸಾಹಿತ್ಯ ಅತ್ಯಂತ ಅಶ್ಲೀಲವಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ನಾಗಾರಾಧನೆಯ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಾಲಿವುಡ್ ಸ್ಟಾರ್ ನಟ ಅರ್ಜುನ್ ಕಪೂರ್ ಭೇಟಿ ನೀಡಿದ್ದಾರೆ. ಕಳೆದ ಮೂರು ದಿನಗಳಿಂದ ಕ್ಷೇತ್ರದಲ್ಲಿ ವಾಸ್ತವ್ಯ ಹೂಡಿದ್ದ ಅವರು, ವಿವಿಧ ವಿಶೇಷ ಪೂಜಾ ವಿಧಿವಿಧಾನಗಳಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದರು.
ಡಾರ್ಲಿಂಗ್ ಕೃಷ್ಣ ನಿರ್ದೇಶನ ಮಾಡಿ ನಟಿಸಿರುವ ಚಿತ್ರ ಲವ್ ಮಾಕ್ಟೇಲ್ 3 ಮಾರ್ಚ್ 19ರಂದು ಬಿಡುಗಡೆಗೊಳ್ಳಲಿರುವ ಈ ಚಿತ್ರದ ಟ್ರೈಲರ್ ಇದೀಗ ಬಿಡುಗಡೆಗೊಂಡಿದೆ.
ʼಅಪ್ಪು ಉತ್ಸವʼ ಇದು ನಿಮ್ಮ ವಾಹಿನಿ ಕಲಾ ವೇದಿಕೆ (ರಿ) ವತಿಯಿಂದ ಆಯೋಜಿಸಲಾಗಿದ್ದು, ರಾಯಭಾರಿಯಾಗಿ ನೆನಪಿರಲಿ ಪ್ರೇಮ್ ಆಯ್ಕೆಯಾಗಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಪ್ರೇಮ್ ಮಾತನಾಡಿ 21ನೇ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮದಲ್ಲಿ ಭರತನಾಟ್ಯ ಕಲಾವಿದರಿಗೆ ಸಾಧಕರಿಗೆ ಸನ್ಮಾನ ಮಾಡುತ್ತಿರುವುದು ಖುಷಿ ತಂದಿದೆ ಎಂದು ತಿಳಿಸಿದರು. ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಕೆ.ವಿ. ಭಾಗವಹಿಸಿದ್ದರು.
ಇತ್ತೀಚೆಗೆ ಪ್ರೇಕ್ಷಕರು ಥಿಯೇಟರ್ಗೆ ಹೋಗಿ ಸಿನಿಮಾ ನೋಡುವುದು ಹೆಚ್ಚಾಗುತ್ತಿದೆ. ಟಿಕೆಟ್ಗೆ ಹಣ ನೀಡುವುದು ಮಾತ್ರವಲ್ಲದೆ, ಮಲ್ಟಿಫ್ಲೆಕ್ಸ್ನಲ್ಲಿ ಪಾರ್ಕಿಂಗ್, ಪಾಪ್ಕಾರ್ನ್ಗೂ ಭಾರೀ ಹಣವನ್ನು ನೀಡಬೇಕಾಗುತ್ತದೆ. ಆದರೆ ಈ ವಿಚಾರದಲ್ಲಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಇನ್ಮುಂದೆ ಥಿಯೇಟರ್ ಆವರಣದಲ್ಲಿ ನಿಲ್ಲಿಸುವ ವಾಹನಗಳಿಗೆ ಪಾರ್ಕಿಂಗ್ ಶುಲ್ಕ ನೀಡಬೇಕಿಲ್ಲವೆಂದು ಹೈಕೋರ್ಟ್ ಆದೇಶ ನೀಡಿದೆ.
ಆದಿತ್ಯ ಧರ್ ನಿರ್ದೇಶನ, ರಣವೀರ್ ಸಿಂಗ್ ನಟನೆಯ ‘ಧುರಂಧರ್: ದಿ ರಿವೆಂಜ್’ ಸಿನಿಮಾದ ಟ್ರೇಲರ್ ಇಂದು (ಮಾರ್ಚ್ 7) ಬಿಡುಗಡೆಯಾಗಿದೆ. ಟ್ರೇಲರ್ ಬಿಡುಗಡೆ ಬಗ್ಗೆ ನಟ ರಣವೀರ್ ಸಿಂಗ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಮಾರ್ಚ್ 19ರಂದು ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ
ಸ್ಯಾಂಡಲ್ವುಡ್ನ ಖ್ಯಾತ ಚಲನಚಿತ್ರ ನಿರ್ಮಾಪಕ, ನಿರ್ದೇಶಕ ಹಾಗೂ ಸಂಕಲನಕಾರ ನರಹಳ್ಳಿ ಜ್ಞಾನೇಶ್ (48) ಅವರು ಶುಕ್ರವಾರ ಹೃದಯಾಘಾತದಿಂದ ಹಠಾತ್ ನಿಧನರಾಗಿದ್ದಾರೆ.
ಬೆದರಿಕೆ ಹಾಗೂ ನಿಂದನೆ ಆರೋಪದಡಿ ಬಿಗ್ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ವಿರುದ್ಧ ಕೆ.ಆರ್ ಪುರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಜಾಗತಿಕ ರಾಜಕೀಯ ಬಿಕ್ಕಟ್ಟಿನಿಂದಾಗಿ ಮಾರ್ಚ್ 19 ರಂದು ಬಿಡುಗಡೆಯಾಗಬೇಕಿದ್ದ ಯಶ್ ಅವರ ಟಾಕ್ಸಿಕ್ ಚಿತ್ರದ ಬಿಡುಗಡೆಯನ್ನು ಮುಂದೂಡಲಾಗಿದೆ.