Showing 20 of 807 posts • Page 3 of 41
ಕಳೆದ ಕೆಲವು ದಿನಗಳ ಹಿಂದೆ ದೊಡ್ಡಣ್ಣ ನಿಧನರಾಗಿದ್ದಾರೆ ಅಂತ ಸುಳ್ಳು ಸುದ್ದಿ ಹಬ್ಬಿಸಿದ್ದರು.
ಬಾಲಿವುಡ್ ನಟಿ ಆಲಿಯಾ ಭಟ್ ಹಾಗೂ ಶಾರ್ವರಿ ನಟನೆಯ ಬಹುನಿರೀಕ್ಷಿತ ಆಕ್ಷನ್ ಸಿನಿಮಾ ‘ಆಲ್ಫಾ’ ದ ಟ್ರೇಲರ್ ಇಂದು ಬಿಡುಗಡೆಯಾಗಿದೆ
ಕುಂಕುಮ ಭಾಗ್ಯ ಧಾರಾವಾಹಿಯ ಮೂಲಕ ಖ್ಯಾತಿ ಗಳಿಸಿದ್ದ ಸಂಚಿತಾ ಉಗಲೆ ಇನ್ನಿಲ್ಲ.
ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಶುಕ್ರವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದ ಬಳಿಕ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ದೇವಸ್ಥಾನದ ಹೊರಭಾಗದಲ್ಲಿ ನೆರೆದಿದ್ದ ಅಭಿಮಾನಿಗಳತ್ತ ತೆರಳಿ ನಮಸ್ಕರಿಸಿದರು.
ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ನಿಧನ ಹೊಂದಿದ್ದಾರೆ ಎನ್ನುವ ಸುಳ್ಳು ಸುದ್ದಿ ವೈರಲ್ ಆಗುತ್ತಿದೆ.
ಮಂಗಳೂರು: ಸುಮುಖ ಪ್ರೊಡಕ್ಷನ್ಸ್ ಲಾಂಛನದಲ್ಲಿ ಜಿಸ್ನು ಎಸ್ ಮೆನನ್ ಮತ್ತು ಸಿದ್ದಾಥ್೯ ಶೆಟ್ಟಿ ನಿರ್ದೇಶನ ವಿಶಾಂತ್ ಮಿನೆಜಸ್ ನಿರ್ಮಾಣದಲ್ಲಿ ತಯಾರಾದ “ಕಜ್ಜ” ತುಳು ಸಿನಿಮಾ ಮಂಗಳೂರಿನ ಭಾರತ್ ಮಾಲ್ ನಲ್ಲಿರುವ ಭಾರತ್ ಸಿನಿಮಾಸ್ ನಲ್ಲಿ ಜೂನ್ 11 ರಂದು ಬಿಡುಗಡೆಗೊಂಡಿತು. ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ಅಧ್ಯಕ್ಷರಾದ ಹರಿಕೃಷ್ಣ ಪುನರೂರು, ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಕಲ್ಕೂರ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.ತುಳುಚಿತ್ರರಂಗಕ್ಕೆ ತನ್ನದೇ ಆದ ಇತಿಹಾಸ […]
ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ನಿಧನರಾಗಿದ್ದಾರೆ.
ಮಂಗಳೂರಿನ ಪ್ರತಿಭಾವಂತ ಮಗಳು ವೆನ್ಸಿಟಾ ಡಾಯಸ್ ಅವರು, ಜೂನ್ 11ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿರುವ ಬಹುನಿರೀಕ್ಷಿತ ತುಳು ಚಿತ್ರ ‘ಕಜ್ಜ’ದ ಮೂಲಕ ತುಳು ಸಿನಿಮಾರಂಗದಲ್ಲಿ ತಮ್ಮ ಹೆಜ್ಜೆಯನ್ನು ಮುಂದುವರಿಸುತ್ತಿದ್ದು, ಯುವ ಕನಸುಗಾರರಿಗೆ ಸ್ಫೂರ್ತಿಯಾಗಿದ್ದಾರೆ.
ಸುಮುಖ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣಗೊಂಡಿರುವ ಬಹುನಿರೀಕ್ಷಿತ ತುಳು ಚಲನಚಿತ್ರ “ಕಜ್ಜ” ಜೂನ್ 11ರಂದು ಕರಾವಳಿ ಜಿಲ್ಲೆಗಳಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ಕಥೆ, ಚಿತ್ರಕಥೆ ಹಾಗೂ ಸಾಹಿತ್ಯ ರಚನೆಕಾರ ಮೋಹನ್ ರಾಜ್ ತಿಳಿಸಿದ್ದಾರೆ.
ಹೊಸ ತುಳು ಸಿನಿಮಾ ಕಜ್ಜ. ಸಂಪೂರ್ಣ ಕುಟುಂಬ ಮನೋರಂಜನೆಯ ಚಿತ್ರವಾಗಿದ್ದು, ಈ ಸಿನಿಮಾ ಹೇಳೋದು ನಮ್ಮ ಬದುಕಿನ ಬೆಲೆಬಾಳುವ ವಿಷಯಗಳನ್ನ, ಕುಟುಂಬದ ಬಂಧ, ಧಾರ್ಮಿಕ ಸೌಹಾರ್ದತೆ ಮತ್ತು ತುಳುನಾಡಿನ ಸಂಸ್ಕೃತಿ-ಸಂಪ್ರದಾಯದ ಮೌಲ್ಯಗಳಿವೆ.
ಬಿಗ್ ಬಾಸ್ ಮಾಜಿ ಸ್ಪರ್ಧಿ ಶುಭಾ ಪೂಂಜಾ ಅವರ ವೈವಾಹಿಕ ಜೀವನದಲ್ಲಿ ಬಿರುಗಾಳಿ ಎದ್ದಿದ್ದು, ಮದುವೆಯಾಗಿ ನಾಲ್ಕೇ ವರ್ಷಕ್ಕೆ ನಟಿ ಶುಭಾ ಪೂಂಜಾ ಹಾಗೂ ಅವರ ಪತಿ ಸುಮಂತ್ ಬಿಲ್ಲವ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ್ದಾರೆ.
ದುಬೈ ನ ಫಿಶೇರ್ ಮನ್ಸ್ ಹಬ್ ನಲ್ಲಿ ಹೊಸ ತುಳು ಚಿತ್ರ ‘ಕಜ್ಜ’ದ ಆಡಿಯೋ, ಟ್ರೇಲರ್ ಮತ್ತು ಸಂಗೀತ ಮೇ 30 ರಂದು ಅದ್ದೂರಿಯಾಗಿ ಬಿಡುಗಡೆಯಾಯಿತು.
ʼಕಾಂತಾರʼ ಬೆಡಗಿ ರುಕ್ಮಿಣಿ ವಸಂತ್ ಅವರ ನಕಲಿ ಬಿಕಿನಿ ವಿಡಿಯೋ ಮತ್ತು ಫೋಟೋಸ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಈ ಕುರಿತು ಎಫ್ಐಆರ್ ದಾಖಲಾಗಿದೆ.
ಕ್ರೇಜಿಸ್ಟಾರ್ ರವಿಚಂದ್ರನ್ ಅವರಿಗೆ ಇಂದು 65ನೇ ಹುಟ್ಟುಹಬ್ಬದ ಸಂಭ್ರಮ.
ಕಾಂತಾರʼ ಚಾವುಂಡಿ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ, ತಾಯಿಯೆದುರು ಕ್ಷಮೆಯಾಚಿಸಿದ್ದಾರೆ.
ನಟ ರಕ್ಷಿತ್ ಶೆಟ್ಟಿ ತಂದೆ ತಾಯಿ ಮದುವೆಯ ಸುವರ್ಣ ಮಹೋತ್ಸವ ನಡೆಯಿತು. ಉಡುಪಿಯ ಬೈಲೂರು ಮಹಿಷಮರ್ದಿನಿ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯಿತು
ಬಾಲಿವುಡ್ ನಟಿ ಕರಿಷ್ಮಾ ಕೆ. ತನ್ನಾ ಅವರು ತುಳು ಸಂಪ್ರದಾಯದಂತೆ ಸೀಮಂತ ಶಾಸ್ತ್ರ ಮಾಡಿಸಿಕೊಂಡಿದ್ದಾರೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕನ್ನಡ ನಟ ದರ್ಶನ್ ತೂಗುದೀಪ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿಗಳನ್ನು ಕರ್ನಾಟಕ ಜೈಲು ಅಧಿಕಾರಿಗಳು ತಳ್ಳಿಹಾಕಿದ್ದಾರೆ.
ಗಾಯನ ಹಾಗೂ ನಟನೆಯ ಮೂಲಕ ಕನ್ನಡಿಗರ ಮನಗೆದ್ದಿರುವ ನವೀನ್ ಸಜ್ಜು ಪ್ರಮುಖ ಭೂಮಿಕೆಯಲ್ಲಿ ನಟಿಸಿರುವ, ಇತ್ತೀಚೆಗಷ್ಟೇ ತೆರೆಕಂಡು ಪ್ರೇಕ್ಷಕರ ಅಪಾರ ಮೆಚ್ಚುಗೆಗೆ ಪಾತ್ರವಾಗಿರುವ ‘ಲೋ ನವೀನ’ ಚಲನಚಿತ್ರವು ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿದೆ.