Showing 20 of 805 posts • Page 6 of 41
ಬಾಲಿವುಡ್ ನಟ ರಣವೀರ್ ಸಿಂಗ್ಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನಿಂದ ಮತ್ತೆ ಬೆದರಿಕೆ ಬಂದಿದೆ.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಫಿಲಂ ಚೇಂಬರ್ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಆಯ್ಕೆಯಾಗಿದ್ದಾರೆ.
ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎ. ಆರ್. ರೆಹಮಾನ್ ಅವರಿಗೆ ಅತ್ಯುತ್ತಮ ಸಂಗೀತ ನಿರ್ದೇಶಕ ರಾಜ್ಯ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
ತುಳುನಾಡಿನ ದೈವಕ್ಕೆ ʻಹೆಣ್ಣು ದೆವ್ವʼ ಅಂತ ಅಪಮಾನ ಮಾಡಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಹೇಳಿಕೆ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಪುತ್ತೂರಿನ ಗೌರವಕ್ಕೊಂದು ಗರಿ ಮೂಡಿದ ಸುದ್ಧಿ ಬಂದಿದೆ. ಪುತ್ತೂರಿನ ಹುಡುಗ ಅಕ್ಷಯ್ ನಾಯಕ್ ಅವರು ರಚಿಸಿ, ನಿರ್ಮಿಸಿ, ನಿರ್ದೇಶಿಸಿರುವ ಕೊಂಕಣಿ ಚಿತ್ರ “ಜೆವಣ್” 17ನೇ ಬೆಂಗಳೂರು ಅಂತರರಾಷ್ಟೀಯ ಚಿತ್ರೋತ್ಸವದ ಅನ್ಸಂಗ್ ಇನ್ಕ್ರೆಡಿಬಲ್ ಇಂಡಿಯಾ ಭಾರತೀಯ ಉಪಭಾಷಾ ವಿಭಾಗದಲ್ಲಿ ಪ್ರದರ್ಶನಗೊಳ್ಳಲು ಆಯ್ಕೆ ಆಗಿದ್ದು ಬೆಂಗಳೂರಿನ ಲುಲು ಮಾಲ್ ನಲ್ಲಿ ಪ್ರದರ್ಶನಗೊಳ್ಳಲಿದೆ.
ಮೆಟ್ರೋ ರೈಲಿನಲ್ಲಿ ಬಾಲಿವುಡ್ ನಟ ವರುಣ್ ಧವನ್ ಕೋಚ್ನೊಳಗೆ ಇರುವ ಹ್ಯಾಂಡಲ್ಗಳಿಂದ ಸ್ಟಂಟ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಬೆನ್ನಲ್ಲೇ ಮುಂಬೈ ಮೆಟ್ರೋ ರೈಲಿನಲ್ಲಿ ಸಾರ್ವಜನಿಕ ಅಶಾಂತಿ ಉಂಟು ಮಾಡಿದ ಆರೋಪದಡಿ ನಟ ವರುಣ್ ಧವನ್ಗೆ 500 ರೂ. ದಂಡ ವಿಧಿಸಲಾಗಿದೆ.
ಅರಿಜಿತ್ ಸಿಂಗ್ ಹಿನ್ನೆಲೆ ಗಾಯನದಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದು, ತಮ್ಮ ಇನ್ಸ್ಟಾಗ್ರಾಮ್ ಖಾತೆಯ ಮೂಲಕ ತಮ್ಮ ಅನುಯಾಯಿಗಳೊಂದಿಗೆ ಈ ಸುದ್ದಿಯನ್ನು ಹಂಚಿಕೊಂಡಿದ್ದಾರೆ.
ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಕಾರ್ಯಕ್ರಮ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ತುಳು ರಂಗಭೂಮಿಯ ಖ್ಯಾತ ನಟ, ಚಲನಚಿತ್ರ ನಿರ್ದೇಶಕ ದೇವದಾಸ್ ಕಾಪಿಕಾಡ್ ಮಾತನಾಡಿ, ‘ನಾನು ಮನೆಯಿಂದ ಹೊರ ಹೋದಾಗ ಮನೆಯಲ್ಲಿ ನನ್ನ ಕುಟುಂಬ ಕಾಯುತ್ತಿರುತ್ತದೆ’ ಎಂಬ ಜಾಗೃತ ಪ್ರಜ್ಞೆ ಪ್ರತಿಯೊಬ್ಬರಲ್ಲಿ ಬಂದಾಗ ನಿರ್ಲಕ್ಷ್ಯದ ಅಪಘಾತಗಳನ್ನು ತಡೆಯಬಹುದು ಎಂದರು.
‘ಬಿಗ್ ಬಾಸ್ ಕನ್ನಡ ಸೀಸನ್ 10’ರ ಮೂಲಕ ಜನಪ್ರಿಯರಾದ ಗೌತಮಿ ಜಾಧವ್ ಅವರು ಪತಿ ಅಭಿಷೇಕ್ ಜೊತೆಯಾಗಿ ಎರಡು ಟಾಟಾ ಸಫಾರಿ ಕಾರುಗಳನ್ನು ಖರೀದಿಸಿದ್ದಾರೆ.
ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ರಕ್ತ ಕಾಶ್ಮೀರ ಚಿತ್ರ ಜ.30ರಂದು ಬಿಡುಗಡೆಯಾಗುತ್ತಿದೆ.
ನಟಿ ಕಾವ್ಯ ಗೌಡ ಮತ್ತು ಆಕೆಯ ಪತಿ ಸೋಮಶೇಖರ್ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ನಟಿಸಿ ಚಿರಪರಿಚಿತರಾದ ನಟಿ ಸಂಜನಾ ಬುರ್ಲಿ ಹೊಸ ಬಾಳಿಗೆ ಕಾಲಿಡುತ್ತಿದ್ದಾರೆ. ಹೌದು ನಟಿ ಸಂಜನಾ ಅವರು ವೈದ್ಯನೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಆ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಫೆಬ್ರವರಿ 16, 2025 ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟ ಡಾಲಿ ಧನಂಜಯ್ ಮತ್ತು ಧನ್ಯತಾ ಜೋಡಿ ಇದೀಗ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.
ಇಲ್ಲಿನ ವಸತಿ ಕಟ್ಟಡ ಮೇಲೆ ಫೈರಿಂಗ್ ಮಾಡಿದ ಆರೋಪದ ಮೇಲೆ ಬಾಲಿವುಡ್ ನಟ ಕಮಲ್ ಆರ್ ಖಾನ್ ಅವರನ್ನು ಅರೆಸ್ಟ್ ಮಾಡಿದ್ದಾರೆ.
12ನೇ ಆವೃತ್ತಿಯ ಬಿಗ್ ಬಾಸ್ ವಿಜೇತ ನಟ ಗಿಲ್ಲಿ ನಟರಾಜ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿ, ಶುಭ ಹಾರೈಸಿದರು.
ಬಿಗ್ಬಾಸ್ ಕನ್ನಡ ಸೀಸನ್ 12ರ ಪಟ್ಟ ಗೆದ್ದ ಗಿಲ್ಲಿ ಶಿವರಾಜ್ಕುಮಾರ್ ಅವರನ್ನು ಭೇಟಿಯಾಗಿದ್ದಾರೆ.
ಕರಾವಳಿಯ ಕಾರಣೀಕ ಕ್ಷೇತ್ರವಾದ ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಬಾಲಿವುಡ್ ನಟರಾದ ಸುನೀಲ್ ಶೆಟ್ಟಿ ಅವರು ಶುಕ್ರವಾರ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಹೊಸಬರ ’ಸುಖೀಭವ’ ಚಿತ್ರದ ಟೀಸರ್ ಮತ್ತು ಹಾಡುಗಳ ಬಿಡುಗಡೆ ಕಾರ್ಯಕ್ರಮ ಶ್ರೀ ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ದಂಪತಿಗಳಾದ ಸಂತೋಷ್ ಕುಮಾರ್-ಭಾರ್ಗವಿ ಸಂತೋಷ್, ಮಗನ ಹೆಸರಾದ ವೇದ್ ಆರ್ಯನ್ ಫಿಲಂಸ್ ಬ್ಯಾನರ್ ಅಡಿಯಲ್ಲಿ ಬಂಡವಾಳ ಹೂಡಿದ್ದಾರೆ. ಯೋಗರಾಜ್ ಭಟ್ ಸೇರಿದಂತೆ ಅನೇಕರ ಬಳಿ ಸಹಾಯಕರಾಗಿ ಗುರುತಿಸಿಕೊಂಡಿದ್ದ ಮೈಸೂರು ಮೂಲದ ಎನ್.ಕೆ.ರಾಜೇಶ್ ನಾಯ್ಡು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಸುಖೀಭವ ಹೆಸರಿನಂತೆ ಪ್ರಾರಂಭದಿಂದಲೂ ಯಾವುದೇ ಅಡೆತಡೆ ಇಲ್ಲದೆ ಎಲ್ಲಾ ಕೆಲಸಗಳು ಸುಗಮವಾಗಿ ಮುಗಿದಿದೆ. ಗೆಳಯ, […]
ಅಸ್ತ್ರ ಪ್ರೊಡಕ್ಷನ್ ಸಂಸ್ಥೆಯ ಲಂಚುಲಾಲ್ ಕೆ.ಎಸ್. ನಿರ್ಮಾಣದ ಬಹುನಿರೀಕ್ಷಿತ ಕ್ರೈಂ ಥ್ರಿಲ್ಲರ್ ತುಳು ಸಿನಿಮಾ ‘ಕಟ್ಟೆಮಾರ್’ ಇದೇ ಜನವರಿ 23ರಂದು ತೆರೆಗೆ ಬರಲಿದ್ದು, ಅದರ ಟ್ರೇಲರ್ ಬಿಡುಗಡೆ ಸಮಾರಂಭ ಮಂಗಳೂರಿನ ಬಿಗ್ ಸಿನಿಮಾಸ್ನಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಅದ್ಧೂರಿಯಾಗಿ ನೆರವೇರಿತು.
ಕನ್ನಡ ಚಿತ್ರರಂಗದಲ್ಲಿ ಎಂದಿಗೂ ಅಳಿಸಲಾಗದ ಇತಿಹಾಸ ನಿರ್ಮಿಸಿದ ಚಿತ್ರಗಳ ಪೈಕಿ ಓಂ ಸಿನಿಮಾ ಕೂಡ ಒಂದು. ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶನದಲ್ಲಿ ಹ್ಯಾಟ್ರಿಕ್ ಹೀರೋ ಶಿವಣ್ಣ ನಟಿಸಿದ್ದ ಈ ಸಿನಿಮಾ ಇಂದಿಗೂ ಅಷ್ಟೇ ಕ್ರೇಜ್ ಕಾಪಾಡಿಕೊಂಡಿರುವ ಚಿತ್ರ. ಕೇವಲ ಕನ್ನಡ ಮಾತ್ರವಲ್ಲದೇ ಭಾರತೀಯ ಚಿತ್ರರಂಗದಲ್ಲೇ ತನ್ನದೇ ಛಾಪು ಮೂಡಿಸಿದೆ.