ಖಾರಖಾರವಾಗಿ ಬಿಸಿಬಿಸಿಯಾಗಿ ಏನಾದರೂ ತಿನ್ನಬೇಕು ಅಂದುಕೊಂಡಿದ್ದೀರ. ಹಾಗಾದರೆ ಮನೆಯಲ್ಲಿಯೇ ಸಿಂಪಲ್ ಆಗಿ ಎಗ್ ರೈಸ್ ಮಾಡುವ ವಿಧಾನ ನಿಮಗಾಗಿ ಇಲ್ಲಿದೆ.
ಬೇಕಾಗುವ ಸಾಮಾಗ್ರಿಗಳು
1. ಮೊಟ್ಟೆ – 2-3
2. ಅನ್ನ – 1 ಬಟ್ಟಲು
3. ದಪ್ಪ ಈರುಳ್ಳಿ – 1, ಸಣ್ಣಗೆ ಹೆಚ್ಚಿದ್ದು
4. ಹಸಿ ಮೆಣಸಿನಕಾಯಿ – 5ರಿಂದ6
(ಖಾರದ ಪುಡಿ ಬೇಕಾದ್ರೆ ಬಳಸಬಹುದು)
5. ಬೆಳ್ಳುಳ್ಳಿ, ಶುಂಠಿ ಪೇಸ್ಟ್ – 1 ಚಮಚ
6. ಗರಂ ಮಸಾಲ – ಒಂದೂವರೆ ಚಮಚ
7. ಕಡ್ಲೆಬೇಳೆ – 1-2 ಚಮಚ
8. ನಿಂಬೆಹಣ್ಣು – ಅರ್ಧ ಹೋಳು
9. ಕೊತ್ತಂಬರಿ ಸೊಪ್ಪು – ಸ್ವಲ್ಪ
10. ಅರಿಶಿನ ಪುಡಿ – ಚಿಟಿಕೆ
11. ಜೀರಿಗೆ+ಸಾಸಿವೆ – ಅರ್ಧ ಚಮಚ
12. ಉಪ್ಪು – ರುಚಿಗೆ ತಕ್ಕಷ್ಟು
13. ಎಣ್ಣೆ – 3-4 ಚಮಚ
ಮಾಡುವ ವಿಧಾನ
ಮೊದಲಿಗೆ ಒಂದು ಪ್ಯಾನ್ಗೆ ಎಣ್ಣೆ ಹಾಕಿ ಜೀರಿಗೆ, ಸಾಸಿವೆ, ಕಡ್ಲೆಬೇಳೆ ಹಾಕಿ ಫ್ರೈ ಮಾಡಿರಿ. ಬಳಿಕ ಅದಕ್ಕೆ ಈರುಳ್ಳಿ, ಹಸಿ ಮೆಣಸಿನಕಾಯಿ, ಶುಂಠಿ, ಬೆಳ್ಳುಳ್ಳಿ ಪೇಸ್ಟ್, ಅರಿಶಿನ ಪುಡಿ ಸೇರಿಸಿ ಹಸಿ ವಾಸನೆ ಹೋಗೋ ತನಕ ಫ್ರೈ ಮಾಡಿ. ಎಲ್ಲವೂ ಫ್ರೈ ಆದ ಮೇಲೆ ಅದಕ್ಕೆ ಮೊಟ್ಟೆ ಒಡೆದು ಹಾಕಿ ಕಲಸಿರಿ.
ಬಳಿಕ ಅದನ್ನು 2 ನಿಮಿಷ ಬಿಡಿ.
ಮೊಟ್ಟೆ ಫ್ರೈ ಆದ ಮೇಲೆ ಅದಕ್ಕೆ ಬೇಯಿಸಿದ ಅನ್ನ, ಗರಂ ಮಸಾಲ, ಉಪ್ಪು, ಕೊತ್ತಂಬರಿ ಸೊಪ್ಪು ಸೇರಿಸಿ ಮಿಕ್ಸ್ ಮಾಡಿರಿ. ಕೆಳಗಿಳಿಸುವಾಗ ನಿಂಬೆಹಣ್ಣು ಹಿಂಡಿ ಮತ್ತೊಮ್ಮೆ ತಿರುಗಿಸಿ. ಬಿಸಿಬಿಸಿಯಾಗಿ ರುಚಿರುಚಿಯಾದ ಎಗ್ ರೈಸ್ ಸವಿಯಲು ಸಿದ್ಧ.
ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರವೂ ಏರಿಳಿತಗಳನ್ನು ಕಂಡಿದ್ದು, ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್ಗೆ 4…
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್ ಪಂದ್ಯದಲ್ಲಿ ವಿರಾಟ್…
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…