ಮನೆಯಲ್ಲಿಯೆ ಆರೋಗ್ಯಕರವಾದ ಗೋಬಿ ಮಂಚೂರಿ ಮಾಡಲು ಬೇಕಾಗುವ ಸಾಮಗ್ರಿಗಳು.
ಹೂಕೋಸು,ಕತ್ತರಿಸಿದ ಈರುಳ್ಳಿ 2, ಕತ್ತರಿಸಿದ ದುಂಡು ಮೆ ಣಸು 2, ವಸಂತದ ಈರುಳ್ಳಿ 6-7, ಟೊಮೆಟೊ 6. ಕಡಲೆ ಹಿಟ್ಟು 7. ಧಾನ್ಯಗಳ ಹಿಟ್ಟು 1/2 ಕಪ್, ಶುಂಠಿ ಮತ್ತು ಬೆಳ್ಳುಳ್ಳಿ ಪೇಸ್ಟ್ 1 ಚಮಚ, ಕತ್ತರಿಸಿದ ಹಸಿಮೆಣಸು 8, ಕೊತ್ತಂಬರಿ ಸೊಪ್ಪು, ಬೆಳ್ಳುಳ್ಳಿ ಎಸಳು 6, ಕರಿಮೆಣಸು 2 ಚಮಚ, ಸೋಯಾ ಸಾಸ್ 2 ಚಮಚ, ಅಜಿನೊಮೊಟೊ 1 ಚಿಟುಕು, ಎಣ್ಣೆ ಬಾಣಲೆಯಲ್ಲಿ ಅರ್ಧ, ಉಪ್ಪು ರುಚಿಗೆ ತಕ್ಕಷ್ಟು
ಗೋಬಿ ಮಂಚೂರಿಮಾಡುವ ವಿಧಾನ:
ಕತ್ತರಿಸಿದ ಹೂಕೋಸನ್ನು ಉಪ್ಪು ಹಾಕಿ ಬೇಯಿಸಬೇಕು. ಬೇಯಿಸುವಾಗ ಪಾತ್ರೆಯ ಬಾಯಿಯನ್ನು ಮುಚ್ಚಿ ಬೇಯಿಸಬೇಕು. ನೀರನ್ನು ಬಸಿದು ಹೂಕೋಸನ್ನು ಅಗಲವಾದ ಪಾತ್ರೆಯಲ್ಲಿ ಆರಲು ಇಡಬೇಕು ಇದರಿಂದ ಹೂಕೋಸಿನಲ್ಲಿ ನೀರು ಆವಿಯಾಗುತ್ತದೆ. ಒಂದು ಪಾತ್ರೆಯನ್ನು ತೆಗೆದುಕೊಂಡು ಅದಕ್ಕೆ ಕಟಲೆಹಿಟ್ಟು, ಜೋಳದ ಹಿಟ್ಟು, ಕತ್ತರಿಸಿದ ಮೆಣಸಿನಲ್ಲಿ ಅರ್ಧ, ಕರಿಮೆಣಸು, ಶುಂಠಿ ಮತ್ತು ಬೆಳ್ಳುಳ್ಳಿಯ ಪೇಸ್ಟ್ , ನೀರು ಹಾಕಿ ಗಟ್ಟಿಯಾಗಿ ಕಲಿಸಬೇಕು. ನಂತರ ಅರ್ಧ ಬಾಣಲೆಯಲ್ಲಿ ಎಣ್ಣೆ ಹಾಕಿ ಅದು ಕುದಿಯುವಾಗ ಅದರಲ್ಲಿ ಹೂಕೋಸನ್ನು ಹಿಟ್ಟಿನೊಂದಿಗೆ ಬೆರೆಸಿ ಹಾಕಬೇಕು. ನಂತರ ಉರಿಯನ್ನು ಕಡಿಮೆಮಾಡಿ ಅದನ್ನು ಎಣ್ಣೆಯಲ್ಲಿ ಮತ್ತಷ್ಟು ಹುರಿಯುವಂತೆ ಮಾಡಬೇಕು . ಹುರಿದ ಹೂಕೋಸನ್ನು ತೆಗೆದು ಪೇಪರಿನಲ್ಲಿ ಇಡಬೇಕು ಇದರಿಂದಾಗಿ ಅಧಿಕ ಣ್ಣೆಯನ್ನು ಪೇಪರ್ ಹೀರಿಕೊಳ್ಳುವುದು. ನಂತರ ಮತ್ತೊಂದು ಬಾಣಲೆಯನ್ನು ತೆಗೆದು ಅದಕ್ಕೆ ಸ್ಲ್ಪ ಎಣ್ಣೆ ಹಾಕಿ ಅದು ಬಿಸಿಯಾದಗ ಕತ್ತರಿಸಿದ ಈರುಳ್ಳಿಯನ್ನು ಹಾಕಬೇಕು. ಅದು ಕಂದು ಬಣ್ಣಕ್ಕೆ ತಿರುವಾಗ ಬೆಳ್ಳುಳ್ಳಿ ಮತ್ತು ಕರಿಮೆಣಸು ಹಾಕಿ ಬಿಸಿ ಮಾಡಬೇಕು. ಹೀಗೆ ಹುರಿಯತ್ತಾ ವಸಂತದ ಈರುಳ್ಳಿ ಬೆರೆಸಿ ಮತ್ತೂ 2 ನಿಮಿಷ ಹುರಿಯಬೇಕು. ಅದಕ್ಕೆ ಟೊಮೆಟೊ ಹಾಕಿ, ಕತ್ತರಿಸಿದ ಉಳಿದ ಮೆಣಸು ಮತ್ತು ದುಂಡು ಮೆಣಸು ಹಾಕಿ ಚೆನ್ನಾಗಿ ಮಿಕ್ಸ್ ಮಾಡಬೇಕು. 3-4 ನಿಮಿಷ ಬೇಯಿಸಿದ ನಂತರ ಅಜಿನೊಮಿಟೊ ಮತ್ತು ಸೋಯಾ ಸಾಸ್ ಹಾಕಿ ಮಿಕ್ಸ್ ಮಾಡಿ, ಅದಕ್ಕೆ 3/4 ನೀರು ಹಾಕಿ ಕುದಿಸಬೇಕು. ಗ್ರೇವಿ ಬಿಸಿಯಾಗಿ ಗುಳ್ಳೆಗಳು ಬರಲಾರಭಿಸಿದಾಗ ಹುರಿದ ಮಂಚೂರಿ ಹಾಕಿ 5 ನಿಮಿಷ ಕಾಯಿಸಬೇಕು. ಈಗ ಅದಕ್ಕೆ ಕೊತ್ತಂಬರಿ ಸೊಪ್ಪುವಿನಿಂದ ಅಲಂಕಾರ ಮಾಡಿದರೆ ರುಚಿರುಚಿಯಾದ ಗೋಬಿ ರೆಡಿ
ಈ ಬಾರಿ ಮುಂಗಾರು ಕೈಕೊಟ್ಟಿದ್ದರಿಂದ ಜಿಲ್ಲೆಯಲ್ಲಿ ಅಂತರ್ಜಲ ಕುಸಿದಿದ್ದು, ಬಿತ್ತನೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ವಾಡಿಕೆಯಷ್ಟು…
'ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದಡಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಬಂಧಿಸಿರುವಂತೆ ಹಾಸನದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ…
ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೃತ್ಯವನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಘಟನೆ ಏಪ್ರಿಲ್ 21 ರಂದು…
ಜಿಲ್ಲೆಯ ಜನ ಸ್ವತಂತ್ರರಾಗಿ ಬದುಕಬೇಕಾದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನಗೆ ಬೆಂಬಲಿಸಿ ಮತ ಹಾಕಬೇಕೆಂದು ಪಕ್ಷೇತರ ಅಭ್ಯರ್ಥಿ ಜೈರಾಜ ಕೆ.…
ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಭಾನುವಾರ ಸಂಜೆ ಅಲ್ಮೆಲ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಮತ್ತು ಶಾಸಕ ಅಶೋಕ ಮನಗೂಳಿಯವರು ಪಾದಯಾತ್ರೆ ನಡೆಸಿ ಮತಯಾಚಿಸಿದರು.