ಮಾವಿನಕಾಯಿ ಚಿತ್ರಾನ್ನ ಮಾಡಿ ನೋಡಿ!

ಮಾವಿನ ಕಾಯಿ ಎಲ್ಲೆಂದರಲ್ಲಿ ಸಿಗುತ್ತದೆ. ಹೀಗಾಗಿ ಒಂದಿಷ್ಟು ಹುಳಿ ಮಾವಿನ ಕಾಯಿ ಸೇರಿಸಿ ಚಿತ್ರಾನ್ನ ಮಾಡಿದರೆ ಬೆಳಗ್ಗಿನ ಉಪಹಾರಕ್ಕೆ ಬಾಯಿಗೆ ರುಚಿಯಾಗಿರುತ್ತದೆ. ಎಲ್ಲರ ಮನೆಯಲ್ಲೂ ಚಿತ್ರಾನ್ನ ಮಾಡಿಯೇ ಮಾಡುತ್ತಾರೆ. ಆದರೆ ಆ ಚಿತ್ರಾನ್ನಕ್ಕೆ ಆಗಾಗ್ಗೆ ಒಂದಿಷ್ಟು ಬದಲಾವಣೆ ಮಾಡಿದರೆ ಚಿತ್ರಾನ್ನನಾ ಅಂಥ ಮೂಗು ಮುರಿಯುವರಿಗೆ ಹೊಸ ರುಚಿ ನೀಡಿದಂತಾಗುತ್ತದೆ.

ಮಾವಿನಕಾಯಿ ಚಿತ್ರಾನ್ನ ಯಾರು ಬೇಕಾದರೂ ಮಾಡಬಹುದು ಏಕೆಂದರೆ ಇದನ್ನು ಮಾಡುವುದು ಸುಲಭವಾಗಿದೆ. ಹಾಗಾದರೆ ಹೇಗೆ ಮಾಡುವುದು? ಇಲ್ಲಿದೆ ವಿವರ.

ಬೇಕಾಗುವ ಪದಾರ್ಥಗಳು

ಮಾವಿನಕಾಯಿತುರಿ-  ಒಂದು ಕಪ್, ತೆಂಗಿನಕಾಯಿತುರಿ-  ಅರ್ಧ ಹೋಳು, ಒಣಮೆಣಸಿನಕಾಯಿ- ನಾಲ್ಕು, ಇಂಗು- ಸ್ವಲ್ಪ, ಸಾಸಿವೆ- ಸ್ವಲ್ಪ, ಅರಿಶಿನಪುಡಿ-ಚಿಟಿಕೆ, ಕೊತ್ತಂಬರಿ ಸೊಪ್ಪು- ಸ್ವಲ್ಪ, ಕರಿಬೇವು-ಸ್ವಲ್ಪ, ರುಚಿಗೆ ತಕ್ಕಂತೆ ಉಪ್ಪು

ಮಾಡುವ ವಿಧಾನ

ಮೊದಲಿಗೆ ಮಾವಿನತುರಿ ಸೇರಿದಂತೆ ಮಸಾಲೆ ಪದಾರ್ಥಗಳನ್ನು ಮಿಕ್ಸಿಯಲ್ಲಿ (ನೀರು ಹಾಕದೆ)  ಹಾಕಿ ರುಬ್ಬಬೇಕು.  ಮತ್ತೊಂದೆಡೆ ಪಾತ್ರೆಯಲ್ಲಿ ಒಗ್ಗರಣೆಗೆ ಎಣ್ಣೆ ಹಾಕಿ  ಅದಕ್ಕೆ ಸಾಸಿವೆ ಹಾಕಿ ಅದು ಸಿಡಿದ ಬಳಿಕ ಕಡ್ಲೆಬೀಜ, ಕಡ್ಲೆಬೇಳೆ, ಉದ್ದಿನ ಬೇಳೆ ಒಣ ಮೆಣಸು ಹಾಕಿ ಚೆನ್ನಾಗಿ ಹುರಿಯಬೇಕು. ನಂತರ ರುಬ್ಬಿಟ್ಟುಕೊಂಡ ಮಾವಿನ ತುರಿಯ ಮಸಾಲೆಯನ್ನು ಹಾಕಿ ಮಿಶ್ರಮಾಡಬೇಕು. ಈ ಸಂದರ್ಭ ರುಚಿಗೆ ತಕ್ಕಂತೆ ಉಪ್ಪು ಹಾಕಬೇಕು. ಆ ನಂತರ ಇಳಿಸಿ ಅದಕ್ಕೆ ಅನ್ನವನ್ನು ಹಾಕಿ ಕಲೆಸಬೇಕು ಅಲ್ಲಿಗೆ  ಮಾವಿನಕಾಯಿ ಚಿತ್ರಾನ್ನ ರೆಡಿ.

Sneha Gowda

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

1 hour ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

2 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

2 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

2 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

3 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

4 hours ago