ಹಬ್ಬಕ್ಕೆ ಮಾಡಿ ಬಾಳೆಹಣ್ಣಿನ ಹಲ್ವಾ

ಬಾಳೆಹಣ್ಣನ್ನು ಹಾಗೆಯೇ ಸೇವಿಸುವುದು ಮಾತ್ರವಲ್ಲದೆ ಅದರಿಂದಲೂ ಹಲವಾರು ರೀತಿಯ ತಿಂಡಿಗಳನ್ನು ಮಾಡಬಹುದು. ಅದರಲ್ಲಿ ಬಾಳೆಹಣ್ಣು ಹಲ್ವಾ ಕೂಡ ಒಂದಾಗಿದೆ. ಈ ಬಾಳೆಹಣ್ಣು ಹಲ್ವಾ ಮಾಡುವುದು ಹೇಗೆ ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ. ಬಾಳೆಹಣ್ಣಿನ ಹಲ್ವಾ ಮಾಡಲು ಬೇಕಾಗುವ ಪದಾರ್ಥಗಳು ಹೀಗಿದೆ.

ಬಾಳೆಹಣ್ಣು- ಐದು

ರವೆ- ಒಂದು ಕಪ್

ಹಾಲು- ಎರಡು ಕಪ್

ಸಕ್ಕರೆ-ಎರಡು ಕಪ್

ಉಪ್ಪು- ರುಚಿಗೆ ತಕ್ಕಂತೆ

ಕ್ರೀಮ್- ಅರ್ಧ ಕಪ್

ಗೋಡಂಬಿ- ಸ್ವಲ್ಪ

ಏಲಕ್ಕಿ ಪುಡಿ- ಸ್ವಲ್ಪ

ದ್ರಾಕ್ಷಿ- ಸ್ವಲ್ಪ

ಬಾದಾಮಿ- ಸ್ವಲ್ಪ

ತುಪ್ಪ- ಅರ್ಧ ಕಪ್

ಬಾಳೆ ಹಣ್ಣು ಹಲ್ವಾ ಮಾಡುವ ವಿಧಾನ ಹೀಗಿದೆ:

ಮೊದಲಿಗೆ ಮಾಗಿದ ಬಾಳೆಹಣ್ಣನ್ನು ತೆಗೆದುಕೊಂಡು ಸಿಪ್ಪೆ ತೆಗೆದಿಟ್ಟುಕೊಳ್ಳಬೇಕು. ಬಳಿಕ ತುಪ್ಪದಲ್ಲಿ ರವೆಯನ್ನು ಘಮ್ಮೆಂದು ಕಂದು ಬಣ್ಣಕ್ಕೆ ತಿರುಗುವ ತನಕ ಹುರಿದು ಅದನ್ನು ತೆಗೆದು ಬಾಳೆಹಣ್ಣಿನೊಂದಿಗೆ ಹಾಕಿ ಚೆನ್ನಾಗಿ ಕಲೆಸಬೇಕು. ಅದಕ್ಕೆ ತುಪ್ಪದಲ್ಲಿ ಹುರಿದ ಬಾದಾಮಿ, ಒಣದ್ರಾಕ್ಷಿ, ಗೋಡಂಬಿಯನ್ನು ಹಾಗೂ ರುಚಿಗೆ ತಕ್ಕಷ್ಟು ಉಪ್ಪನ್ನು ಹಾಕಿ ಎಲ್ಲವನ್ನು ಸೇರಿಸಿ ಮಿಕ್ಸ್ ಮಾಡಿ. ಆ ನಂತರ ಪಾತ್ರೆಯಲ್ಲಿ ಹಾಕಿ ಸಣ್ಣಗಿನ ಉರಿಯಲ್ಲಿ ಕಾಯಿಸಿ ಈ ವೇಳೆ ಹಾಲನ್ನು ಹಾಕಿ ತಿರುಗಿಸಿ. ಬಿಸಿಯಾಗುತ್ತಿದ್ದಂತೆಯೇ ಹಾಲು ಇಂಗುತ್ತದೆ. ಆಗ ಕ್ರೀಮ್ ಮತ್ತು ಸಕ್ಕರೆಯನ್ನು ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ ಅದರ ಮೇಲೆ ಏಲಕ್ಕಿ ಪುಡಿಯನ್ನು ಉದುರಿಸಿ. ನಂತರ ತೆಗೆದು ಅಗಲವಾದ ಪಾತ್ರೆಯಲ್ಲಿ ಹಾಕಿ ಒಂದೇ ಸಮನಾಗಿ ತಟ್ಟಿ. ನಂತರ ಅದನ್ನು ತಮಗೆ ಹೇಗೆ ಬೇಕೋ ಆ ರೀತಿ ಕಟ್ ಮಾಡಿ ಬಡಿಸಿ.

Desk

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

7 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

7 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

8 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

8 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

8 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

8 hours ago